March 7, 2026
ಗ್ರಾಮಾಂತರ ಸುದ್ದಿವರದಿ

ಬಜಿರೆ: ಚಿರತೆ ಓಡಾಟ-ಜನರಲ್ಲಿ ಆತಂಕ

ವೇಣೂರು: ವೇಣೂರು ವಲಯ ಅರಣ್ಯ ಇಲಾಖೆಗೆ ಒಳಪಡುವ ಬಜಿರೆ ಗ್ರಾಮದ ಹೊಸಪಟ್ಣ, ಹೊಸ ಬಜಿರೆ, ಅಜ್ಜಿಬೆಟ್ಟು ಪರಿಸರದಲ್ಲಿ ಕಳೆದ ಹಲವು ದಿನಗಳಿಂದ ಎರಡು ಚಿರತೆಗಳು ಓಡಾಟ ನಡೆಸುತ್ತಿದ್ದು ಜನರಲ್ಲಿ ಆತಂಕ ಸೃಷ್ಟಿಸಿದೆ.

ಇದೀಗ ತಡ ರಾತ್ರಿ ಜ.4 ರಂದು ಹೊಸ ಬಜಿರೆ ಎಂಬಲ್ಲಿ ರಬ್ಬರ್ ತೋಟದಲ್ಲಿ ಚಿರತೆ ಓಡಾಟ ನಡೆಸಿದ ದೃಶ್ಯವನ್ನು ಕೃಷಿಕರೊಬ್ಬರು ಸೆರೆಹಿಡಿದಿದ್ದಾರೆ. ದೈತ್ಯಾಕಾರದ ಚಿರತೆ ಇದಾಗಿದ್ದು ಜನರು ಭಯಭೀತರಾಗಿದ್ದಾರೆ. ಈಗಾಗಲೇ ದನ, ನಾಯಿ ದಿನದಿಂದ ದಿನಕ್ಕೆ ಚಿರತೆ ಪಾಲಾಗುತ್ತಿದೆ. ಹೊಸಪಟ್ಣದಲ್ಲಿ ಚಿರತೆ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅಲ್ಲದೆ ರಾತ್ರಿ ವೇಳೆ ಚಿರತೆ ಕೂಗುವ ಶಬ್ದ ಕೇಳಿ ಜನರು ಭಯಭೀತರಾಗಿದ್ದಾರೆ.

ಹೊಸಪಟ್ಣವಾಗಿ ಶಾಲಾ, ಕಾಲೇಜು ಹಾಗೂ ಅಂಗನವಾಡಿ ಕೇಂದ್ರದ ಮಕ್ಕಳು ಹೋಗುತ್ತಿದ್ದು ಪೊಷಕರಲ್ಲಿ ಮತ್ತಷ್ಟು ಆತಂಕ ಸೃಷ್ಟಿಸಿದೆ. ದಾರಿ ಮಧ್ಯೆ ಗಿಡಗಂಟಿಗಳು ಬೆಳೆದಿದ್ದು ಇನ್ನೂ ತೆರವುಗೊಳಿಸುವ ಕಾರ್ಯ ನಡೆದಿಲ್ಲ ಚಿರತೆ ಎಲ್ಲಿ ಇದರಲ್ಲಿ ಅವಿತುಕೊಳ್ಳುತ್ತದೆ ಎಂಬ ಭಯ ಜನರಲ್ಲಿದ್ದು ಅರಣ್ಯ ಇಲಾಖೆಗೆ ನಾಗರೀಕರು ಮಾಹಿತಿ ತಿಳಿಸಿದ್ದಾರೆ. ಇನ್ನೂ ತಾಲೂಕಿನ ಪಾಲೇದು ಪರಿಸರದಲ್ಲಿ ಚಿರತೆ ಓಡಾಟ ನಡೆಸಿದ ಘಟನೆ ನಡೆದಿದೆ.

Related posts

ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಬಡಗಕಾರಂದೂರು ಸ.ಹಿ.ಪ್ರಾ, ಶಾಲೆಯಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ವೇದವ್ಯಾಸ ಶಿಶುಮಂದಿರ ಹಾಗೂ ಬಾಲಗೋಕುಲದ ಪುಟಾಣಿಗಳ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ನೇತ್ರಾಳ ನಿವಾಸಿ ಚೇತನ್ ದಾಮಲೆ ನಿಧನ

Suddi Udaya

ಎಸ್.ಡಿ.ಎಂ. ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ವ್ಯಸನದ ಬಗ್ಗೆ ಅಂತರ್ಜಾಲ ಬಳಸಿ ಪಿಪಿಟಿ ಸ್ಪರ್ಧಾ ಕಾರ್ಯಕ್ರಮ

Suddi Udaya

ಬಡಗಕಾರಂದೂರು ಶಾಲಾಭಿವೃದ್ಧಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಶಾಲಾ ಎಸ್.ಡಿ.ಎಂ.ಸಿ ಯಿಂದ ಶಾಸಕ ಹರೀಶ್ ಪೂಂಜಾರವರಿಗೆ ಮನವಿ ಸಲ್ಲಿಕೆ

Suddi Udaya
error: Content is protected !!