22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ನಿಡ್ಲೆ: ಅಗ್ರಿಲೀಫ್ ಕುಟುಂಬದ ವತಿಯಿಂದ ರೈತರ ಜೊತೆ ವಿಶ್ವದ ಕಡೆ ರೈತ-ಸಂಸ್ಥೆ ಸಮನ್ವಯ ಸಭೆ

ನಿಡ್ಲೆ: ಅಗ್ರಿಲೀಫ್ ಕುಟುಂಬದ ವತಿಯಿಂದ ರೈತರ ಜೊತೆ ವಿಶ್ವದ ಕಡೆ 2026 ರೈತ-ಸಂಸ್ಥೆ ಸಮನ್ವಯ ಸಭೆಯು ನಿಡ್ಲೆ ಹೋಟೆಲ್ ಆದಿತ್ಯ ವ್ಯೂನ ಪಂಚವಟಿ ಹಾಲ್‌ನಲ್ಲಿ ಜ.3ರಂದು ನಡೆಯಿತು.

ಗೌರವಾನ್ವಿತ ಅತಿಥಿಯಾಗಿ ಅಡಿಕೆ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾದ ಶ್ರೀಪಡ್ರೆ ಆಗಮಿಸಿದ್ದರು

ಬೆಳ್ತಂಗಡಿ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಕೆಎನ್ ಚಂದ್ರಶೇಖರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ರಬ್ಬರ್ ಸೊಸೈಟಿ ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಗೌರವ ಉಪಸ್ಥಿತರಿದ್ದರು.

ವಿಶೇಷ ಆಹ್ವಾನಿತರಾಗಿ ಗ್ರಾಮ ಪಂಚಾಯತ್‌ನ ಅಧ್ಯಕ್ಷರು ಮತ್ತು ಸದಸ್ಯರು, ಹಾಲು ಉತ್ಪಾದಕರ ಸಹಕಾರಿ ಸಂಘದ ಪ್ರತಿನಿಧಿಗಳು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪ್ರತಿನಿಧಿಗಳು, ಹಾಳೆ ಸಂಗ್ರಾಹಕರು, ಗ್ರಾಮಸ್ಥರು, ಸಿಬಂದಿ ವರ್ಗದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಹಾಳೆ ಸಂಗ್ರಾಹಕರಾದ ಲೋಕಯ್ಯ ಗೌಡ ಕಂಗಿತ್ತಿಲು ಕೊಯ್ಯೂರು, ಪ್ರೇಮ ಕರಾಯ, ನಂದಿನಿ ದೇವರಮಾರು, ಬಾಬು ಸುಲ್ಯೊಡಿ, ನಿರಂಜನ್ ಗೌಡ ನಡುಮಜಲು ಬಂದಾರುರವರನ್ನು ಸನ್ಮಾನಿಸಲಾಯಿತು.

ಸಂಸ್ಥೆಯ ಸ್ಥಾಪಕರಾದ ಅವಿನಾಶ್ ರಾವ್ ಪ್ರಾಸ್ತಾವಿಕದೊಂದಿಗೆ, ಸ್ವಾಗತಿಸಿದರು. ಸಂಸ್ಥೆಯ ಸಿ ಎಸ್ಒ ಪೃಥ್ವಿ ಕಾರಿಂಜ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಸಹ ಸ್ಥಾಪಕ ಅತಿಶಯ ಜೈನ್ ಧನ್ಯವಾದವಿತ್ತರು.

Related posts

ಬೆಳ್ತಂಗಡಿ : ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ಅಥ್ಲೆಟಿಕ್ ಕ್ರೀಡಾಕೂಟ: ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾರಿಗೆ ಬೆಳ್ಳಿ ಪದಕ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ಮಕ್ಕಳ ರೆಡ್ ಕಲರ್ ಸಂಭ್ರಮ

Suddi Udaya

ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ: ಪೆರ್ಲ-ಬೈಪಾಡಿ ಸ.ಪ್ರೌ.ಶಾಲೆಯ ವಿದ್ಯಾರ್ಥಿನಿ ಕು|ನಿತ್ಯಶ್ರೀ ಖಂಡಿಗ 3 ನೇ ಸಮಾಧಾನಕರ ಪ್ರಶಸ್ತಿ

Suddi Udaya

ಮಡಂತ್ಯಾರು: ಬಂಗೇರಕಟ್ಟೆ ನೆತ್ತರ ರಸ್ತೆಯ ದುರಸ್ತಿಯ ಬಗ್ಗೆ ಕಾಲ್ನಡಿಗೆಯಲ್ಲಿ ಪ್ರತಿಭಟನೆ

Suddi Udaya
error: Content is protected !!