July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಸುಲ್ಕೇರಿ-ಅಟ್ರಿಂಜೆ ಸೇತುವೆಯ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಮಧ್ಯಪ್ರದೇಶ ಸುನಿಲ್ ಅಸೌಖ್ಯದಿಂದ ಮೃತ್ಯು

ಬೆಳ್ತಂಗಡಿ: ಇಲ್ಲಿಯ ಸುಲ್ಕೇರಿ ಗ್ರಾಮದ ಸುಲ್ಕೇರಿ- ಅಟ್ರಿಂಜೆ ಸೇತುವೆಯ ಸೆಂಟ್ರಿಂಗ್ ಕಾಮಗಾರಿ ಕೆಲಸ ಮಾಡುತ್ತಿದ್ದ ಮಧ್ಯಪ್ರದೇಶ ಮೂಲದ ಸುನಿಲ್(19ವರ್ಷ) ಎಂಬಾತ ಅನಾರೋಗ್ಯದಿಂದ ಮೃತಪಟ್ಟ ಘಟನೆ ಜ.2ರಂದು ವರದಿಯಾಗಿದೆ.

ಅಟ್ರಿಂಜೆ ಸೇತುವೆ ಬಳಿ ತನ್ನ ಜೊತೆಗಾರರೊಂದಿಗೆ ಬಿಡಾರದಲ್ಲಿ ವಾಸ್ತವ್ಯವಿದ್ದ ಸುನೀಲ್ ಜ.1ರಿಂದ ಹೊಟ್ಟೆನೋವು ಹಾಗೂ ಗಂಟಲು ನೋವು ಎಂದು ಹೇಳಿ ಕೆಲಸಕ್ಕೆ ರಜೆ ಮಾಡಿ ಬಿಡಾರದಲ್ಲಿ ವಿಶ್ರಾಂತಿಯಲ್ಲಿದ್ದರು. ಜ. 2 ರಂದು ಮಧ್ಯಾಹ್ನ ಅನಾರೋಗ್ಯ ಉಲ್ಬಣಗೊಂಡಿದ್ದು, ಅವರ ಜೊತೆಗಿದ್ದ ಪುತ್ತೂರಿನ ರವಿಕುಮಾರ್ ಅವರು ಹರಿಸಿಂಗ್ ಹಾಗೂ ತೇಜ್ ಸಿಂಗ್ ಎಂಬವರೊಂದಿಗೆ ಮದ್ಯಾಹ್ನ ಸುಮಾರು 3 ಗಂಟೆಗೆ ಅಂಬ್ಯುಲೆನ್ಸ್ ವಾಹನದಲ್ಲಿ ಸುನಿಲ್‌ರನ್ನು ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತಂದಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ತಣ್ಣೀರುಪಂತ, ಬಾರ್ಯ, ತೆಕ್ಕಾರು ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ: ಶಾಸಕ ಹರೀಶ್ ಪೂಂಜರಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಹದಿಮೂರನೇ ಸುತ್ತಿನಲ್ಲಿ 13162 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ

Suddi Udaya

ನಿವೃತ್ತ ಶಿಕ್ಷಕಿ ಉಜಿರೆ ಗ್ರಾಮದ ಶಿವಾಜಿನಗರ ನಿವಾಸಿಶಕುಂತಳ ಕಾರoತ ನಿಧನ

Suddi Udaya

ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಕಿಲ್ಲೂರಿನ ಶಾಲೆಯಲ್ಲಿ ಶೈಕ್ಷಣಿಕ ಕಾರ್ಯಕ್ರಮಗಳ ಆಯೋಜನೆ

Suddi Udaya

ಶಾಸಕ ಹರೀಶ್ ಪೂಂಜರಿಂದ ಬಳಂಜ ಶಾಲಾ ಎಲ್.ಕೆ.ಜಿ ಕೊಠಡಿ ಉದ್ಘಾಟನೆ ಮತ್ತು ಅಶ್ವಥ್ ಹೆಗ್ಡೆ ಫೌಂಡೇಶನ್ ನಿಂದ ಶಾಲಾ ವಾಹನ ಸಮರ್ಪಣೆ

Suddi Udaya
error: Content is protected !!