September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಎಂಡಿಎಂಎ ಮಾದಕ ವಸ್ತು ಮಾರಾಟಕ್ಕೆ ಯತ್ನ ; ಓರ್ವ ಆರೋಪಿ ಬಂಧನ

ಬೆಳ್ತಂಗಡಿ: ಅಕ್ರಮವಾಗಿ ಮಾರಾಟ ಮಾಡಲು ಕಾರಿನಲ್ಲಿ ಮಾದಕವಸ್ತು ಎಮ್.ಡಿ.ಎಮ್.ಎ ಸಂಗ್ರಹಿಸಿಟ್ಟದ್ದನ್ನು ಬೆಳ್ತಂಗಡಿ ಪೊಲೀಸರು ಪತ್ತೆಹಚ್ಚಿ ಓರ್ವ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಳ್ತಂಗಡಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದಡ್ಕ ರಸ್ತೆಯಲ್ಲಿ ಜ.3 ರಂದು ಸಂಜೆ 5:45 ಕ್ಕೆ ಬೆಳ್ತಂಗಡಿ ಸಬ್‌ ಇನ್ಸ್‌ಪೆಕ್ಟರ್ ಆನಂದ್.ಎಮ್ ನೇತೃತ್ವದ ತಂಡ ರೌಡ್ಸ್ ನಲ್ಲಿರುವಾಗ ಅನುಮಾನಸ್ಪದವಾಗಿ ರಸ್ತೆ ಪಕ್ಕದಲ್ಲಿ ನಿಂತಿದ್ದ KA-19-MG-4669 ನಂಬರಿನ ಐ20 ಕಾರನ್ನು ಪರಿಶೀಲನೆ ಮಾಡಿದಾಗ ಸದ್ರಿ ಕಾರಿನ ಒಳಗಡೆ ಮಾದಕ ವಸ್ತು ಎಮ್.ಡಿ.ಎಮ್.ಎ ಪತ್ತೆಯಾಗಿದೆ.ಕಾರಿನೊಳಗಡೆ ಖಾಲಿ ಸಿಗರೇಟ್ ಪ್ಯಾಕ್ ಒಳಗಡೆ ಎಮ್.ಡಿ.ಎಮ್.ಎ ಮಾದಕವಸ್ತುವನ್ನು ಸಣ್ಣ ಸಣ್ಣ ಪ್ಯಾಕ್ ಗಳನ್ನು ಮಾಡಿ ತುಂಬಿಸಿ ಮಾರಾಟ ಮಾಡಲು ಸಂಗ್ರಹಿಸಿಟ್ಟಿದ್ದ 5,54,800 ರೂಪಾಯಿಯ 55.48 ಗ್ರಾಂ ಎಮ್.ಡಿ.ಎಮ್.ಎ ಮಾದಕವಸ್ತು ಪತ್ತೆಯಾಗಿದೆ.

6 ಲಕ್ಷ ರೂಪಾಯಿ ಮೌಲ್ಯದ ಐ20 ಕಾರನ್ನು ವಶಪಡಿಸಿಕೊಂಡಿದ್ದು. ಕಾರು ಮತ್ತು ಮಾದಕವಸ್ತುವಿನ ಮೌಲ್ಯ 11,54,800 ರೂಪಾಯಿ ಅಗಿದೆ.ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಪೊಲೀಸರು ಮೊದಲ ಭಾರಿಗೆ ಎಮ್.ಡಿ.ಎಮ್.ಎ ಮಾದಕವಸ್ತು ಭೇಟಿಯಾಡಿದ ಪ್ರಕರಣವಾಗಿದೆ.ಮಾದಕವಸ್ತು ಮಾರಾಟ ಮಾಡಲು ಕಾರಿನಲ್ಲಿ ಸಂಗ್ರಹಿಸಿಟ್ಟಿದ್ದ ಮಂಗಳೂರು ನಗರದ ದೇರಳಕಟ್ಟೆಯ ಕೋಟೆಕಾರು ನಿವಾಸಿ ಅಬುಬಕ್ಕರ್ ಮಗ ಉಮರ್ ಶರೀಫ್(42) ಬಂಧಿತ ಆರೋಪಿಯಾಗಿದ್ದು.

ಈತನು ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದಡ್ಕದಲ್ಲಿ ಎಫ್.ಎ ಜ್ಯೂಸ್ ಹೌಸ್ ಅಂಗಡಿ ಹೊಂದಿದ್ದಾನೆ.ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಇನ್ಸ್‌ಪೆಕ್ಟರ್ ಸುಬ್ಬಪೂರ್ ಮಠ ನೇತೃತ್ವದಲ್ಲಿ ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಆನಂದ್.ಎಮ್ ತಂಡದ ಎಎಸ್ಐ ತಿಲಕ್ ರಾಜ್, ಪಂಪಾಪತಿ, ಶ್ರೀನಿವಾಸ , ಗಿರೀಶ್,ಪ್ರಕಾಶ್ ಪೂಜಾರಿ,ಜಗದೀಶ್,ಧರಿಶ್, ಯಮನಪ್ಪ, ದುಂಡಪ್ಪ ಹಾಗೂ ಎಫ್ಎಸ್ಎಲ್ ವಿಭಾಗದ ಸೊಕೊ ತಂಡದ ಅರ್ಪಿತಾ,ಕಾವ್ಯ ಶ್ರೀ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ದ್ವಿತೀಯ ಗಮಕ ಸಮ್ಮೇಳನ

Suddi Udaya

ದ.ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ, ನಿಕಟಪೂರ್ವ ಮಂಡಲಾಧ್ಯಕ್ಷ ಜಯಂತ್ ಕೋಟ್ಯಾನ್ ಆಯ್ಕೆ

Suddi Udaya

ಸರಳಿಕಟ್ಟೆ ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಉಪನ್ಯಾಸ

Suddi Udaya

ಕಣಿಯೂರು ವಲಯದ ಅಂಡೆತಡ್ಕ ಕಾರ್ಯಕ್ಷೇತ್ರದಲ್ಲಿ ಸೃಜನಾ ಶೀಲಾ ಕಾರ್ಯಕ್ರಮ

Suddi Udaya

ಜೈನಮುನಿ ಶ್ರೀ ಕಾಮಕುಮಾರ ನಂದಿ ಮಹಾರಾಜರ ಹತ್ಯೆಗೆ ಬೆಳ್ತಂಗಡಿ ಜೈನ ಸಮಾಜದ ಸಂಘಟನೆಗಳಿಂದ ಖಂಡನೆ: ಸಮಗ್ರ ತನಿಖೆಗೆ ಒತ್ತಾಯಿಸಿ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿಗೆ ಮನವಿ

Suddi Udaya
error: Content is protected !!