30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಲ್ಮಂಜ ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಗುರುನಮನ ಕಾರ್ಯಕ್ರಮ

ಕಲ್ಮಂಜ: ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮದ ಗುರುನಮನ ಕಾರ್ಯಕ್ರಮವು ಜ.4ರಂದು ಜ್ಞಾನದೀಪ ಸಭಾಂಗಣದಲ್ಲಿ ಜರುಗಿತು.ಸಭಾಧ್ಯಕ್ಷತೆಯನ್ನು ಶತಮಾನೋತ್ಸವ ಸಮಿತಿ ಗೌರವಾಧ್ಯಕ್ಷ ಮಂಜುನಾಥ ಶೆಟ್ಟಿ ವಹಿಸಿದ್ದರು. ನಾವೂರ ಆರೋಗ್ಯ ಕ್ಲಿನಿಕ್ ನ ವೈದ್ಯಾಧಿಕಾರಿ ಡಾ. ಪ್ರದೀಪ್ ನಾವೂರ ಅವರು ಮುಖ್ಯ ಭಾಷಣಕಾರರಾಗಿ ಆಗಮಿಸಿದರು.

ವೇದಿಕೆಯಲ್ಲಿ ಶಾಸಕ ಹರೀಶ್ ಪೂಂಜ, ಎಸ್.ಕೆ.ಡಿ.ಆರ್.ಡಿ.ಪಿ. ತಾಲೂಕು ಯೋಜನಾಧಿಕಾರಿ ಯಶೋಧರ, ಶತ ಮಾನೋತ್ಸವ ಸಮಿತಿ ಅಧ್ಯಕ್ಷ ಪ್ರವೀಣ್ ಫೆರ್ನಾಂಡಿಸ್, ಹಿರಿಯ ವಿದ್ಯಾರ್ಥಿಗಳಾದ ಕೆಂಪಯ್ಯ ಮಡಿವಾಳ, ಕೊರಗಪ್ಪ ಗೌಡ, ವಿಜೆ ಪೌಲೋಸ್, ಶಾರದಾ ಭಂಡಾರ್ಕರ್, ಡೊಂಬಯ್ಯ ಟಿ., ಅಬ್ದುಲ್ ಅಜೀದ್, ಉಜಿರೆ ಮಂಜುಶ್ರೀ ಪ್ರಿಂಟರ್ಸ್ ಮ್ಯಾನೇಜರ್ ಶೇಖರ್ ಟಿ.ನಿಡಿಗಲ್ ಶ್ರೀ ಮಹಾ ಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರ ನಾಗೇಶ್ ಪ್ರಭು, ಕಲ್ಲಾಡಿ ಸರಕಾರಿ ಪ್ರೌಢ ಶಾಲೆ ಮುಖ್ಯೋಪಾಧ್ಯಾಯಿನಿ ವಿ.ಜೆ ರೋಸ, ದೈಹಿಕ ಶಿಕ್ಷಣ ಶಿಕ್ಷಕ ಶೀನ ಅಕ್ಷಯನಗರ, ಉಜಿರೆ ಸಂತ ಅಂಥೋನಿ ಚರ್ಚ್ ಮಾಜಿ ಉಪಾಧ್ಯಕ್ಷ ಅಂತೋನಿ ಫೆರ್ನಾಂಡಿಸ್, ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಚಿದಾನಂದ ಮಂಟಮೆ ಉಪಸ್ಥಿತರಿದ್ದರು.

ಕಳೆದ ನೂರು ವರ್ಷಗಳ ಅವಧಿಯಲ್ಲಿ ಶಾಲೆಯಲ್ಲಿ ಸೇವೆ ಸಲ್ಲಿಸಿರುವ ಗುರುವರೇಣ್ಯರುಗಳಾದ ಬಿ. ಬಾಬು ಗೌಡ ಬಾಜಿಮಾರ್‌, ರಘುಪತಿ ಭಟ್, ಗಿರೀಶ್ ಪ್ರಭು, ಯಶೋಧ, ಜಯ, ಶಾಂತಾ, ದಮಯಂತಿ, ಸೀತಾ ಆರ್ ಸೇಠ್ , ಇಶಾಕ್ ಸಾಹೇಬ್ ಸಿ, ಚಂಪಾವತಿ, ಶೀಲಾವತಿ ಕೆ., ಸುರೇಖಾ, ಮಂಜುಳಾ, ಶಿಲ್ಪಾ ಡಿ, ಐಶ್ವರ್ಯ, ನಮಿತಾ, ಜ್ಯೋತಿ ರವರುಗಳಿಗೆ ಗುರುನಮನ ಸಲ್ಲಿಸಲಾಯಿತು. ಶತಮಾನೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬ್ರಾಯ ನಿರೂಪಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹಮೀದ್ ಬಿಎನ್ ಸ್ವಾಗತಿಸಿದರು.

Related posts

ರೇಷ್ಮೆರೋಡ್: ಅಶ್ವತನಗರ ನವರಾತ್ರಿ ಪೂಜೆ

Suddi Udaya

ನದಿಗೆ ಈಜಲು ಹೋದ ಯುವಕ ನೀರಲ್ಲಿ ಮುಳುಗಿ ಸಾವು

Suddi Udaya

ವೇಣೂರು ಐಟಿಐಯಲ್ಲಿ ರಾಷ್ಟ್ರೀಯ/ಬಹುರಾಷ್ಟ್ರೀಯ ಕಂಪನಿಗಳಿಂದ ಕ್ಯಾಂಪಸ್ ಸಂದರ್ಶನ

Suddi Udaya

ಉರುವಾಲು: ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ವತಿಯಿಂದ ವಿಶ್ವ ಮಹಿಳಾ ದಿನದ ಅಂಗವಾಗಿ ಆರ್ಥಿಕ ನೆರವು

Suddi Udaya

ಮಡಂತ್ಯಾರು: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಜೇನು ಕೃಷಿ ತರಬೇತಿ ಹಾಗೂ ಭತ್ತದ ಕೃಷಿ ಉತ್ಪಾದನೆ ಬಗ್ಗೆ ಮಾಹಿತಿ

Suddi Udaya
error: Content is protected !!