22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭೀಮಾ ಕೋರೆಗಾಂವ್ ವಿಜಯೋತ್ಸವದ ದಿನಾಚರಣೆ ಪ್ರಯುಕ್ತ ಸ್ವಾಭಿಮಾನಿ ದಿಗ್ವಿಜಯ ಹಾಗೂ ಬಿವಿಎಫ್ ಪದಗ್ರಹಣ

ಬೆಳ್ತಂಗಡಿ: ತಾಲೂಕಿನ ಕಣಿಯೂರು, ಬಂದಾರು, ಮೊಗ್ರು ಹಾಗೂ ಕೊಯ್ಯೂರು ಗ್ರಾಮಗಳ ಬಂಧುಗಳು ಬಂದಾರು ಗ್ರಾಮದ ಸಿದ್ಧಾರ್ಥ ಕಾಲೋನಿ ಪುನರಡ್ಕದಲ್ಲಿ ೨೦೮ನೇ ಭೀಮಾ ಕೋರೆಗಾಂವ್ ವಿಜಯೋತ್ಸವದ ದಿನಾಚರಣೆ ಪ್ರಯಕ್ತ ಸ್ವಾಭಿಮಾನಿ ದಿಗ್ವಿಜಯ ಹಾಗೂ ಬಿವಿಎಫ್ ಪದಗ್ರಹಣ ಕಾರ್ಯಕ್ರಮ ಜ.1ರಂದು ನಡೆಯಿತು.

ಬಹುಜನ ವಾಲೆಂಟಿಯರ್ ಫೋರ್ಸ್ ಬೆಳ್ತಂಗಡಿ ನೇತೃತ್ವ ವಹಿಸಿ ನಡೆದ ಈ ಕಾರ್ಯಕ್ರಮದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಈ ಪ್ರಪಂಚಕ್ಕೆ ಪರಿಚಯಿಸಿದ 1818 ಜನವರಿ 1 ಕೋರೆಗಾಂವ್ ಕದನದ ಇತಿಹಾಸವನ್ನು ತಿಳಿ ಹೇಳುವ ಮೂಲಕ ಆಚರಿಸಲಾಯಿತು.

ಮುಖ್ಯ ಅತಿಥಿ ಪಿ.ಎಸ್. ವೆಂಕಪ್ಪ ಮಾತನಾಡಿ ಕೋರೆಗಾಂವ್ ಕದನದ ಸ್ವಾಭಿಮಾನ ದಿಗ್ವಿಜಯದ ಪರಿಣಾಮ ಈ ದೇಶದಲ್ಲಿ ಸಾರ್ವತ್ರಿಕ ಶಿಕ್ಷಣಕ್ಕೆ ನಾಂದಿಯಾಯಿತು. ಆ ಮೂಲಕ ಶಿಕ್ಷಣದ ಅವಕಾಶ ಪಡೆದಂತಹ ಅಂಬೇಡ್ಕರ್ ರವರು ಈ ದೇಶದ ಸಂವಿಧಾನ ರಚಿಸಿ ಸರ್ವರಿಗೂ ಸಮತೆ, ಸೋದರತೆ, ಸ್ವತಂತ್ರ ಜೀವನ ಕಾನೂನುಬದ್ಧಗೊಳಿಸಿದರು ಎಂದರು.

ಕಾರ್ಯಕ್ರಮದಲ್ಲಿ ಬಹುಜನ ಚಳುವಳಿಯ ಪ್ರಮುಖರಾದ ಎಂ ಬಾಬು ಬೆಳಾಲು, ಸಂಜೀವ ನೀರಾಡಿ, ಅಣ್ಣು ಸಾಧನ ಹಾಗೂ ಕರಿಯಪ್ಪ ಬೆಳಾಲು, ಸಿದ್ಧಾರ್ಥ ಕಾಲೋನಿಯ ಹಿರಿಯರಾದ ಗೋಪಾಲ ಭಾಗವಹಿಸಿದ್ದರು.

ಬಿವಿಎಫ್‌ನ ಬಂದಾರು, ಕೊಯ್ಯೂರು, ಕಣಿಯೂರು ಗ್ರಾಮದ ಜವಾಬ್ದಾರಿಗಳನ್ನು ಹಂಚಿಕೊಂಡ ನೂತನ ಪದಾಧಿಕಾರಿಗಳನ್ನು ಪರಿಚಯಿಸಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಪಿ.ಎಸ್. ಶ್ರೀನಿವಾಸ್, ಕೃಷ್ಣಪ್ಪ ಪಿ., ಪೂವಪ್ಪ ಬೆಳಾಲು, ಪ್ರವೀಣ್, ಲೋಹಿತ್, ಅನಂತ್ ಪಿ, ರಮೇಶ್ ಉಮಿಯ, ನವೀನ್, ಗಣೇಶ್ ಕೆ, ಪ್ರಶಾಂತ್, ಕೆ. ವೀರಪ್ಪ, ಕೃಷ್ಣ, ರಘು, ಸುರೇಶ್ ನೀರಾಡಿ, ಬಿ ಕೆ ಸಂಜೀವ, ಸತೀಶ್, ಸುರೇಂದ್ರ, ಪ್ರಕಾಶ್, ವಸಂತ್, ಸಿದ್ದಾರ್ಥ ಮತ್ತು ಮಹಿಳಾ ಘಟಕದ ಅಧ್ಯಕ್ಷರು, ಉಪಾಧ್ಯಕ್ಷರು ಉಪಸ್ಥಿತರಿದ್ದರು.

ಬಿವಿಎಫ್‌ನ ಲೋಕೇಶ್ ನೀರಾಡಿ ಸಂವಿಧಾನದ ಪೀಠಿಕೆ ಬೋಧಿಸಿ, ರಮೇಶ್ ಬಿ.ಎಲ್. ಕಾರ್ಯಕ್ರಮ ನಿರೂಪಿಸಿದರು. ದಿನೇಶ್ ಪಿ. ಸ್ವಾಗತಿಸಿದರು, ಪ್ರವೀಣ್ ಪುನರಡ್ಕ ಧನ್ಯವಾದವಿತ್ತರು.

Related posts

ನಿಟ್ಟಡೆ: ಕುಂಭಶ್ರೀ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ಸಂಕಲ್ಪ-2025’ ಓರಿಯಂಟೇಶನ್

Suddi Udaya

ಸವಣಾಲು: ಹೇರಾಜೆ ನಿವಾಸಿ ರಘು ಶೆಟ್ಟಿ ನಿಧನ

Suddi Udaya

ಚಾರ್ಮಾಡಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಸ್ಥಾಪನ ದಿನ ಆಚರಣೆ

Suddi Udaya

ಗುರುವಾಯನಕೆರೆ: ಶ್ರೀ ಭ್ರಾಮರಿ ಕುಣಿತ ಭಜನಾ ತಂಡದ ಎರಡನೇ ವರ್ಷದ ‘ಭಕ್ತಿಹೆಜ್ಜೆ’ ಕಾರ್ಯಕ್ರಮ

Suddi Udaya

ಇಂದಬೆಟ್ಟು: ಹೆಬ್ಬಾವನ್ನು ಬೇಟೆಯಾಡಿದ ಕಾಳಿಂಗ ಸರ್ಪ: ಸ್ನೇಕ್ ಅಶೋಕ್ ರವರಿಂದ ಹೆಬ್ಬಾವು ರಕ್ಷಣೆ

Suddi Udaya

ವೇಣೂರು: ಬಜಿರೆ “ಸುರಭಿ” ಮನೆಯ ಬಿ. ರತ್ನವರ್ಮ ಇಂದ್ರ ನಿಧನ

Suddi Udaya
error: Content is protected !!