25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ವೈಭವದ ಸಿರಿಹಬ್ಬ-2026 ಉದ್ಘಾಟನೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ವೈಭವದ ಸಿರಿಹಬ್ಬ-2026 ಉದ್ಘಾಟನೆ ಕಾರ್ಯಕ್ರಮವು ಸಿರಿ ನ್ಯೂ ಇಂಡಸ್ಟ್ರಿಯಲ್ ಪಾರ್ಕ್ ನಲ್ಲಿ ಜ 3ರಂದು ನಡೆಯಿತು.

ಅರಕಲಗೂಡು ತಾಲೂಕು ಮಾಜಿ ಶಾಸಕ,ಪರಿಸರಕ್ಕಾಗಿ ನಾವು ರಾಜ್ಯಾಧ್ಯಕ್ಷ ಎ.ಟಿ ರಾಮಸ್ವಾಮಿ ಸಿರಿಹಬ್ಬ ಉದ್ಘಾಟಿಸಿ ಶುಭ ಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನ್ ವಹಿಸಿದ್ದರು.

ವೇದಿಕೆಯಲ್ಲಿ ಬೆಳ್ತಂಗಡಿ ಡಿವೈಎಸ್ಪಿ ಸಿ.ಕೆ ರೋಹಿಣಿ,ಖ್ಯಾತ ಸೌಂದರ್ಯ ತಜ್ಞೆ ಉಮಾ ಜಯಕುಮಾರ್,ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ ಜನಾರ್ಧನ್,ಉದ್ಯಮಿ,ಸಿರಿ ಸಂಸ್ಥೆಯ ನಿರ್ದೆಶಕ ರಾಜೇಶ್ ಪೈ,ಪುತ್ತೂರು ಬ್ಯಾಂಕ್ ಆಫ್ ಬರೋಡ ಪ್ರಾದೇಶಿಕ ಮುಖ್ಯಸ್ಥರಾದ ಸಾಯಿ ಗಣೇಶ್ ಉಜ್ಜಿನ,ಉದ್ಯಮಿ ನರಸಿಂಹ ಪೈ ಉಜಿರೆ ಉಪಸ್ಥಿತರಿದ್ದರು.

ಸಿರಿ ಸಂಸ್ಥೆಯ ಆಹಾರ ಗೋದಾಮು ಜೀವನ್ ಕುಮಾರ್,ಸೇಲ್ಸ್ ಆಫೀಸರ್ ಮೌನೇಶ್ ಬಡಿಗೇರ್ ಕಾರ್ಯಕ್ರಮ ನಿರೂಪಿಸಿದರು. ಸಿರಿ ಕ್ಲಬ್ ಪ್ರಧಾನ ಸಂಚಾಲಕ ಪ್ರಸನ್ನ ಯು, ಅಧ್ಯಕ್ಷೆ ಹರ್ಷಿತಾ,ಪ್ರ.ಕಾರ್ಯದರ್ಶಿ ವಿನ್ಸೆಂಟ್ ಲೋಬೋ ಸಹಕರಿಸಿದರು. ಸಿರಿ ಕ್ಲಬ್ ನಿಕಟ ಪೂರ್ವಾಧ್ಯಕ್ಷೆ ವಸಂತಿ ವಂದಿಸಿದರು.

Related posts

ಕರ್ನಾಟಕ ರಾಜ್ಯ ದಲಿತ ಹಕ್ಕು ಸಮಿತಿಯ ರಾಜ್ಯ ಸಮಿತಿಗೆ ಈಶ್ವರಿ ಪದ್ಮುಂಜ ಆಯ್ಕೆ

Suddi Udaya

ಪಡಂಗಡಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ನಡುಜಾರು ಸ.ಕಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮೇ.31 ಕೊನೆಯ ದಿನ

Suddi Udaya

ಉರುವಾಲು: ಮಹಡಿಯ ಕಾರಿಡಾರ್‌ನಿಂದ ಆಯತಪ್ಪಿ ತೋಡಿಗೆ ಬಿದ್ದ ಕಾರ್ಮಿಕ ಮೃತ್ಯು

Suddi Udaya

ಜ.2: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!