25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ

ಅರಸಿನಮಕ್ಕಿ : ಸಹೃದಯಿಗಳಾದ ಹಿರಿಯ ವಿದ್ಯಾರ್ಥಿಗಳು, ವಿದ್ಯಾಭಿಮಾನಿಗಳು ಹಾಗೂ ದಾನಿಗಳಿಂದ ನವೀಕೃತಗೊಂಡಿರುವ ಸರಕಾರಿ ಪ್ರೌಢಶಾಲೆ ಅರಸಿನಮಕ್ಕಿಯ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮವು ಜ. 4ರಂದು ಜರುಗಿತು.

ಕಾರ್ಯಕ್ರಮವನ್ನು ಮಂಗಳೂರಿನ ಉದ್ಯಮಿ ಚಂದ್ರಹಾಸ ಶೆಟ್ಟಿ ಫಲಸ್ತಡ್ಕ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ವಾಮನ್ ತಾಮನ್ಕರ್ ವಹಿಸಿದ್ದರು. ವೇದಿಕೆಯಲ್ಲಿ ಕೃಷಿಕರಾದ ಕಾಶಿನಾಥ್ ದಾಮ್ಲೆ, ಕಂಟ್ರಾಕ್ಟರ್ ಶ್ರೀನಿಧಿ, ನಿವೃತ್ತ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ವಾಲ್ಟರ್ ಡಿ’ಮೆಲ್ಲೊ, ನಿವೃತ್ತ ಮುಖ್ಯ ಶಿಕ್ಷಕ ಗಣೇಶ್ ಐತಾಳ್, ಗ್ರಾ. ಪಂ. ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ. ಎಸ್., ಅರಸಿನಮಕ್ಕಿ ಕಾಲೇಜಿನ ಪ್ರಾಂಶುಪಾಲ ರಾಮಯ್ಯ ಶೆಟ್ಟಿ ಹತ್ಯಡ್ಕ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್, ಶಿಕ್ಷಣ ಸಂಯೋಜಕಿ ಚೇತನಾಕ್ಷಿ, ಶಿವಾನಂದ ಮಯ್ಯ ಮೈಪಾಲ, ಸುಬ್ರಹ್ಮಣ್ಯ ಭಟ್ ಪಡ್ಡಾಯಿಬೆಟ್ಟು, ಎಸ್ ಡಿ ಎಂ ಸಿ ಅಧ್ಯಕ್ಷ ಗಣೇಶ್ ಕುಲಾಲ್, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಮಂಜುಳಾ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ಮಂಜುಳಾ, ಶಿಕ್ಷಕಿಯರಾದ ಮೀನಾಕ್ಷಿ, ಶ್ರೀಚೇತನಾ, ಅತಿಥಿ ಶಿಕ್ಷಕರು, ಅಡುಗೆಯವರು, ದಾನಿಗಳನ್ನು, ನಿವೃತ್ತ ಯೋಧರನ್ನು, ವಿವಿಧ ಬ್ಯಾಚ್ ನವರನ್ನು ಅಭಿನಂದಿಸಲಾಯಿತು. 2013-14ರ ಬ್ಯಾಚ್ ನ ಪ್ರಶಾಂತ್ ಮತ್ತು ತಂಡದವರು ಶಾಲೆಗೆ ಫ್ಯಾನ್ ಹಾಗೂ ಪ್ರಿಂಟರ್ ನೀಡಿದರು.

ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಶಿಕ್ಷಕಿ ಚೇತನಾ ಕುಮಾರಿ ಎಸ್. ಸ್ವಾಗತಿಸಿದರು. ಮುಖ್ಯ ಶಿಕ್ಷಕಿ ಮಂಜುಳಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಶ್ರೀಚೇತನಾ ಕಾರ್ಯಕ್ರಮ ನಿರೂಪಿಸಿ, ನಿಡ್ಲೆ ಪ್ರೌಢಶಾಲಾ ಶಿಕ್ಷಕ ಶರತ್ ಧನ್ಯವಾದವಿತ್ತರು.

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವ: ಹೊರಕಾಣಿಕೆ ಹಾಗೂ ಭಜನೋತ್ಸವ

Suddi Udaya

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಯಕ್ಷಸಂಭ್ರಮ ಉದ್ಘಾಟನೆ: ನಾಲ್ವರು ಯಕ್ಷಗಾನ ತರಬೇತಿ ಗುರುಗಳಿಗೆ ಗೌರವಾರ್ಪಣೆ: 8 ಶಾಲೆಗಳು 480 ಯಕ್ಷ ವಿದ್ಯಾರ್ಥಿಗಳಿಂದ ಯಕ್ಷಗಾನ ರಂಗಪ್ರವೇಶ

Suddi Udaya

ಬಾರ್ಯ ಪ್ರಾ.ಕೃ.ಪ.ಸ.ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಸತೀಶ್ ರವರಿಗೆ ಮಾತೃವಿಯೋಗ

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಹಾಗೂ ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದಿಂದ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಸೋಣಂದೂರು ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಸೋಣಂದೂರು ಶಾಲೆಗೆ ಲ್ಯಾಪ್‌ಟಾಪ್ ಕೊಡುಗೆ

Suddi Udaya

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ಉಜಿರೆ ರುಡ್ ಸೆಟ್ ಸಂಸ್ಥೆಗೆ ಭೇಟಿ

Suddi Udaya
error: Content is protected !!