25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿವರದಿ

ಬಜಿರೆ: ಚಿರತೆ ಓಡಾಟ-ಜನರಲ್ಲಿ ಆತಂಕ

ವೇಣೂರು: ವೇಣೂರು ವಲಯ ಅರಣ್ಯ ಇಲಾಖೆಗೆ ಒಳಪಡುವ ಬಜಿರೆ ಗ್ರಾಮದ ಹೊಸಪಟ್ಣ, ಹೊಸ ಬಜಿರೆ, ಅಜ್ಜಿಬೆಟ್ಟು ಪರಿಸರದಲ್ಲಿ ಕಳೆದ ಹಲವು ದಿನಗಳಿಂದ ಎರಡು ಚಿರತೆಗಳು ಓಡಾಟ ನಡೆಸುತ್ತಿದ್ದು ಜನರಲ್ಲಿ ಆತಂಕ ಸೃಷ್ಟಿಸಿದೆ.

ಇದೀಗ ತಡ ರಾತ್ರಿ ಜ.4 ರಂದು ಹೊಸ ಬಜಿರೆ ಎಂಬಲ್ಲಿ ರಬ್ಬರ್ ತೋಟದಲ್ಲಿ ಚಿರತೆ ಓಡಾಟ ನಡೆಸಿದ ದೃಶ್ಯವನ್ನು ಕೃಷಿಕರೊಬ್ಬರು ಸೆರೆಹಿಡಿದಿದ್ದಾರೆ. ದೈತ್ಯಾಕಾರದ ಚಿರತೆ ಇದಾಗಿದ್ದು ಜನರು ಭಯಭೀತರಾಗಿದ್ದಾರೆ. ಈಗಾಗಲೇ ದನ, ನಾಯಿ ದಿನದಿಂದ ದಿನಕ್ಕೆ ಚಿರತೆ ಪಾಲಾಗುತ್ತಿದೆ. ಹೊಸಪಟ್ಣದಲ್ಲಿ ಚಿರತೆ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅಲ್ಲದೆ ರಾತ್ರಿ ವೇಳೆ ಚಿರತೆ ಕೂಗುವ ಶಬ್ದ ಕೇಳಿ ಜನರು ಭಯಭೀತರಾಗಿದ್ದಾರೆ.

ಹೊಸಪಟ್ಣವಾಗಿ ಶಾಲಾ, ಕಾಲೇಜು ಹಾಗೂ ಅಂಗನವಾಡಿ ಕೇಂದ್ರದ ಮಕ್ಕಳು ಹೋಗುತ್ತಿದ್ದು ಪೊಷಕರಲ್ಲಿ ಮತ್ತಷ್ಟು ಆತಂಕ ಸೃಷ್ಟಿಸಿದೆ. ದಾರಿ ಮಧ್ಯೆ ಗಿಡಗಂಟಿಗಳು ಬೆಳೆದಿದ್ದು ಇನ್ನೂ ತೆರವುಗೊಳಿಸುವ ಕಾರ್ಯ ನಡೆದಿಲ್ಲ ಚಿರತೆ ಎಲ್ಲಿ ಇದರಲ್ಲಿ ಅವಿತುಕೊಳ್ಳುತ್ತದೆ ಎಂಬ ಭಯ ಜನರಲ್ಲಿದ್ದು ಅರಣ್ಯ ಇಲಾಖೆಗೆ ನಾಗರೀಕರು ಮಾಹಿತಿ ತಿಳಿಸಿದ್ದಾರೆ. ಇನ್ನೂ ತಾಲೂಕಿನ ಪಾಲೇದು ಪರಿಸರದಲ್ಲಿ ಚಿರತೆ ಓಡಾಟ ನಡೆಸಿದ ಘಟನೆ ನಡೆದಿದೆ.

Related posts

ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿ ಪರಾರಿ

Suddi Udaya

ರಕ್ಷಿತ್ ಶಿವರಾಂ ಬೆಂಗಳೂರಿನಿಂದ ಬೆಳ್ತಂಗಡಿಗೆ ಆಮದು ಆದ ನಾಯಕನಾದರೆ, ಬೆಂಗಳೂರಿನಲ್ಲಿದ್ದ ಹರೀಶ್ ಪೂಂಜ ಬೆಳ್ತಂಗಡಿಗೆ ಆಮದು ಆಗಿ ಚುನಾವಣೆಗೆ ನಿಲ್ಲಲಿಲ್ಲವೇ: ಧರಣೇಂದ್ರ ಕುಮಾರ್

Suddi Udaya

ಚಾರ್ಮಾಡಿ: ಹೊಸಮಠ ಎಂಬಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಪ್ರತ್ಯಕ್ಷ: ಆತಂಕಗೊಂಡ ಜನರು

Suddi Udaya

ಮಾಲಾಡಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ರೂ 1.0 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಾಲಾಡಿ ಗ್ರಾಮದ ಪೆರ್ಡೆ ಕ್ರಾಸ್ ನಿಂದ ಊರ್ಲ ಕಾಂಕ್ರೀಟೀಕರಣ ರಸ್ತೆ ಕಾಮಗಾರಿ ಉದ್ಘಾಟನೆ

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya

ಎಸ್.ಡಿ.ಪಿಐ ಕುವೆಟ್ಟು ಗ್ರಾಮ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!