23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಲ್ಮಂಜ ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಗುರುನಮನ ಕಾರ್ಯಕ್ರಮ

ಕಲ್ಮಂಜ: ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮದ ಗುರುನಮನ ಕಾರ್ಯಕ್ರಮವು ಜ.4ರಂದು ಜ್ಞಾನದೀಪ ಸಭಾಂಗಣದಲ್ಲಿ ಜರುಗಿತು.ಸಭಾಧ್ಯಕ್ಷತೆಯನ್ನು ಶತಮಾನೋತ್ಸವ ಸಮಿತಿ ಗೌರವಾಧ್ಯಕ್ಷ ಮಂಜುನಾಥ ಶೆಟ್ಟಿ ವಹಿಸಿದ್ದರು. ನಾವೂರ ಆರೋಗ್ಯ ಕ್ಲಿನಿಕ್ ನ ವೈದ್ಯಾಧಿಕಾರಿ ಡಾ. ಪ್ರದೀಪ್ ನಾವೂರ ಅವರು ಮುಖ್ಯ ಭಾಷಣಕಾರರಾಗಿ ಆಗಮಿಸಿದರು.

ವೇದಿಕೆಯಲ್ಲಿ ಶಾಸಕ ಹರೀಶ್ ಪೂಂಜ, ಎಸ್.ಕೆ.ಡಿ.ಆರ್.ಡಿ.ಪಿ. ತಾಲೂಕು ಯೋಜನಾಧಿಕಾರಿ ಯಶೋಧರ, ಶತ ಮಾನೋತ್ಸವ ಸಮಿತಿ ಅಧ್ಯಕ್ಷ ಪ್ರವೀಣ್ ಫೆರ್ನಾಂಡಿಸ್, ಹಿರಿಯ ವಿದ್ಯಾರ್ಥಿಗಳಾದ ಕೆಂಪಯ್ಯ ಮಡಿವಾಳ, ಕೊರಗಪ್ಪ ಗೌಡ, ವಿಜೆ ಪೌಲೋಸ್, ಶಾರದಾ ಭಂಡಾರ್ಕರ್, ಡೊಂಬಯ್ಯ ಟಿ., ಅಬ್ದುಲ್ ಅಜೀದ್, ಉಜಿರೆ ಮಂಜುಶ್ರೀ ಪ್ರಿಂಟರ್ಸ್ ಮ್ಯಾನೇಜರ್ ಶೇಖರ್ ಟಿ.ನಿಡಿಗಲ್ ಶ್ರೀ ಮಹಾ ಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರ ನಾಗೇಶ್ ಪ್ರಭು, ಕಲ್ಲಾಡಿ ಸರಕಾರಿ ಪ್ರೌಢ ಶಾಲೆ ಮುಖ್ಯೋಪಾಧ್ಯಾಯಿನಿ ವಿ.ಜೆ ರೋಸ, ದೈಹಿಕ ಶಿಕ್ಷಣ ಶಿಕ್ಷಕ ಶೀನ ಅಕ್ಷಯನಗರ, ಉಜಿರೆ ಸಂತ ಅಂಥೋನಿ ಚರ್ಚ್ ಮಾಜಿ ಉಪಾಧ್ಯಕ್ಷ ಅಂತೋನಿ ಫೆರ್ನಾಂಡಿಸ್, ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಚಿದಾನಂದ ಮಂಟಮೆ ಉಪಸ್ಥಿತರಿದ್ದರು.

ಕಳೆದ ನೂರು ವರ್ಷಗಳ ಅವಧಿಯಲ್ಲಿ ಶಾಲೆಯಲ್ಲಿ ಸೇವೆ ಸಲ್ಲಿಸಿರುವ ಗುರುವರೇಣ್ಯರುಗಳಾದ ಬಿ. ಬಾಬು ಗೌಡ ಬಾಜಿಮಾರ್‌, ರಘುಪತಿ ಭಟ್, ಗಿರೀಶ್ ಪ್ರಭು, ಯಶೋಧ, ಜಯ, ಶಾಂತಾ, ದಮಯಂತಿ, ಸೀತಾ ಆರ್ ಸೇಠ್ , ಇಶಾಕ್ ಸಾಹೇಬ್ ಸಿ, ಚಂಪಾವತಿ, ಶೀಲಾವತಿ ಕೆ., ಸುರೇಖಾ, ಮಂಜುಳಾ, ಶಿಲ್ಪಾ ಡಿ, ಐಶ್ವರ್ಯ, ನಮಿತಾ, ಜ್ಯೋತಿ ರವರುಗಳಿಗೆ ಗುರುನಮನ ಸಲ್ಲಿಸಲಾಯಿತು. ಶತಮಾನೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬ್ರಾಯ ನಿರೂಪಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹಮೀದ್ ಬಿಎನ್ ಸ್ವಾಗತಿಸಿದರು.

Related posts

ಶ್ರೀ ಧ.ಮಂ. ಪ.ಪೂ.ಕಾಲೇಜಿನ ಸಂಸ್ಕೃತ ವಿಭಾಗ ಹಾಗೂ ಸಂಸ್ಕೃತ ಸಂಘದ ಆಶ್ರಯದಲ್ಲಿ ಗೀತಾ ಜಯಂತಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಪಾರೆಂಕಿ ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಓಡಿಲ್ನಾಳ 149 ಬೂತ್ ಸಮಿತಿ ಅಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ಆಯ್ಕೆ

Suddi Udaya

ಸುಲ್ಕೇರಿ: ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

Suddi Udaya

ಓಡಿಲ್ನಾಳ : ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮ

Suddi Udaya
error: Content is protected !!