July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜ.6: ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ. ಬೆಳ್ತಂಗಡಿಗೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ. ರವರು ಜ.5 ರಿಂದ 8ರವರೆಗೆ ದ.ಕ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಬೆಳ್ತಂಗಡಿಗೆ ಜನವರಿ 6 ರಂದು ಆಗಮಿಸಲಿದ್ದಾರೆ.

ಜನವರಿ 5 ರಂದು ರಾತ್ರಿ ಧರ್ಮಸ್ಥಳಕ್ಕೆ ಆಗಮಿಸಲಿರುವ ಅವರು ಜನವರಿ 6 ರಂದು ಬೆಳಗ್ಗೆ 10 ಘಂಟೆಗೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಸವಣಾಲು ಗ್ರಾಮದ ಹಿತ್ತಿಲಪೇಲ ಮಲೆಕುಡಿಯ ಸಮುದಾಯದ ಕಾಲನಿಗೆ ಭೇಟಿ ನೀಡಿ ಅಲ್ಲಿ ಜನರ ಕುಂದುಕೊರತೆಗಳನ್ನು ಆಲಿಸುತ್ತಾರೆ. 11 ಘಂಟೆಗೆ ಬೆಳ್ತಂಗಡಿ ನಗರದ ಮಂಜುನಾಥ ಕಲಾ ಭವನದ ಪಿನಾಕಿ ಸಭಾಂಗಣದಲ್ಲಿ ಪ.ಜಾತಿ/ಪಂಗಡಗಳ ಅಲೆಮಾರಿ ಬೈರ , ನಲಿಕೆ , ಪಂಬದ , ಮಲೆಕುಡಿಯ ಸಮುದಾಯಗಳ ಜನಸ್ಪಂದನ ಮತ್ತು ಕುಂದುಕೊರತೆಗಳ ಬಗ್ಗೆ ಸಭೆ ನಡೆಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ತಾಲೂಕಿನ ಬೈರ, ನಲಿಕೆ, ಪಂಬದ, ಮಲೆಕುಡಿಯ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಧನಂಜಯ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆಯಿಂದ ಸೋಮಂತಡ್ಕ ಪ್ರಯಾಣ ಸಂದರ್ಭ ಕಳೆದು ಹೋದ ರೂ.2. 80 ಲಕ್ಷ ಹಣವಿದ್ದ ಬ್ಯಾಗ್: ಕೊರಗಜ್ಜನ ಮೊರೆ ಹೋದ ಬ್ಯಾಗ್ ಕಳೆದು ಕೊಂಡ‌ ಲತೇಶ್ ಉಜಿರೆ

Suddi Udaya

ದ.ಕ. ಜಿಲ್ಲಾ ಪಶುವೈದ್ಯಕೀಯ ಪರೀಕ್ಷಕರ ಸಂಘದಿಂದ ನಿವೃತ್ತಿಗೊಂಡ ಡಾ ಕೆ. ಜಯಕೀರ್ತಿ ಜೈನ್ ರಿಗೆ ಸನ್ಮಾನ

Suddi Udaya

ಅಕ್ರಮ ಮರಳು ಸಾಗಾಟ: ವಾಹನ ಚಾಲಕನಿಗೆ ನ್ಯಾಯಾಂಗ ಬಂಧನ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: MIFSE ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜಿನ ಸಹಯೋಗದಲ್ಲಿ ಡಿಪ್ಲೋಮಾ ಹಾಗೂ ವೃತ್ತಿಪರ ಶಿಕ್ಷಣದ ತರಗತಿಗಳ ಆರಂಭೋತ್ಸವ

Suddi Udaya

ರುಡ್ ಸೆಟ್ ಸಂಸ್ಥೆಯಲ್ಲಿ ಗೃಹೋಪಯೋಗಿ ವಿದ್ಯುತ್‌ ಉಪಕರಣ ಸೇವಾ ಉದ್ಯಮಿ ತರಬೇತಿಯ ಸಮಾರೋಪ

Suddi Udaya

ಮುಂಡಾಜೆ: ಮಲ್ಲಡ್ಕ ಸ.ಕಿ.ಪ್ರಾ. ಶಾಲೆಯಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!