25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬುರುಡೆ ಪ್ರಕರಣ: ತನಿಖೆ ಮಾಡಿ ಅಂತಿಮ ವರದಿ ಸಲ್ಲಿಸಲು ಸೂಚನೆ

ಬೆಳ್ತಂಗಡಿ : ಬುರುಡೆ ಪ್ರಕರಣ ಬಗ್ಗೆ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ಕೋರ್ಟ್ ಗೆ 215 ಅಡಿಯಲ್ಲಿ ವರದಿಯನ್ನು ಸಲ್ಲಿಸಿದ ಬಗ್ಗೆ ಜ.3 ಕ್ಕೆ ಸೂಚನೆ ಹೊರಡಿಸಿದ್ದಾರೆ.

ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ ನ.20 ರಂದು ‘ಸುಳ್ಳು ಸಾಕ್ಷಿ’ ವರದಿಯನ್ನು (u/s)215 ಅಡಿಯಲ್ಲಿ ಚಿನ್ನಯ್ಯ , ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ, ವಿಠಲ್ ಗೌಡ, ಸುಜಾತ ಭಟ್ ವಿರುದ್ಧ ಸಲ್ಲಿಸಿದ್ದರು.

ಈ ವರದಿಯ ಬಗ್ಗೆ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ.ಹೆಚ್.ಟಿ ಅವರು ವಿಚಾರಣೆ ನಡೆಸಿ ಜ.3 ರಂದು ಎಸ್.ಐ.ಟಿ ಸಲ್ಲಿಸಿದ ವರದಿಯನ್ನು ತಟಸ್ಥ ಮಾಡಿ ತನಿಖೆ ನಡೆಸಿ ಅಂತಿಮ ವರದಿಯನ್ನು ಸಲ್ಲಿಸಲು ಸೂಚನೆ ನೀಡಿದ್ದಾರೆ.

ಎಸ್ಐಟಿ ಅಧಿಕಾರಿಗಳಿಗೆ ಮುಕ್ತಾ ಅವಕಾಶ ನೀಡಿದೆ.ಬೆಳ್ತಂಗಡಿ ನ್ಯಾಯಾಲಯಕ್ಕೆ ಎಸ್ಐಟಿ ಎಸ್ಪಿ ಸಿ.ಎ.ಸೈಮನ್, ಡಿವೈಎಸ್ಪಿ ಲೋಕೇಶ್ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು. ಎಸ್.ಐ.ಟಿ ಪರ ವಕೀಲರಾದ ದಿವ್ಯರಾಜ್ ವಾದ ಮಂಡಿಸಿದರು.ವರದಿಯ ಬಗ್ಗೆ ಮುಂದಿನ ವಿಚಾರಣೆ ಜ.23 ಕ್ಕೆ‌ ಮುಂದೂಡಿದ ಕೋರ್ಟ್.

Related posts

ಮೇ 14ರಿಂದ 24ರವರೆಗೆ ಕುಲಶೇಖರ ವೀರನಾರಾಯಣ ದೇವರಿಗೆ ಬ್ರಹ್ಮಕಲಶದ ವೈಭವ : ರೂ. 10 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣ: ಪತ್ರಿಕಾಗೋಷ್ಠಿಯಲ್ಲಿ ಮಯೂರ್ ಉಳ್ಳಾಲ್ ಮಾಹಿತಿ

Suddi Udaya

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಮತ್ತು ಬಂಟರ ಸಂಘ ಉಜಿರೆ ವಲಯದ ಆಶ್ರಯದಲ್ಲಿ ಮಹಾಸಭೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಮ್ಯಾಂಗೋ ಜ್ಯೂಸ್‌ನಲ್ಲಿ ಇಲಿ ಪಾಷಾಣ ಸೇವಿಸಿದ್ದ ಯುವಕ ಮೊಹಮ್ಮದ್ ಫೈಝಲ್‌ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ವಿಮೆನ್ ಇಂಡಿಯಾ ಮೂವ್ಮೆಂಟ್ ನಿಯೋಗದಿಂದ ಬೆಳ್ತಂಗಡಿ ಡಿವೈಎಸ್‌ಪಿ ಭೇಟಿ

Suddi Udaya

ಸುಲ್ಕೇರಿಮೊಗ್ರು : ಪಂಜಲಗುಡ್ಡೆ ಅಣೆಕಟ್ಟು ಮತ್ತು ಕೊಳಕೆಬೈಲು ಅಣೆಕಟ್ಟುಗಳಲ್ಲಿ ಅಡ್ಡಲಾಗಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಪರೀಕ್ಷೆಗೆ ಸಂಬಂಧಿಸಿದ ಗೊಂದಲಗಳನ್ನು ಪರಿಹರಿಸಲು ಕೂಡಲೇ ಕ್ರಮಕೈಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಗೆ ಆಗ್ರಹ

Suddi Udaya
error: Content is protected !!