25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಖ್ಯಾತ ವಕೀಲ ದೊರೆರಾಜು

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹೈ ಕೋರ್ಟ್ ನ ಹಿರಿಯ ನ್ಯಾಯವಾದಿ ದೊರೆರಾಜು ಅವರು ಜ.3ರಂದು ಹಾಜರಾಗಿದ್ದಾರೆ.

ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ 39/25 ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಜಯಂತ್. ಟಿ ತಂಡಕ್ಕೆ ವಾದ ಮಂಡಿಸಲು ದೊರೆರಾಜು ಅವರು ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ್ದಾರೆ.

ಧರ್ಮಸ್ಥಳ ಪ್ರಕರಣದಲ್ಲಿ ಎಸ್.ಐ.ಟಿ ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದು ಆವರದಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರನ್ನು ಆರೋಪಿಗಳಾಗಿಸಲು ಅನುಮತಿ ನೀಡುವಂತೆ ಕೇಳಿಕೊಂಡಿದ್ದು ಇದರ ಬಗ್ಗೆ ವಿಚಾರಣೆ ನಡೆಯುತ್ತಿದೆ. ಈ ಪ್ರಕರಣದಲ್ಲಿ ಜಯಂತ್ ಟಿ ಮಹೇಶ್ ಶೆಟ್ಟಿ ಹಾಗೂ ಇತರರ ಪರವಾಗಿ ವಾದ ಮಂಡಿಸಲು ಇದೀಗ ಹಿರಿಯ ನ್ಯಾಯವಾದಿ ದೊರೆ ರಾಜು ಅವರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಗಿದ್ದಾರೆ.

ಈ ಹಿಂದೆ ಎಸ್.ಐ.ಟಿ ಸಲ್ಲಿಸಿದ್ದ ವರದಿಯ ಪ್ರತಿಯನ್ನು ಪಡೆಯಲು ಜಯಂತ್ ಟಿ ಅವರ ಪರವಾಗಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದ ದೊರೆ ರಾಜು ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿ ಎಸ್.ಐ.ಟಿ ವರದಿಯ ಪ್ರತಿಯನ್ನು ಪಡೆದಿದ್ದರು. ಇದೀಗ ಇದರ ಆಧಾರದ ಮೇಲೆ ಅವರು ನ್ಯಾಯಾಲಯದ ಮುಂದೆ ವಾದ ಮಂಡಿಸಲಿದ್ದಾರೆ.

Related posts

ನಕಲಿ ಸಹಿ ಮಾಡಿ ಅಕ್ಷರ ದಾಸೋಹ ಮತ್ತು ಎಸ್.ಎಸ್.ಎ. ಖಾತೆಯ ಹಣ ಡ್ರಾ; ಮುಖ್ಯ ಶಿಕ್ಷಕಿಯ ವಿರುದ್ಧ ಎಸ್.ಡಿ.ಎಂ.ಸಿ ಅಧ್ಯಕ್ಷೆ ದೂರು: ಪೋಜ೯ರಿ ಸಹಿ ಮಾಡಿ ಶಾಲೆಯ ಖಾತೆಯಿಂದ ಯಾವತ್ತೂ ಹಣವನ್ನು ಡ್ರಾ ಮಾಡಿರುವುದಿಲ್ಲ : ಮುಖ್ಯ ಶಿಕ್ಷಕಿ ಸ್ಪಷ್ಟನೆ

Suddi Udaya

ನೆರಿಯ ಸೆಂಟ್ ತೋಮಸ್ ಪ್ರೌಢಶಾಲೆ ಶೇ 100 ರ ಸಾಧನೆಗೆ ಸನ್ಮಾನ

Suddi Udaya

ನಾರಾವಿ ಸೊಸೈಟಿಯ ಆರ್ಥಿಕ ಸಹಕಾರದಿಂದ ರಿಕ್ಷಾ ನಿಲ್ದಾಣ ನಿರ್ಮಾಣ: ಅಧ್ಯಕ್ಷ ಸುಧಾಕರ ಭಂಡಾರಿಯವರಿಂದ ಉದ್ಘಾಟನೆ, ಸಂಭ್ರಮದ ವಾಹನ ಪೂಜೆ

Suddi Udaya

ಯುವ ಕಾಂಗ್ರೆಸ್ ದಕ ಜಿಲ್ಲಾ ಸಮಿತಿಯಿಂದ ಮತಗಳ್ಳತನ ವಿರುದ್ದ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಮಂಗಳೂರಿನಲ್ಲಿ ಬ್ರಹತ್ ಪಂಜಿನ ಮೆರವಣಿಗೆ

Suddi Udaya

ನಾಳ: ಶಿವ ದುರ್ಗಾ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಶುಭಾರಂಭ

Suddi Udaya

ಬೆಳಾಲು: ಪೆರಿಯಡ್ಕ ಶಾಲಾ ರಜತ ಮಹೋತ್ಸವ: ಪ್ರವೇಶ ದ್ವಾರ ಲೋಕಾರ್ಪಣೆ- ಸಭಾ ಕಾರ್ಯಕ್ರಮ

Suddi Udaya
error: Content is protected !!