September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಸುಲ್ಕೇರಿ-ಅಟ್ರಿಂಜೆ ಸೇತುವೆಯ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಮಧ್ಯಪ್ರದೇಶ ಸುನಿಲ್ ಅಸೌಖ್ಯದಿಂದ ಮೃತ್ಯು

ಬೆಳ್ತಂಗಡಿ: ಇಲ್ಲಿಯ ಸುಲ್ಕೇರಿ ಗ್ರಾಮದ ಸುಲ್ಕೇರಿ- ಅಟ್ರಿಂಜೆ ಸೇತುವೆಯ ಸೆಂಟ್ರಿಂಗ್ ಕಾಮಗಾರಿ ಕೆಲಸ ಮಾಡುತ್ತಿದ್ದ ಮಧ್ಯಪ್ರದೇಶ ಮೂಲದ ಸುನಿಲ್(19ವರ್ಷ) ಎಂಬಾತ ಅನಾರೋಗ್ಯದಿಂದ ಮೃತಪಟ್ಟ ಘಟನೆ ಜ.2ರಂದು ವರದಿಯಾಗಿದೆ.

ಅಟ್ರಿಂಜೆ ಸೇತುವೆ ಬಳಿ ತನ್ನ ಜೊತೆಗಾರರೊಂದಿಗೆ ಬಿಡಾರದಲ್ಲಿ ವಾಸ್ತವ್ಯವಿದ್ದ ಸುನೀಲ್ ಜ.1ರಿಂದ ಹೊಟ್ಟೆನೋವು ಹಾಗೂ ಗಂಟಲು ನೋವು ಎಂದು ಹೇಳಿ ಕೆಲಸಕ್ಕೆ ರಜೆ ಮಾಡಿ ಬಿಡಾರದಲ್ಲಿ ವಿಶ್ರಾಂತಿಯಲ್ಲಿದ್ದರು. ಜ. 2 ರಂದು ಮಧ್ಯಾಹ್ನ ಅನಾರೋಗ್ಯ ಉಲ್ಬಣಗೊಂಡಿದ್ದು, ಅವರ ಜೊತೆಗಿದ್ದ ಪುತ್ತೂರಿನ ರವಿಕುಮಾರ್ ಅವರು ಹರಿಸಿಂಗ್ ಹಾಗೂ ತೇಜ್ ಸಿಂಗ್ ಎಂಬವರೊಂದಿಗೆ ಮದ್ಯಾಹ್ನ ಸುಮಾರು 3 ಗಂಟೆಗೆ ಅಂಬ್ಯುಲೆನ್ಸ್ ವಾಹನದಲ್ಲಿ ಸುನಿಲ್‌ರನ್ನು ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತಂದಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕಬಡ್ಡಿ ಪಂದ್ಯಾಟ: ವೇಣೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

Suddi Udaya

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯ ನವೀಕರಿಸಿದ ಶಾಲಾ ಕಟ್ಟಡ ಹಸ್ತಾಂತರ

Suddi Udaya

ದಯಾ ವಿಶೇಷ ಶಾಲೆಯಲ್ಲಿ ದಿ.ಕೆ. ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ ಆಚರಣೆ

Suddi Udaya

ಎಸ್.ಎಮ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಕರ್ನಾಟಕ ಜಂಇಯ್ಯತುಲ್ ಉಲಮಾ ಮುಶಾವರ ಸದಸ್ಯ ಪಿ.ಕೆ ಮುಹಮ್ಮದ್ ಮದನಿ ಅಳಕ್ಕೆ ಉಸ್ತಾದರಿಗೆ ಸನ್ಮಾನ

Suddi Udaya

ನಾಳ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ

Suddi Udaya
error: Content is protected !!