ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ

ಅರಸಿನಮಕ್ಕಿ : ಸಹೃದಯಿಗಳಾದ ಹಿರಿಯ ವಿದ್ಯಾರ್ಥಿಗಳು, ವಿದ್ಯಾಭಿಮಾನಿಗಳು ಹಾಗೂ ದಾನಿಗಳಿಂದ ನವೀಕೃತಗೊಂಡಿರುವ ಸರಕಾರಿ ಪ್ರೌಢಶಾಲೆ ಅರಸಿನಮಕ್ಕಿಯ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮವು ಜ. 4ರಂದು ಜರುಗಿತು.

ಕಾರ್ಯಕ್ರಮವನ್ನು ಮಂಗಳೂರಿನ ಉದ್ಯಮಿ ಚಂದ್ರಹಾಸ ಶೆಟ್ಟಿ ಫಲಸ್ತಡ್ಕ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ವಾಮನ್ ತಾಮನ್ಕರ್ ವಹಿಸಿದ್ದರು. ವೇದಿಕೆಯಲ್ಲಿ ಕೃಷಿಕರಾದ ಕಾಶಿನಾಥ್ ದಾಮ್ಲೆ, ಕಂಟ್ರಾಕ್ಟರ್ ಶ್ರೀನಿಧಿ, ನಿವೃತ್ತ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ವಾಲ್ಟರ್ ಡಿ’ಮೆಲ್ಲೊ, ನಿವೃತ್ತ ಮುಖ್ಯ ಶಿಕ್ಷಕ ಗಣೇಶ್ ಐತಾಳ್, ಗ್ರಾ. ಪಂ. ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ. ಎಸ್., ಅರಸಿನಮಕ್ಕಿ ಕಾಲೇಜಿನ ಪ್ರಾಂಶುಪಾಲ ರಾಮಯ್ಯ ಶೆಟ್ಟಿ ಹತ್ಯಡ್ಕ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್, ಶಿಕ್ಷಣ ಸಂಯೋಜಕಿ ಚೇತನಾಕ್ಷಿ, ಶಿವಾನಂದ ಮಯ್ಯ ಮೈಪಾಲ, ಸುಬ್ರಹ್ಮಣ್ಯ ಭಟ್ ಪಡ್ಡಾಯಿಬೆಟ್ಟು, ಎಸ್ ಡಿ ಎಂ ಸಿ ಅಧ್ಯಕ್ಷ ಗಣೇಶ್ ಕುಲಾಲ್, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಮಂಜುಳಾ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ಮಂಜುಳಾ, ಶಿಕ್ಷಕಿಯರಾದ ಮೀನಾಕ್ಷಿ, ಶ್ರೀಚೇತನಾ, ಅತಿಥಿ ಶಿಕ್ಷಕರು, ಅಡುಗೆಯವರು, ದಾನಿಗಳನ್ನು, ನಿವೃತ್ತ ಯೋಧರನ್ನು, ವಿವಿಧ ಬ್ಯಾಚ್ ನವರನ್ನು ಅಭಿನಂದಿಸಲಾಯಿತು. 2013-14ರ ಬ್ಯಾಚ್ ನ ಪ್ರಶಾಂತ್ ಮತ್ತು ತಂಡದವರು ಶಾಲೆಗೆ ಫ್ಯಾನ್ ಹಾಗೂ ಪ್ರಿಂಟರ್ ನೀಡಿದರು.

ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಶಿಕ್ಷಕಿ ಚೇತನಾ ಕುಮಾರಿ ಎಸ್. ಸ್ವಾಗತಿಸಿದರು. ಮುಖ್ಯ ಶಿಕ್ಷಕಿ ಮಂಜುಳಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಶ್ರೀಚೇತನಾ ಕಾರ್ಯಕ್ರಮ ನಿರೂಪಿಸಿ, ನಿಡ್ಲೆ ಪ್ರೌಢಶಾಲಾ ಶಿಕ್ಷಕ ಶರತ್ ಧನ್ಯವಾದವಿತ್ತರು.

Related posts

ಕಕ್ಕಿಂಜೆ ಶಾಲೆಯಲ್ಲಿ ಮಕ್ಕಳ ಮೇಲೆ ಹೆಜ್ಜೇನು ದಾಳಿ: ಆಸ್ಪತ್ರೆಗೆ ದಾಖಲು

Suddi Udaya

ಡಿ 19 :ಉಜಿರೆ  ಗ್ರಾ.ಪಂ.ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸ. ಸಂಘದಿಂದ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

Suddi Udaya

ಕರೆಮಾಡಿದ ತಕ್ಷಣ ರೈತರ ಮನೆಬಾಗಿಲಿಗೆ ಬರಲಿದೆ ಪಶು ಸಂಜೀವಿನಿ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಮಹಾಸಭೆ

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ಶಿಕ್ಷಕರಿಗೆ “ಕಲಿಕಾ ಫಲಿತಾಂಶ ಮತ್ತು ವಿಧಾನಗಳು” ಕಾರ್ಯಾಗಾರ

Suddi Udaya
error: Content is protected !!