25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿವರದಿ

ಬಜಿರೆ: ಚಿರತೆ ಓಡಾಟ-ಜನರಲ್ಲಿ ಆತಂಕ

ವೇಣೂರು: ವೇಣೂರು ವಲಯ ಅರಣ್ಯ ಇಲಾಖೆಗೆ ಒಳಪಡುವ ಬಜಿರೆ ಗ್ರಾಮದ ಹೊಸಪಟ್ಣ, ಹೊಸ ಬಜಿರೆ, ಅಜ್ಜಿಬೆಟ್ಟು ಪರಿಸರದಲ್ಲಿ ಕಳೆದ ಹಲವು ದಿನಗಳಿಂದ ಎರಡು ಚಿರತೆಗಳು ಓಡಾಟ ನಡೆಸುತ್ತಿದ್ದು ಜನರಲ್ಲಿ ಆತಂಕ ಸೃಷ್ಟಿಸಿದೆ.

ಇದೀಗ ತಡ ರಾತ್ರಿ ಜ.4 ರಂದು ಹೊಸ ಬಜಿರೆ ಎಂಬಲ್ಲಿ ರಬ್ಬರ್ ತೋಟದಲ್ಲಿ ಚಿರತೆ ಓಡಾಟ ನಡೆಸಿದ ದೃಶ್ಯವನ್ನು ಕೃಷಿಕರೊಬ್ಬರು ಸೆರೆಹಿಡಿದಿದ್ದಾರೆ. ದೈತ್ಯಾಕಾರದ ಚಿರತೆ ಇದಾಗಿದ್ದು ಜನರು ಭಯಭೀತರಾಗಿದ್ದಾರೆ. ಈಗಾಗಲೇ ದನ, ನಾಯಿ ದಿನದಿಂದ ದಿನಕ್ಕೆ ಚಿರತೆ ಪಾಲಾಗುತ್ತಿದೆ. ಹೊಸಪಟ್ಣದಲ್ಲಿ ಚಿರತೆ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅಲ್ಲದೆ ರಾತ್ರಿ ವೇಳೆ ಚಿರತೆ ಕೂಗುವ ಶಬ್ದ ಕೇಳಿ ಜನರು ಭಯಭೀತರಾಗಿದ್ದಾರೆ.

ಹೊಸಪಟ್ಣವಾಗಿ ಶಾಲಾ, ಕಾಲೇಜು ಹಾಗೂ ಅಂಗನವಾಡಿ ಕೇಂದ್ರದ ಮಕ್ಕಳು ಹೋಗುತ್ತಿದ್ದು ಪೊಷಕರಲ್ಲಿ ಮತ್ತಷ್ಟು ಆತಂಕ ಸೃಷ್ಟಿಸಿದೆ. ದಾರಿ ಮಧ್ಯೆ ಗಿಡಗಂಟಿಗಳು ಬೆಳೆದಿದ್ದು ಇನ್ನೂ ತೆರವುಗೊಳಿಸುವ ಕಾರ್ಯ ನಡೆದಿಲ್ಲ ಚಿರತೆ ಎಲ್ಲಿ ಇದರಲ್ಲಿ ಅವಿತುಕೊಳ್ಳುತ್ತದೆ ಎಂಬ ಭಯ ಜನರಲ್ಲಿದ್ದು ಅರಣ್ಯ ಇಲಾಖೆಗೆ ನಾಗರೀಕರು ಮಾಹಿತಿ ತಿಳಿಸಿದ್ದಾರೆ. ಇನ್ನೂ ತಾಲೂಕಿನ ಪಾಲೇದು ಪರಿಸರದಲ್ಲಿ ಚಿರತೆ ಓಡಾಟ ನಡೆಸಿದ ಘಟನೆ ನಡೆದಿದೆ.

Related posts

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya

ಪದ್ಮುಂಜ ಸರಕಾರಿ ಪ. ಪೂ. ಕಾಲೇಜಿಗೆ ಶೇ. 86.04 ಫಲಿತಾಂಶ

Suddi Udaya

ಕೊಕ್ಕಡ: ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸಾವು

Suddi Udaya

ಉಪ್ಪಾರಪಳಿಕೆ ಸ.ಹಿ.ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

Suddi Udaya

ಕೆಎಸ್ ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ ಹಾಗೂ ದಂಡ ಪ್ರಕಟ

Suddi Udaya

ಕಳೆಂಜ ಸಂತ ಸೆಬಾಸ್ಟಿಯನ್ ದೇವಾಲಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರಕ್ಕೆ ಚಾಲನೆ

Suddi Udaya
error: Content is protected !!