24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಕಲ್ಮಂಜ ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಚಿಣ್ಣರ ಉತ್ಸವ

ಕಲ್ಮಂಜ: ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮದ ಚಿಣ್ಣರ ಉತ್ಸವವು ಜ.3ರಂದು ಜ್ಞಾನದೀಪ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಜಿರೆ ಜನಾರ್ಧನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ವಹಿಸಿದ್ದರು.

ವೇದಿಕೆಯಲ್ಲಿ ವಿಧಾನಸಭಾ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಶತಮಾನೋತ್ಸವ ಸಮಿತಿ ಅಧ್ಯಕ್ಷ ಪ್ರವೀಣ್ ಫೆರ್ನಾಂಡಿಸ್, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಉದ್ಯಮಿ ಪ್ರಭಾಕರ ಕ0ದೂರು, ಉಜಿರೆ ಹಳೆಪೇಟೆ ಜುಮ್ಮ ಮಸೀದಿ ಅಧ್ಯಕ್ಷ ಯು.ಎಚ್. ಅಬೂಬಕ್ಕರ್, ಕಲ್ಮಂಜ ಸರಕಾರಿ ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ಪೂರ್ಣಿಮಾ, ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಚಿದಾನಂದ ಮಂಟಮೆ, ಹಳೆ ವಿದ್ಯಾರ್ಥಿ ಸಮಿತಿ ಅಧ್ಯಕ್ಷ ಹಮೀದ್, ಮುಖ್ಯೋಪಾಧ್ಯಾಯಿನಿ ಮಂಜುಳಾ ಉಪಸ್ಥಿತರಿದ್ದರು.

ಗಣ್ಯರಿಗೆ ಗೌರವ: ಕಾರ್ಯಕ್ರಮದಲ್ಲಿ ಉಜಿರೆ ಜನಾರ್ಧನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ,ವಿಧಾನಸಭಾ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಉದ್ಯಮಿ ಪ್ರಭಾಕರ ಕ0ದೂರು, ಉಜಿರೆ ಹಳೆಪೇಟೆ ಜುಮ್ಮ ಮಸೀದಿ ಅಧ್ಯಕ್ಷ ಯು.ಎಚ್. ಅಬೂಬಕ್ಕರ್ ರವರನ್ನು ಗೌರವಿಸಲಾಯಿತು.

ಶತಮಾನೋತ್ಸವ ಸಮಿತಿ ಗೌರವಾಧ್ಯಕ್ಷ ಮಂಜುನಾಥ ಶೆಟ್ಟಿ ಪ್ರಸ್ತಾವಿಸಿ, ಸ್ವಾಗತಿಸಿದರು. ಮುಖ್ಯೋಪಾಧ್ಯಾಯಿನಿ ಮಂಜುಳಾ ವರದಿ ವಾಚಿಸಿದರು. ಶತಮಾನೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬ್ರಾಯ ಅಕ್ಷಯನಗರ ನಿರೂಪಿಸಿದರು.

Related posts

ಶ್ರೀ ಸ್ಟಾರ್ ಯುವಕ ಹಾಗೂ ಮಹಿಳಾ ಮಂಡಲದ ವತಿಯಿಂದ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ಹೃದಯಾಘಾತದಿಂದ ನಿಧನ

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾಮಠ ಕಾವೂರು ಮಂಗಳೂರು ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್‌ನ ಲೋಗೋ ಅನಾವರಣ

Suddi Udaya

ನ.16-17: ಉಜಿರೆಯಲ್ಲಿ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ತೋಟತ್ತಾಡಿ : ಡಿ. ಮಜಲು ನಿವಾಸಿ ಪುರಂದರ ಕೋಟ್ಯಾನ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!