September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಸುಲ್ಕೇರಿ-ಅಟ್ರಿಂಜೆ ಸೇತುವೆಯ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಮಧ್ಯಪ್ರದೇಶ ಸುನಿಲ್ ಅಸೌಖ್ಯದಿಂದ ಮೃತ್ಯು

ಬೆಳ್ತಂಗಡಿ: ಇಲ್ಲಿಯ ಸುಲ್ಕೇರಿ ಗ್ರಾಮದ ಸುಲ್ಕೇರಿ- ಅಟ್ರಿಂಜೆ ಸೇತುವೆಯ ಸೆಂಟ್ರಿಂಗ್ ಕಾಮಗಾರಿ ಕೆಲಸ ಮಾಡುತ್ತಿದ್ದ ಮಧ್ಯಪ್ರದೇಶ ಮೂಲದ ಸುನಿಲ್(19ವರ್ಷ) ಎಂಬಾತ ಅನಾರೋಗ್ಯದಿಂದ ಮೃತಪಟ್ಟ ಘಟನೆ ಜ.2ರಂದು ವರದಿಯಾಗಿದೆ.

ಅಟ್ರಿಂಜೆ ಸೇತುವೆ ಬಳಿ ತನ್ನ ಜೊತೆಗಾರರೊಂದಿಗೆ ಬಿಡಾರದಲ್ಲಿ ವಾಸ್ತವ್ಯವಿದ್ದ ಸುನೀಲ್ ಜ.1ರಿಂದ ಹೊಟ್ಟೆನೋವು ಹಾಗೂ ಗಂಟಲು ನೋವು ಎಂದು ಹೇಳಿ ಕೆಲಸಕ್ಕೆ ರಜೆ ಮಾಡಿ ಬಿಡಾರದಲ್ಲಿ ವಿಶ್ರಾಂತಿಯಲ್ಲಿದ್ದರು. ಜ. 2 ರಂದು ಮಧ್ಯಾಹ್ನ ಅನಾರೋಗ್ಯ ಉಲ್ಬಣಗೊಂಡಿದ್ದು, ಅವರ ಜೊತೆಗಿದ್ದ ಪುತ್ತೂರಿನ ರವಿಕುಮಾರ್ ಅವರು ಹರಿಸಿಂಗ್ ಹಾಗೂ ತೇಜ್ ಸಿಂಗ್ ಎಂಬವರೊಂದಿಗೆ ಮದ್ಯಾಹ್ನ ಸುಮಾರು 3 ಗಂಟೆಗೆ ಅಂಬ್ಯುಲೆನ್ಸ್ ವಾಹನದಲ್ಲಿ ಸುನಿಲ್‌ರನ್ನು ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತಂದಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನಾಲ್ಕೂರು: ಸೂಳಬೆಟ್ಟು ನಿವಾಸಿ ಪ್ರತಿಭಾ ಜೋಶಿ ನಿಧನ

Suddi Udaya

ಬೆಳ್ತಂಗಡಿ ನವೋದಯ ಪ್ರೌಢಶಾಲೆ ಮತ್ತು ಲಾಯಿಲ ಬಿ.ಇಡಿ ಕಾಲೇಜಿನ ನಿವೃತ್ತ ಗೌರವ ಪ್ರಾಧ್ಯಾಪಕ ಪಿ ವೆಂಕಟರಮಣ ನಿಧನ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: ಜ್ಞಾನ, ವಿಜ್ಞಾನ ಮತ್ತು ಸುಜ್ಞಾನದ ತ್ರಿವೇಣಿ ಸಂಗಮ

Suddi Udaya

ಕೊಕ್ರಾಡಿ: ಮನ್ಯೋಡಿಗುತ್ತು ನಿವಾಸಿ ರವಿ ಪೂಜಾರಿ ನಿಧನ

Suddi Udaya

ವೇಣೂರು: ಎಕ್ಸೆಲ್ ನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸುಮಂತ್ ಕುಮಾರ್ ಜೈನ್ ರಿಂದ ಮಾರ್ಗದರ್ಶನ

Suddi Udaya

ಎನ್.ಎಂ.ಎಂ.ಎಸ್. ಪರೀಕ್ಷೆ: ಶಿರ್ಲಾಲು ಶಾಲೆಯ ಕೆ.ಪುಣ್ಯಶ್ರೀ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya
error: Content is protected !!