September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ವೈಭವದ ಸಿರಿಹಬ್ಬ-2026 ಉದ್ಘಾಟನೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ವೈಭವದ ಸಿರಿಹಬ್ಬ-2026 ಉದ್ಘಾಟನೆ ಕಾರ್ಯಕ್ರಮವು ಸಿರಿ ನ್ಯೂ ಇಂಡಸ್ಟ್ರಿಯಲ್ ಪಾರ್ಕ್ ನಲ್ಲಿ ಜ 3ರಂದು ನಡೆಯಿತು.

ಅರಕಲಗೂಡು ತಾಲೂಕು ಮಾಜಿ ಶಾಸಕ,ಪರಿಸರಕ್ಕಾಗಿ ನಾವು ರಾಜ್ಯಾಧ್ಯಕ್ಷ ಎ.ಟಿ ರಾಮಸ್ವಾಮಿ ಸಿರಿಹಬ್ಬ ಉದ್ಘಾಟಿಸಿ ಶುಭ ಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನ್ ವಹಿಸಿದ್ದರು.

ವೇದಿಕೆಯಲ್ಲಿ ಬೆಳ್ತಂಗಡಿ ಡಿವೈಎಸ್ಪಿ ಸಿ.ಕೆ ರೋಹಿಣಿ,ಖ್ಯಾತ ಸೌಂದರ್ಯ ತಜ್ಞೆ ಉಮಾ ಜಯಕುಮಾರ್,ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ ಜನಾರ್ಧನ್,ಉದ್ಯಮಿ,ಸಿರಿ ಸಂಸ್ಥೆಯ ನಿರ್ದೆಶಕ ರಾಜೇಶ್ ಪೈ,ಪುತ್ತೂರು ಬ್ಯಾಂಕ್ ಆಫ್ ಬರೋಡ ಪ್ರಾದೇಶಿಕ ಮುಖ್ಯಸ್ಥರಾದ ಸಾಯಿ ಗಣೇಶ್ ಉಜ್ಜಿನ,ಉದ್ಯಮಿ ನರಸಿಂಹ ಪೈ ಉಜಿರೆ ಉಪಸ್ಥಿತರಿದ್ದರು.

ಸಿರಿ ಸಂಸ್ಥೆಯ ಆಹಾರ ಗೋದಾಮು ಜೀವನ್ ಕುಮಾರ್,ಸೇಲ್ಸ್ ಆಫೀಸರ್ ಮೌನೇಶ್ ಬಡಿಗೇರ್ ಕಾರ್ಯಕ್ರಮ ನಿರೂಪಿಸಿದರು. ಸಿರಿ ಕ್ಲಬ್ ಪ್ರಧಾನ ಸಂಚಾಲಕ ಪ್ರಸನ್ನ ಯು, ಅಧ್ಯಕ್ಷೆ ಹರ್ಷಿತಾ,ಪ್ರ.ಕಾರ್ಯದರ್ಶಿ ವಿನ್ಸೆಂಟ್ ಲೋಬೋ ಸಹಕರಿಸಿದರು. ಸಿರಿ ಕ್ಲಬ್ ನಿಕಟ ಪೂರ್ವಾಧ್ಯಕ್ಷೆ ವಸಂತಿ ವಂದಿಸಿದರು.

Related posts

ಅರಸಿನಮಕ್ಕಿಯ ಪ್ರಮುಖ್ ತುಳುಪುಳೆ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 4ನೇ ಸ್ಥಾನ

Suddi Udaya

ಲಾಯಿಲ : ರಸ್ತೆಗಳ ಬದಿಯಲ್ಲಿರುವ ಚರಂಡಿಗಳ ಹೂಳೆತ್ತುವಂತೆ ಮತ್ತು ಗಿಡ ಗಂಟಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರಿಂದ ಗ್ರಾ.ಪಂ.ಗೆ ಮನವಿ

Suddi Udaya

ಹೊಸಂಗಡಿ: ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಸಂಸತ್ತನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬರಿಂದ ಉದ್ಘಾಟನೆ

Suddi Udaya

ಕುಪೆಟ್ಟಿ, ಕಲ್ಲೇರಿ, ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಗುಂಡಿಗಳಿಗೆ ತಾತ್ಕಲಿಕ ಪರಿಹಾರ: ಪ್ರಯಾಣಿಕರಿಗೆ ಧೂಳಿನ ಗೋಳು

Suddi Udaya

ರೋಟರಿ ಕ್ಲಬ್ ಸುಬ್ರಮಣ್ಯ ಮತ್ತು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಮಣ್ಯ ವತಿಯಿಂದ ಐದು ಹಿರಿಯ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಜು. 12: ಉಜಿರೆಯಲ್ಲಿ ಮೆಗಾ ‘ರೈನಾಥಾನ್–2026’

Suddi Udaya
error: Content is protected !!