September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಎಂಡಿಎಂಎ ಮಾದಕ ವಸ್ತು ಮಾರಾಟಕ್ಕೆ ಯತ್ನ ; ಓರ್ವ ಆರೋಪಿ ಬಂಧನ

ಬೆಳ್ತಂಗಡಿ: ಅಕ್ರಮವಾಗಿ ಮಾರಾಟ ಮಾಡಲು ಕಾರಿನಲ್ಲಿ ಮಾದಕವಸ್ತು ಎಮ್.ಡಿ.ಎಮ್.ಎ ಸಂಗ್ರಹಿಸಿಟ್ಟದ್ದನ್ನು ಬೆಳ್ತಂಗಡಿ ಪೊಲೀಸರು ಪತ್ತೆಹಚ್ಚಿ ಓರ್ವ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಳ್ತಂಗಡಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದಡ್ಕ ರಸ್ತೆಯಲ್ಲಿ ಜ.3 ರಂದು ಸಂಜೆ 5:45 ಕ್ಕೆ ಬೆಳ್ತಂಗಡಿ ಸಬ್‌ ಇನ್ಸ್‌ಪೆಕ್ಟರ್ ಆನಂದ್.ಎಮ್ ನೇತೃತ್ವದ ತಂಡ ರೌಡ್ಸ್ ನಲ್ಲಿರುವಾಗ ಅನುಮಾನಸ್ಪದವಾಗಿ ರಸ್ತೆ ಪಕ್ಕದಲ್ಲಿ ನಿಂತಿದ್ದ KA-19-MG-4669 ನಂಬರಿನ ಐ20 ಕಾರನ್ನು ಪರಿಶೀಲನೆ ಮಾಡಿದಾಗ ಸದ್ರಿ ಕಾರಿನ ಒಳಗಡೆ ಮಾದಕ ವಸ್ತು ಎಮ್.ಡಿ.ಎಮ್.ಎ ಪತ್ತೆಯಾಗಿದೆ.ಕಾರಿನೊಳಗಡೆ ಖಾಲಿ ಸಿಗರೇಟ್ ಪ್ಯಾಕ್ ಒಳಗಡೆ ಎಮ್.ಡಿ.ಎಮ್.ಎ ಮಾದಕವಸ್ತುವನ್ನು ಸಣ್ಣ ಸಣ್ಣ ಪ್ಯಾಕ್ ಗಳನ್ನು ಮಾಡಿ ತುಂಬಿಸಿ ಮಾರಾಟ ಮಾಡಲು ಸಂಗ್ರಹಿಸಿಟ್ಟಿದ್ದ 5,54,800 ರೂಪಾಯಿಯ 55.48 ಗ್ರಾಂ ಎಮ್.ಡಿ.ಎಮ್.ಎ ಮಾದಕವಸ್ತು ಪತ್ತೆಯಾಗಿದೆ.

6 ಲಕ್ಷ ರೂಪಾಯಿ ಮೌಲ್ಯದ ಐ20 ಕಾರನ್ನು ವಶಪಡಿಸಿಕೊಂಡಿದ್ದು. ಕಾರು ಮತ್ತು ಮಾದಕವಸ್ತುವಿನ ಮೌಲ್ಯ 11,54,800 ರೂಪಾಯಿ ಅಗಿದೆ.ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಪೊಲೀಸರು ಮೊದಲ ಭಾರಿಗೆ ಎಮ್.ಡಿ.ಎಮ್.ಎ ಮಾದಕವಸ್ತು ಭೇಟಿಯಾಡಿದ ಪ್ರಕರಣವಾಗಿದೆ.ಮಾದಕವಸ್ತು ಮಾರಾಟ ಮಾಡಲು ಕಾರಿನಲ್ಲಿ ಸಂಗ್ರಹಿಸಿಟ್ಟಿದ್ದ ಮಂಗಳೂರು ನಗರದ ದೇರಳಕಟ್ಟೆಯ ಕೋಟೆಕಾರು ನಿವಾಸಿ ಅಬುಬಕ್ಕರ್ ಮಗ ಉಮರ್ ಶರೀಫ್(42) ಬಂಧಿತ ಆರೋಪಿಯಾಗಿದ್ದು.

ಈತನು ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದಡ್ಕದಲ್ಲಿ ಎಫ್.ಎ ಜ್ಯೂಸ್ ಹೌಸ್ ಅಂಗಡಿ ಹೊಂದಿದ್ದಾನೆ.ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಇನ್ಸ್‌ಪೆಕ್ಟರ್ ಸುಬ್ಬಪೂರ್ ಮಠ ನೇತೃತ್ವದಲ್ಲಿ ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಆನಂದ್.ಎಮ್ ತಂಡದ ಎಎಸ್ಐ ತಿಲಕ್ ರಾಜ್, ಪಂಪಾಪತಿ, ಶ್ರೀನಿವಾಸ , ಗಿರೀಶ್,ಪ್ರಕಾಶ್ ಪೂಜಾರಿ,ಜಗದೀಶ್,ಧರಿಶ್, ಯಮನಪ್ಪ, ದುಂಡಪ್ಪ ಹಾಗೂ ಎಫ್ಎಸ್ಎಲ್ ವಿಭಾಗದ ಸೊಕೊ ತಂಡದ ಅರ್ಪಿತಾ,ಕಾವ್ಯ ಶ್ರೀ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಮದ್ದಡ್ಕದಲ್ಲಿ ಗಾಂಜಾ ಮಾರಾಟ: ಆರೋಪಿ ಬಂಧನ: 90 ಗ್ರಾಂ ಗಾಂಜಾ ವಶ

Suddi Udaya

ಕನ್ಯಾಡಿ 1 ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಆತ್ಮಹತ್ಯೆಗೆ ಯತ್ನಿಸಿದ್ದ ಕೊಕ್ಕಡದ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya

ಮಂದಗತಿಯಿಂದ ಸಾಗುತ್ತಿರುವ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ: ಕಾಮಗಾರಿಯ ವಿರುದ್ಧ ಬೆಳ್ತಂಗಡಿಯಲ್ಲಿ ಹೆದ್ದಾರಿ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಶಿಬಾಜೆ: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಪ್ರಾರಂಭ

Suddi Udaya

ನಾವೂರು ಸರ್ವೋದಯ ಟ್ರಸ್ಟ್ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!