September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜ.6: ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ. ಬೆಳ್ತಂಗಡಿಗೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ. ರವರು ಜ.5 ರಿಂದ 8ರವರೆಗೆ ದ.ಕ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಬೆಳ್ತಂಗಡಿಗೆ ಜನವರಿ 6 ರಂದು ಆಗಮಿಸಲಿದ್ದಾರೆ.

ಜನವರಿ 5 ರಂದು ರಾತ್ರಿ ಧರ್ಮಸ್ಥಳಕ್ಕೆ ಆಗಮಿಸಲಿರುವ ಅವರು ಜನವರಿ 6 ರಂದು ಬೆಳಗ್ಗೆ 10 ಘಂಟೆಗೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಸವಣಾಲು ಗ್ರಾಮದ ಹಿತ್ತಿಲಪೇಲ ಮಲೆಕುಡಿಯ ಸಮುದಾಯದ ಕಾಲನಿಗೆ ಭೇಟಿ ನೀಡಿ ಅಲ್ಲಿ ಜನರ ಕುಂದುಕೊರತೆಗಳನ್ನು ಆಲಿಸುತ್ತಾರೆ. 11 ಘಂಟೆಗೆ ಬೆಳ್ತಂಗಡಿ ನಗರದ ಮಂಜುನಾಥ ಕಲಾ ಭವನದ ಪಿನಾಕಿ ಸಭಾಂಗಣದಲ್ಲಿ ಪ.ಜಾತಿ/ಪಂಗಡಗಳ ಅಲೆಮಾರಿ ಬೈರ , ನಲಿಕೆ , ಪಂಬದ , ಮಲೆಕುಡಿಯ ಸಮುದಾಯಗಳ ಜನಸ್ಪಂದನ ಮತ್ತು ಕುಂದುಕೊರತೆಗಳ ಬಗ್ಗೆ ಸಭೆ ನಡೆಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ತಾಲೂಕಿನ ಬೈರ, ನಲಿಕೆ, ಪಂಬದ, ಮಲೆಕುಡಿಯ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಧನಂಜಯ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ವೇಣೂರು ಶ್ರೀ ಶಾರದಾ ಟ್ರಸ್ಟ್ ವತಿಯಿಂದ ವೇಣೂರು ಸ.ಪ್ರೌ. ಶಾಲಾ ಶಿಕ್ಷಕ ರವೀಂದ್ರ ಕೆ. ರವರಿಗೆ ಸನ್ಮಾನ

Suddi Udaya

ಕಾಶಿಪಟ್ಣ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಧರ್ಮಸ್ಥಳ: ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ

Suddi Udaya

ವಿಟಿಯು ಅಂತರ್ ಕಾಲೇಜು ಕ್ರಿಕೆಟ್ ಟೂರ್ನಿ : ಉಜಿರೆಯ ಎಸ್.ಡಿ.ಎಂ ಗೆ ಪ್ರಶಸ್ತಿ

Suddi Udaya

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜಿನಲ್ಲಿ ಹಸಿರು ಹೊನ್ನು ಕಾರ್ಯಕ್ರಮ

Suddi Udaya

ಮಿಜಾರುಗುತ್ತು ಆನಂದ ಆಳ್ವ ರವರ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!