July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆಳ್ತಂಗಡಿ: 51ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ ಉದ್ಘಾಟನೆ

ಬೆಳ್ತಂಗಡಿ: ರಾಮನಗರ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಿಗಳ ನೇತೃತ್ವದಲ್ಲಿ 51ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವವು ಜ.3ರಂದು ನಡೆಯಿತು.

ಜ.3ರಂದು ಬೆಳಿಗ್ಗೆ ಗಣಹೋಮ, ಶ್ರೀ ಮಹಾಗಣಪತಿ ದೇವರಿಗೆ ಅಥರ್ವಶೀರ್ಷಾಭಿಷೇಕ, ಶಾಸ್ತಾರ ಸಹಸ್ರಕದಳಿಯಾಗ ಹಾಗೂ ಶ್ರೀ ಅಯ್ಯಪ್ಪ ದೇವರಿಗೆ ಏಕಾದಶ ರುದ್ರಾಭಿಷೇಕ ನಂತರ ಅಯ್ಯಪ್ಪ ಸ್ವಾಮಿಯ ದೀಪೋತ್ಸವದ ಉದ್ಘಾಟನೆಯನ್ನು ಬೆಂಗಳೂರು ಬೇಗೂರು ಶ್ರೀ ಚೆನ್ನಕೇಶವ ದೇವಸ್ಥಾನದ ಧರ್ಮದರ್ಶಿ ನಾರಾಯಣ ಬೇಗೂರು ರವರು ನೆರವೇರಿಸಿದರು.
ಬೆಳ್ತಂಗಡಿ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಯು., ಭಾಸ್ಕರ ಗುರುಸ್ವಾಮಿ, ಬೆಳ್ತಂಗಡಿ ಎಂ.ಆರ್.ಜೆ. ಎಂಟರ್‌ಪ್ರಸೈಸ್‌ನ ರಾಘವೇಂದ್ರ ಕಿಣಿ, ನಾರಾಯಣ ರಾವ್ ಮುಗುಳಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷ ಶರತ್‌ರಾಜ್, ಉಪಾಧ್ಯಕ್ಷೆ ಸುಶೀಲ ಶಂಕರ್ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಕೃಷ್ಣ ಕುಮಾರ್, ಜೊತೆ ಕಾರ್ಯದರ್ಶಿ ಸುರೇಶ್ ಶೆಟ್ಟಿ ಲಾಲ, ಟ್ರಸ್ಟ್‌ನ ಸದಸ್ಯರಾದ ಪ್ರಕಾಶ್ ಕೆ. ಗುರುಸ್ವಾಮಿ, ಪ್ರಕಾಶ್ ಶೆಟ್ಟಿ ಲಾಲ, ಸಂದೇಶ್ ಶೆಟ್ಟಿ ಲಾಲ, ದಿನೇಶ್ ಮಂಗಳಾದೇವಿ, ಪ್ರಸನ್ನ ಆಚಾರ್ಯ, ರಮೇಶ್ ಆಚಾರ್ಯ, ಹರೀಶ್ಚಂದ್ರ ಶೆಟ್ಟಿ ಲಾಲ, ಪ್ರಧಾನ ಅರ್ಚಕರಾದ ವಿಶ್ವನಾಥ್ ಭಟ್, ಟ್ರಸ್ಟ್‌ನ ವಿಶೇಷ ಆಹ್ವಾನಿತರಾದ ಸುಂದರ ಆಚಾರ್ಯ, ಆನಂದ ಗೌಡ, ಸದಾಶಿವ ಶೆಟ್ಟಿ, ಕಿಟ್ಟಣ್ಣ ಶೆಟ್ಟಿ, ಪ್ರಕಾಶ್ ಆಚಾರ್ಯ ಉಪಸ್ಥಿತರಿದ್ದರು.

ಮಧ್ಯಾಹ್ನ ಮಹಾಪೂಜೆ, ಪಲ್ಲಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ಶ್ರೀ ಮಹಾಗಣಪತಿ ದೇವರಿಗೆ ಮೂಡಪ್ಪಸೇವೆ, ದೀಪಾರಾಧನೆ, ರಾತ್ರಿ ಲಾಲ ವೆಂಕಟರಮಣ ದೇವಸ್ಥಾನದ ಬಳಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ಪಾಲಾಶ ಕೊಂಬೆಯ ಮೆರವಣಿಗೆ, ಶ್ರೀ ಶನೀಶ್ವರ ದೇವರಿಗೆ ಕಲ್ಪೋಕ್ತ ಪೂಜೆ, ಶ್ರೀ ಸತ್ಯದೇವತೆಗೆ ತಂಬಿಲ ಸೇವೆ, ಶ್ರೀ ಶಾಸ್ತಾರ ದೇವರ ಸನ್ನಿಧಾನದಲ್ಲಿ ರಂಗಪೂಜೆ, ಮಂತ್ರಾಕ್ಷತೆ, ಶ್ರೀ ಸತ್ಯದೇವತೆ ನೇಮೋತ್ಸವ ನಡೆಯಲಿದೆ.

ಜ.4ರಂದು ಬೆಳಿಗ್ಗೆ ಮಾಲಾಧಾರಿಗಳಿಂದ ಅಗ್ನಿಸೇವೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿರುವುದು.

Related posts

ನಾಲ್ಕೂರುನಲ್ಲಿ ಮನೆಗೆ ಧರೆ ಕುಸಿತ: ಬಿರುಕು ಬಿಟ್ಟ ಮನೆಯ ಗೋಡೆ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರಿಂದ ತೋಡಿನ ಹೂಳೆತ್ತುವ ಕಾರ್ಯಕ್ರಮ

Suddi Udaya

ಶಿಶಿಲ ಸ.ಉ. ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಕಾಮಗಾರಿ ಬಗ್ಗೆ ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಬದುಕು ಕಟ್ಟೋಣ ತಂಡದಿಂದ ಸಮಾಲೋಚನಾ ಸಭೆ

Suddi Udaya

ಬ್ರೈನ್ ಹ್ಯಾಮರೇಜ್ ನಿಂದ ಬಳಲುತ್ತಿರುವ ಸುಳ್ಯದ ಸಂಧ್ಯಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಕಲ್ಮಂಜ: ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ನೂತನ ಸಮಿತಿ ರಚನೆ

Suddi Udaya

ರಕ್ತೇಶ್ವರಿ ಪದವು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪೋಷಣಾ ಅಭಿಯಾನ

Suddi Udaya
error: Content is protected !!