August 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಿಯೋನ್ ಆಶ್ರಮದಲ್ಲಿ ಹೊಸವರ್ಷ ಸಂಭ್ರಮ ಹಾಗೂ ಸ್ನೇಹಭೋಜನ ಕಾರ್ಯಕ್ರಮ

ಗಂಡಿಬಾಗಿಲು: ಸಿಯೋನ್ ಆಶ್ರಮ ಟ್ರಸ್ಟ್ , ಗಂಡಿಬಾಗಿಲು ಇಲ್ಲಿ ಹೊಸವರ್ಷ ಸಂಭ್ರಮಾಚರಣೆ, ವಾಹನ ಚಾಲಕ-ಮಾಲಕರ ಸಂಘ ಹಾಗೂ ಊರ-ನೆರೆಕರೆಯ ಗ್ರಾಮಸ್ಥರಿಂದ 13ನೇ ವರ್ಷದ ಸ್ನೇಹಭೋಜನ ಕಾರ್ಯಕ್ರಮವನ್ನು ಜ.01 ರಂದು ಆಚರಿಸಲಾಯಿತು.

ಅನುಗ್ರಹ ಮೆಲೋಡಿಯಸ್ ಕಕ್ಕಿಂಜೆ ತಂಡದವರಿಂದ ಗಾನ ಸಂಗೀತ ಕಾರ್ಯಕ್ರಮ ಸುಗಮವಾಗಿ ನೆರವೇರಿತು.
ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿಯವರಾದ ಡಾ.ಯು.ಸಿ.ಪೌಲೋಸ್ ರವರು ಹೊಸ ವರ್ಷಕ್ಕೆ ಶುಭಾಶಯಗಳನ್ನು ಹಾರೈಸಿದರು. ಸಿಯೋನ್ ಆಶ್ರಮ ನಿವಾಸಿಗಳಿಗೋಸ್ಕರ ವಾಹನ ಚಾಲಕ-ಮಾಲಕರ ಸಂಘ ಹಾಗೂ ಊರ ನೆರೆಕರೆಯ ಗ್ರಾಮಸ್ಥರು ಪ್ರತೀ ವರ್ಷ ಜನವರಿ ಒಂದರಂದು ಒಂದು ದಿನದ ಅನ್ನದಾನ ನೀಡುತ್ತಿದ್ದು, ಈ ಕಾರ್ಯಕ್ರಮದ ಮುಂದಾಳತ್ವವನ್ನು ಸಂಸ್ಥೆಯ ಹಿತೈಷಿಗಳಾದ ಜೋಸೆಫ್ ಪರುವಕಾರನ್ ಮತ್ತು ಡೆನ್ನಿಯವರು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಟ್ರಸ್ಟೀ ಸದಸ್ಯರುಗಳು, ಕುಟುಂಬಸ್ಥರು, ಸಿಬ್ಬಂದಿವರ್ಗದವರು, ಆಶ್ರಮ ನಿವಾಸಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು. ಸಿಬ್ಬಂದಿ ದಿನವತಿ ಕಾರ್ಯಕ್ರಮ ನಿರೂಪಿಸಿದರು.

Related posts

ಮಹಿಳೆಯೊಂದಿಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ತೋಟತ್ತಾಡಿ ಪರಿಸರದಲ್ಲಿ ಚಿರತೆ ಓಡಾಟ, ಭಯಭೀತರಾದ ಗ್ರಾಮಸ್ಥರು: ಚಿರತೆ ಸೆರೆಹಿಡಿಯಲು ಸ್ಥಳೀಯರ ಸಹಕಾರದಲ್ಲಿ ಇಲಾಖೆ ವತಿಯಿಂದ ಬೋನು ಅಳವಡಿಕೆ

Suddi Udaya

ತೆಲುಗು ನಟ ಶ್ರೀಕಾಂತ್ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

Suddi Udaya

ಫೆ.28 -ಮಾ. 9: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ: ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ರಾಜ್ಯಮಟ್ಟದ ಬಾಲಕರ ಟೆಕ್ವಾಂಡೋ ಸ್ಪರ್ಧೆ: ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕೀರ್ತೇಶ್ ತೃತೀಯ ಸ್ಥಾನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜನ್ಮದಿನ ಆಚರಣೆ

Suddi Udaya
error: Content is protected !!