23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಸುಲ್ಕೇರಿ-ಅಟ್ರಿಂಜೆ ಸೇತುವೆಯ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಮಧ್ಯಪ್ರದೇಶ ಸುನಿಲ್ ಅಸೌಖ್ಯದಿಂದ ಮೃತ್ಯು

ಬೆಳ್ತಂಗಡಿ: ಇಲ್ಲಿಯ ಸುಲ್ಕೇರಿ ಗ್ರಾಮದ ಸುಲ್ಕೇರಿ- ಅಟ್ರಿಂಜೆ ಸೇತುವೆಯ ಸೆಂಟ್ರಿಂಗ್ ಕಾಮಗಾರಿ ಕೆಲಸ ಮಾಡುತ್ತಿದ್ದ ಮಧ್ಯಪ್ರದೇಶ ಮೂಲದ ಸುನಿಲ್(19ವರ್ಷ) ಎಂಬಾತ ಅನಾರೋಗ್ಯದಿಂದ ಮೃತಪಟ್ಟ ಘಟನೆ ಜ.2ರಂದು ವರದಿಯಾಗಿದೆ.

ಅಟ್ರಿಂಜೆ ಸೇತುವೆ ಬಳಿ ತನ್ನ ಜೊತೆಗಾರರೊಂದಿಗೆ ಬಿಡಾರದಲ್ಲಿ ವಾಸ್ತವ್ಯವಿದ್ದ ಸುನೀಲ್ ಜ.1ರಿಂದ ಹೊಟ್ಟೆನೋವು ಹಾಗೂ ಗಂಟಲು ನೋವು ಎಂದು ಹೇಳಿ ಕೆಲಸಕ್ಕೆ ರಜೆ ಮಾಡಿ ಬಿಡಾರದಲ್ಲಿ ವಿಶ್ರಾಂತಿಯಲ್ಲಿದ್ದರು. ಜ. 2 ರಂದು ಮಧ್ಯಾಹ್ನ ಅನಾರೋಗ್ಯ ಉಲ್ಬಣಗೊಂಡಿದ್ದು, ಅವರ ಜೊತೆಗಿದ್ದ ಪುತ್ತೂರಿನ ರವಿಕುಮಾರ್ ಅವರು ಹರಿಸಿಂಗ್ ಹಾಗೂ ತೇಜ್ ಸಿಂಗ್ ಎಂಬವರೊಂದಿಗೆ ಮದ್ಯಾಹ್ನ ಸುಮಾರು 3 ಗಂಟೆಗೆ ಅಂಬ್ಯುಲೆನ್ಸ್ ವಾಹನದಲ್ಲಿ ಸುನಿಲ್‌ರನ್ನು ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತಂದಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ವಿಶೇಷ ಸಾಮರ್ಥ್ಯವುಳ್ಳ ಮಕ್ಕಳ ಕ್ರೀಡಾಕೂಟ: ನಾವೂರು ಶಾಲೆ ವಿದ್ಯಾರ್ಥಿ ಜೀವಿತ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ :ಎಸ್ .ಡಿ.ಎಂ.ಶಿಕ್ಷಣ ಸಂಸ್ಥೆಯಿಂದ ರೂ 15.15 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಏಷಿಯನ್ ನೆಟ್ ಬಾಲ್ ಚಾಂಪಿಯನ್ಶಿಪ್’ ಕ್ರೀಡಾಕೂಟ: ಭಾರತ ತಂಡದ ಪ್ರಾಥಮಿಕ ತರಬೇತಿ ಶಿಬಿರಕ್ಕೆ ಎಸ್.ಡಿ.ಎಂ ಕಾಲೇಜಿನ ಚಿಂತನ್ ಬಿ ಸಿ, ಪುನೀತ್ ಆಯ್ಕೆ

Suddi Udaya

ಕಿಶೋರ್ ಕುಮಾರ್ ಬೊಟ್ಯಾಡಿ ನಿರ್ಮಾಣದಲ್ಲಿ ಮೂಡಿ ಬಂದಿರುವ “ELLA” ಚಲನಚಿತ್ರ ಬಿಡುಗಡೆ

Suddi Udaya

ಜನಪದ ಗೀತಾ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ರಂಝಾನ್ ಆಚರಣೆ

Suddi Udaya
error: Content is protected !!