July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ನಿಡ್ಲೆ: ಅಗ್ರಿಲೀಫ್ ಕುಟುಂಬದ ವತಿಯಿಂದ ರೈತರ ಜೊತೆ ವಿಶ್ವದ ಕಡೆ ರೈತ-ಸಂಸ್ಥೆ ಸಮನ್ವಯ ಸಭೆ

ನಿಡ್ಲೆ: ಅಗ್ರಿಲೀಫ್ ಕುಟುಂಬದ ವತಿಯಿಂದ ರೈತರ ಜೊತೆ ವಿಶ್ವದ ಕಡೆ 2026 ರೈತ-ಸಂಸ್ಥೆ ಸಮನ್ವಯ ಸಭೆಯು ನಿಡ್ಲೆ ಹೋಟೆಲ್ ಆದಿತ್ಯ ವ್ಯೂನ ಪಂಚವಟಿ ಹಾಲ್‌ನಲ್ಲಿ ಜ.3ರಂದು ನಡೆಯಿತು.

ಗೌರವಾನ್ವಿತ ಅತಿಥಿಯಾಗಿ ಅಡಿಕೆ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾದ ಶ್ರೀಪಡ್ರೆ ಆಗಮಿಸಿದ್ದರು

ಬೆಳ್ತಂಗಡಿ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಕೆಎನ್ ಚಂದ್ರಶೇಖರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ರಬ್ಬರ್ ಸೊಸೈಟಿ ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಗೌರವ ಉಪಸ್ಥಿತರಿದ್ದರು.

ವಿಶೇಷ ಆಹ್ವಾನಿತರಾಗಿ ಗ್ರಾಮ ಪಂಚಾಯತ್‌ನ ಅಧ್ಯಕ್ಷರು ಮತ್ತು ಸದಸ್ಯರು, ಹಾಲು ಉತ್ಪಾದಕರ ಸಹಕಾರಿ ಸಂಘದ ಪ್ರತಿನಿಧಿಗಳು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪ್ರತಿನಿಧಿಗಳು, ಹಾಳೆ ಸಂಗ್ರಾಹಕರು, ಗ್ರಾಮಸ್ಥರು, ಸಿಬಂದಿ ವರ್ಗದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಹಾಳೆ ಸಂಗ್ರಾಹಕರಾದ ಲೋಕಯ್ಯ ಗೌಡ ಕಂಗಿತ್ತಿಲು ಕೊಯ್ಯೂರು, ಪ್ರೇಮ ಕರಾಯ, ನಂದಿನಿ ದೇವರಮಾರು, ಬಾಬು ಸುಲ್ಯೊಡಿ, ನಿರಂಜನ್ ಗೌಡ ನಡುಮಜಲು ಬಂದಾರುರವರನ್ನು ಸನ್ಮಾನಿಸಲಾಯಿತು.

ಸಂಸ್ಥೆಯ ಸ್ಥಾಪಕರಾದ ಅವಿನಾಶ್ ರಾವ್ ಪ್ರಾಸ್ತಾವಿಕದೊಂದಿಗೆ, ಸ್ವಾಗತಿಸಿದರು. ಸಂಸ್ಥೆಯ ಸಿ ಎಸ್ಒ ಪೃಥ್ವಿ ಕಾರಿಂಜ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಸಹ ಸ್ಥಾಪಕ ಅತಿಶಯ ಜೈನ್ ಧನ್ಯವಾದವಿತ್ತರು.

Related posts

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ಕರಿಮಣೇಲು: ರಾಮಣ್ಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತೆ

Suddi Udaya

ಮೇ.13: ಸುರತ್ಕಲ್ ಎನ್‌ಐಟಿಕೆಯಲ್ಲಿ ಬೆಳ್ತಂಗಡಿ ಸೇರಿದಂತೆ ದ.ಕ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ: ಸ್ಟ್ರಾಂಗ್ ರೂಮ್‌ಗೆ ಕೇಂದ್ರೀಯ ಅರೆಸೇನಾ ಪಡೆಯಿಂದ ಬಿಗು ಭದ್ರತೆ

Suddi Udaya

ಪೆರಿಂಜೆ ಸ. ಹಿ. ಪ್ರಾ. ಶಾಲೆಯ ನಿವೃತ್ತ ಶಿಕ್ಷಕಿ ವಸಂತಿ ಕೆ. ರವರಿಗೆ ಬೀಳ್ಕೊಡುಗೆ

Suddi Udaya

ಜೂ.6: ಕಕ್ಕಿಂಜೆ ವಿದ್ಯುತ್ ನಿಲುಗಡೆ

Suddi Udaya
error: Content is protected !!