ಗ್ರಾಮಾಂತರ ಸುದ್ದಿವರದಿ

ಬಜಿರೆ: ಚಿರತೆ ಓಡಾಟ-ಜನರಲ್ಲಿ ಆತಂಕ

ವೇಣೂರು: ವೇಣೂರು ವಲಯ ಅರಣ್ಯ ಇಲಾಖೆಗೆ ಒಳಪಡುವ ಬಜಿರೆ ಗ್ರಾಮದ ಹೊಸಪಟ್ಣ, ಹೊಸ ಬಜಿರೆ, ಅಜ್ಜಿಬೆಟ್ಟು ಪರಿಸರದಲ್ಲಿ ಕಳೆದ ಹಲವು ದಿನಗಳಿಂದ ಎರಡು ಚಿರತೆಗಳು ಓಡಾಟ ನಡೆಸುತ್ತಿದ್ದು ಜನರಲ್ಲಿ ಆತಂಕ ಸೃಷ್ಟಿಸಿದೆ.

ಇದೀಗ ತಡ ರಾತ್ರಿ ಜ.4 ರಂದು ಹೊಸ ಬಜಿರೆ ಎಂಬಲ್ಲಿ ರಬ್ಬರ್ ತೋಟದಲ್ಲಿ ಚಿರತೆ ಓಡಾಟ ನಡೆಸಿದ ದೃಶ್ಯವನ್ನು ಕೃಷಿಕರೊಬ್ಬರು ಸೆರೆಹಿಡಿದಿದ್ದಾರೆ. ದೈತ್ಯಾಕಾರದ ಚಿರತೆ ಇದಾಗಿದ್ದು ಜನರು ಭಯಭೀತರಾಗಿದ್ದಾರೆ. ಈಗಾಗಲೇ ದನ, ನಾಯಿ ದಿನದಿಂದ ದಿನಕ್ಕೆ ಚಿರತೆ ಪಾಲಾಗುತ್ತಿದೆ. ಹೊಸಪಟ್ಣದಲ್ಲಿ ಚಿರತೆ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅಲ್ಲದೆ ರಾತ್ರಿ ವೇಳೆ ಚಿರತೆ ಕೂಗುವ ಶಬ್ದ ಕೇಳಿ ಜನರು ಭಯಭೀತರಾಗಿದ್ದಾರೆ.

ಹೊಸಪಟ್ಣವಾಗಿ ಶಾಲಾ, ಕಾಲೇಜು ಹಾಗೂ ಅಂಗನವಾಡಿ ಕೇಂದ್ರದ ಮಕ್ಕಳು ಹೋಗುತ್ತಿದ್ದು ಪೊಷಕರಲ್ಲಿ ಮತ್ತಷ್ಟು ಆತಂಕ ಸೃಷ್ಟಿಸಿದೆ. ದಾರಿ ಮಧ್ಯೆ ಗಿಡಗಂಟಿಗಳು ಬೆಳೆದಿದ್ದು ಇನ್ನೂ ತೆರವುಗೊಳಿಸುವ ಕಾರ್ಯ ನಡೆದಿಲ್ಲ ಚಿರತೆ ಎಲ್ಲಿ ಇದರಲ್ಲಿ ಅವಿತುಕೊಳ್ಳುತ್ತದೆ ಎಂಬ ಭಯ ಜನರಲ್ಲಿದ್ದು ಅರಣ್ಯ ಇಲಾಖೆಗೆ ನಾಗರೀಕರು ಮಾಹಿತಿ ತಿಳಿಸಿದ್ದಾರೆ. ಇನ್ನೂ ತಾಲೂಕಿನ ಪಾಲೇದು ಪರಿಸರದಲ್ಲಿ ಚಿರತೆ ಓಡಾಟ ನಡೆಸಿದ ಘಟನೆ ನಡೆದಿದೆ.

Related posts

ಪಿಎಂ ಜನ್ ಮನ್ ಯೋಜನೆಯಡಿ ದ.ಕ. ಜಿಲ್ಲೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ರೂ. 10.32 ಕೋಟಿ ಅನುದಾನ ಬಿಡುಗಡೆ: ಕ್ಯಾ. ಬ್ರಿಜೇಶ್ ಚೌಟ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

Suddi Udaya

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯದರ್ಶಿಗಳಾಗಿ ಸೀತಾರಾಮ್ ಬೆಳಾಲು ಹಾಗೂ ವಸಂತಿ ಮಚ್ಚಿನ ಆಯ್ಕೆ

Suddi Udaya

ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತದ ವತಿಯಿಂದ ಉಚಿತ ಶಾಲಾ ಬ್ಯಾಗ್ ವಿತರಣೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಜಿಲ್ಲಾಮಟ್ಟದ ಸಮಾಲೋಚನೆ ಸಭೆ

Suddi Udaya

ಉಜಿರೆಯಲ್ಲಿ ನೀರಿನ ಉಳಿತಾಯ ಮತ್ತು ಸಂರಕ್ಷಣೆ ಬಗ್ಗೆ ಜಾಗೃತಿ ಅಭಿಯಾನ

Suddi Udaya
error: Content is protected !!