23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ನಿಡ್ಲೆ: ಅಗ್ರಿಲೀಫ್ ಕುಟುಂಬದ ವತಿಯಿಂದ ರೈತರ ಜೊತೆ ವಿಶ್ವದ ಕಡೆ ರೈತ-ಸಂಸ್ಥೆ ಸಮನ್ವಯ ಸಭೆ

ನಿಡ್ಲೆ: ಅಗ್ರಿಲೀಫ್ ಕುಟುಂಬದ ವತಿಯಿಂದ ರೈತರ ಜೊತೆ ವಿಶ್ವದ ಕಡೆ 2026 ರೈತ-ಸಂಸ್ಥೆ ಸಮನ್ವಯ ಸಭೆಯು ನಿಡ್ಲೆ ಹೋಟೆಲ್ ಆದಿತ್ಯ ವ್ಯೂನ ಪಂಚವಟಿ ಹಾಲ್‌ನಲ್ಲಿ ಜ.3ರಂದು ನಡೆಯಿತು.

ಗೌರವಾನ್ವಿತ ಅತಿಥಿಯಾಗಿ ಅಡಿಕೆ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾದ ಶ್ರೀಪಡ್ರೆ ಆಗಮಿಸಿದ್ದರು

ಬೆಳ್ತಂಗಡಿ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಕೆಎನ್ ಚಂದ್ರಶೇಖರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ರಬ್ಬರ್ ಸೊಸೈಟಿ ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಗೌರವ ಉಪಸ್ಥಿತರಿದ್ದರು.

ವಿಶೇಷ ಆಹ್ವಾನಿತರಾಗಿ ಗ್ರಾಮ ಪಂಚಾಯತ್‌ನ ಅಧ್ಯಕ್ಷರು ಮತ್ತು ಸದಸ್ಯರು, ಹಾಲು ಉತ್ಪಾದಕರ ಸಹಕಾರಿ ಸಂಘದ ಪ್ರತಿನಿಧಿಗಳು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪ್ರತಿನಿಧಿಗಳು, ಹಾಳೆ ಸಂಗ್ರಾಹಕರು, ಗ್ರಾಮಸ್ಥರು, ಸಿಬಂದಿ ವರ್ಗದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಹಾಳೆ ಸಂಗ್ರಾಹಕರಾದ ಲೋಕಯ್ಯ ಗೌಡ ಕಂಗಿತ್ತಿಲು ಕೊಯ್ಯೂರು, ಪ್ರೇಮ ಕರಾಯ, ನಂದಿನಿ ದೇವರಮಾರು, ಬಾಬು ಸುಲ್ಯೊಡಿ, ನಿರಂಜನ್ ಗೌಡ ನಡುಮಜಲು ಬಂದಾರುರವರನ್ನು ಸನ್ಮಾನಿಸಲಾಯಿತು.

ಸಂಸ್ಥೆಯ ಸ್ಥಾಪಕರಾದ ಅವಿನಾಶ್ ರಾವ್ ಪ್ರಾಸ್ತಾವಿಕದೊಂದಿಗೆ, ಸ್ವಾಗತಿಸಿದರು. ಸಂಸ್ಥೆಯ ಸಿ ಎಸ್ಒ ಪೃಥ್ವಿ ಕಾರಿಂಜ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಸಹ ಸ್ಥಾಪಕ ಅತಿಶಯ ಜೈನ್ ಧನ್ಯವಾದವಿತ್ತರು.

Related posts

ಬಂದಾರು: ಮುರ್ತಾಜೆಯಲ್ಲಿ ರಸ್ತೆ ಕುಸಿತ; ಸಂಪರ್ಕ ಕಡಿತ

Suddi Udaya

ನಯನಾಡು: ಅರೆಪ್ರಜ್ಞಾ ಸ್ಥಿತಿಯಲ್ಲಿ ಒಂದುವರೆ ವರ್ಷದ ಚಿರತೆ ಪತ್ತೆ

Suddi Udaya

ಕಡಿರುದ್ಯಾವರ ಕಾನರ್ಪ ಪೆಲತ್ತಡಿ ನಿವಾಸಿ ನೀಲಯ್ಯ ಗೌಡ ನಿಧನ

Suddi Udaya

ಜಾಗತಿಕ ಕ್ರೀಡೋತ್ಸವದ ಪದಾಧಿಕಾರಿಗಳ ಪೂರ್ವಭಾವಿ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಹಳೆ ವಿದ್ಯಾರ್ಥಿನಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಲಾಯಿಲದ ಹೊಸಕುಮೇರು ನಿವಾಸಿ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya
error: Content is protected !!