September 6, 2026
ಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಲ್ಮಂಜ ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಗುರುನಮನ ಕಾರ್ಯಕ್ರಮ

ಕಲ್ಮಂಜ: ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮದ ಗುರುನಮನ ಕಾರ್ಯಕ್ರಮವು ಜ.4ರಂದು ಜ್ಞಾನದೀಪ ಸಭಾಂಗಣದಲ್ಲಿ ಜರುಗಿತು.ಸಭಾಧ್ಯಕ್ಷತೆಯನ್ನು ಶತಮಾನೋತ್ಸವ ಸಮಿತಿ ಗೌರವಾಧ್ಯಕ್ಷ ಮಂಜುನಾಥ ಶೆಟ್ಟಿ ವಹಿಸಿದ್ದರು. ನಾವೂರ ಆರೋಗ್ಯ ಕ್ಲಿನಿಕ್ ನ ವೈದ್ಯಾಧಿಕಾರಿ ಡಾ. ಪ್ರದೀಪ್ ನಾವೂರ ಅವರು ಮುಖ್ಯ ಭಾಷಣಕಾರರಾಗಿ ಆಗಮಿಸಿದರು.

ವೇದಿಕೆಯಲ್ಲಿ ಶಾಸಕ ಹರೀಶ್ ಪೂಂಜ, ಎಸ್.ಕೆ.ಡಿ.ಆರ್.ಡಿ.ಪಿ. ತಾಲೂಕು ಯೋಜನಾಧಿಕಾರಿ ಯಶೋಧರ, ಶತ ಮಾನೋತ್ಸವ ಸಮಿತಿ ಅಧ್ಯಕ್ಷ ಪ್ರವೀಣ್ ಫೆರ್ನಾಂಡಿಸ್, ಹಿರಿಯ ವಿದ್ಯಾರ್ಥಿಗಳಾದ ಕೆಂಪಯ್ಯ ಮಡಿವಾಳ, ಕೊರಗಪ್ಪ ಗೌಡ, ವಿಜೆ ಪೌಲೋಸ್, ಶಾರದಾ ಭಂಡಾರ್ಕರ್, ಡೊಂಬಯ್ಯ ಟಿ., ಅಬ್ದುಲ್ ಅಜೀದ್, ಉಜಿರೆ ಮಂಜುಶ್ರೀ ಪ್ರಿಂಟರ್ಸ್ ಮ್ಯಾನೇಜರ್ ಶೇಖರ್ ಟಿ.ನಿಡಿಗಲ್ ಶ್ರೀ ಮಹಾ ಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರ ನಾಗೇಶ್ ಪ್ರಭು, ಕಲ್ಲಾಡಿ ಸರಕಾರಿ ಪ್ರೌಢ ಶಾಲೆ ಮುಖ್ಯೋಪಾಧ್ಯಾಯಿನಿ ವಿ.ಜೆ ರೋಸ, ದೈಹಿಕ ಶಿಕ್ಷಣ ಶಿಕ್ಷಕ ಶೀನ ಅಕ್ಷಯನಗರ, ಉಜಿರೆ ಸಂತ ಅಂಥೋನಿ ಚರ್ಚ್ ಮಾಜಿ ಉಪಾಧ್ಯಕ್ಷ ಅಂತೋನಿ ಫೆರ್ನಾಂಡಿಸ್, ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಚಿದಾನಂದ ಮಂಟಮೆ ಉಪಸ್ಥಿತರಿದ್ದರು.

ಕಳೆದ ನೂರು ವರ್ಷಗಳ ಅವಧಿಯಲ್ಲಿ ಶಾಲೆಯಲ್ಲಿ ಸೇವೆ ಸಲ್ಲಿಸಿರುವ ಗುರುವರೇಣ್ಯರುಗಳಾದ ಬಿ. ಬಾಬು ಗೌಡ ಬಾಜಿಮಾರ್‌, ರಘುಪತಿ ಭಟ್, ಗಿರೀಶ್ ಪ್ರಭು, ಯಶೋಧ, ಜಯ, ಶಾಂತಾ, ದಮಯಂತಿ, ಸೀತಾ ಆರ್ ಸೇಠ್ , ಇಶಾಕ್ ಸಾಹೇಬ್ ಸಿ, ಚಂಪಾವತಿ, ಶೀಲಾವತಿ ಕೆ., ಸುರೇಖಾ, ಮಂಜುಳಾ, ಶಿಲ್ಪಾ ಡಿ, ಐಶ್ವರ್ಯ, ನಮಿತಾ, ಜ್ಯೋತಿ ರವರುಗಳಿಗೆ ಗುರುನಮನ ಸಲ್ಲಿಸಲಾಯಿತು. ಶತಮಾನೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬ್ರಾಯ ನಿರೂಪಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹಮೀದ್ ಬಿಎನ್ ಸ್ವಾಗತಿಸಿದರು.

Related posts

ಗುರುವಾಯನಕೆರೆ: ಅನುಮಾನಸ್ಪದ ರೀತಿಯಲ್ಲಿ ಯುವಕನೋರ್ವ ಮೃತದೇಹ ಪತ್ತೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಿಂದ ಅನಧಿಕೃತ ಬ್ಯಾನರ್, ಬಂಟಿಂಗ್ಸ್, ಜಾಹೀರಾತು ಫಲಕ ತೆರವು

Suddi Udaya

ಶ್ರೀ ದುರ್ಗಾ ಫರ್ನಿಚರ್ ಮತ್ತು ಇಲೆಕ್ಟ್ರಾನಿಕ್ಸ್‌ನಲ್ಲಿ ಖರೀದಿಗೆ ವಿಶೇಷ ಡಿಸ್ಕೌಂಟ್

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ಪದಪ್ರಧಾನ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ : ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಆ.23: ಬೆಳ್ತಂಗಡಿಯಲ್ಲಿ ಎಸ್ & ವಿ ಫ್ಯಾಮಿಲಿ ಬ್ಯೂಟಿ ಸೆಲೂನ್ & ಅಕಾಡೆಮಿ ಶುಭಾರಂಭ, ಆಧುನಿಕ ಸೌಲಭ್ಯಗಳೊಂದಿಗೆ ವಿನೂತನ ಬ್ಯೂಟಿ ಸೇವೆ

Suddi Udaya
error: Content is protected !!