July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಸುಲ್ಕೇರಿ-ಅಟ್ರಿಂಜೆ ಸೇತುವೆಯ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಮಧ್ಯಪ್ರದೇಶ ಸುನಿಲ್ ಅಸೌಖ್ಯದಿಂದ ಮೃತ್ಯು

ಬೆಳ್ತಂಗಡಿ: ಇಲ್ಲಿಯ ಸುಲ್ಕೇರಿ ಗ್ರಾಮದ ಸುಲ್ಕೇರಿ- ಅಟ್ರಿಂಜೆ ಸೇತುವೆಯ ಸೆಂಟ್ರಿಂಗ್ ಕಾಮಗಾರಿ ಕೆಲಸ ಮಾಡುತ್ತಿದ್ದ ಮಧ್ಯಪ್ರದೇಶ ಮೂಲದ ಸುನಿಲ್(19ವರ್ಷ) ಎಂಬಾತ ಅನಾರೋಗ್ಯದಿಂದ ಮೃತಪಟ್ಟ ಘಟನೆ ಜ.2ರಂದು ವರದಿಯಾಗಿದೆ.

ಅಟ್ರಿಂಜೆ ಸೇತುವೆ ಬಳಿ ತನ್ನ ಜೊತೆಗಾರರೊಂದಿಗೆ ಬಿಡಾರದಲ್ಲಿ ವಾಸ್ತವ್ಯವಿದ್ದ ಸುನೀಲ್ ಜ.1ರಿಂದ ಹೊಟ್ಟೆನೋವು ಹಾಗೂ ಗಂಟಲು ನೋವು ಎಂದು ಹೇಳಿ ಕೆಲಸಕ್ಕೆ ರಜೆ ಮಾಡಿ ಬಿಡಾರದಲ್ಲಿ ವಿಶ್ರಾಂತಿಯಲ್ಲಿದ್ದರು. ಜ. 2 ರಂದು ಮಧ್ಯಾಹ್ನ ಅನಾರೋಗ್ಯ ಉಲ್ಬಣಗೊಂಡಿದ್ದು, ಅವರ ಜೊತೆಗಿದ್ದ ಪುತ್ತೂರಿನ ರವಿಕುಮಾರ್ ಅವರು ಹರಿಸಿಂಗ್ ಹಾಗೂ ತೇಜ್ ಸಿಂಗ್ ಎಂಬವರೊಂದಿಗೆ ಮದ್ಯಾಹ್ನ ಸುಮಾರು 3 ಗಂಟೆಗೆ ಅಂಬ್ಯುಲೆನ್ಸ್ ವಾಹನದಲ್ಲಿ ಸುನಿಲ್‌ರನ್ನು ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತಂದಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕರಿಕಲ್ ಶಾಖಾ ಮಠದಲ್ಲಿ ಜು.21ರಿಂದ ಆ.30ರವರೆಗೆ ಕನ್ಯಾಡಿ ಶ್ರೀ ರಾಮಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರ ಚಾತುರ್ಮಾಸ್ಯ ವ್ರತ

Suddi Udaya

ಬಂದಾರು: ಬೈಪಾಡಿ ಭಗವಾನ್ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಶಾಂತಿಚಕ್ರ ಆರಾಧನೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಅಸೌಖ್ಯದಿಂದ ಕೊಕ್ರಾಡಿ ಯುವಕ ಸಾವು

Suddi Udaya

ಸಾವ್ಯ ಬೆಸ್ಟ್ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಸೇವಾಭಾರತಿಯಿಂದ ಈ ವರ್ಷದ “ಸೇವಾ ಶ್ರೇಷ್ಠ -2024” ಪುರಸ್ಕಾರ:

Suddi Udaya
error: Content is protected !!