September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ವಲಯದ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಉಜಿರೆ ವಲಯದ ಉಜಿರೆ ಕಾರ್ಯ ಕ್ಷೇತ್ರದ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ಶ್ರೀ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಉಜಿರೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾ ಕಾರಂತ್ ರವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಜ್ಞಾನ ವಿಕಾಸ ಕೇಂದ್ರದ ಮೂಲಕ ಮಹಿಳೆಯರು ಅಬಿವೃದ್ದಿ ಹೊಂದುತ್ತಿರುವುದು ಸಂತಸದ ಸಂಗತಿಯಾಗಿದೆ ಮಹಿಳೆಯರು ನಾಲ್ಕುಗೋಡೆಯ ಮದ್ಯದಿಂದ ಹೊರಗೆ ಬಂದು ಸಾಮಾಜಿಕವಾಗಿ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕಾದರೆ ಮಾತೃಶ್ರೀ ಅಮ್ಮನವರ ಜ್ಞಾನವಿಕಾಸ ಕಾರ್ಯಕ್ರಮವು ಪ್ರೇರಣೆ ಎಂದಿಗೆ ಆತ್ಮಸ್ಥೈರ್ಯವನ್ನು ನೀಡಿದೆ ಎಲ್ಲರೂ ಇದರ ಪ್ರಯೋಜನವನ್ನು ಪಡೆಯಿರಿ ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಳ್ತಂಗಡಿ ಪೊಲೀಸ್ ಠಾಣೆಯ ಪ್ರಶಾಂತ್ ರವರು ಮಹಿಳೆಯರ ಹಕ್ಕು ಮತ್ತು ಕಾನೂನಿನ ಬಗ್ಗೆ ಹಾಗೂ ಇತ್ತೀಚಿನ ದಿನಗಳಲ್ಲಿ ನಡೆಯುವ ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಿದರು. ತಾಲೂಕಿನ ಯೋಜನಾಧಿಕಾರಿ ಯಶೋಧರ ರವರು ಜ್ಞಾನವಿಕಾಸ ಕೇಂದ್ರದ ಹಿನ್ನೆಲೆ ಮತ್ತು ದೇಯೋದ್ದೇಶಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ವೇದಿಕೆಯಲ್ಲಿ ಜನಜಾಗತಿ ವೇದಿಕೆಯ ತಾಲೂಕು ಸದಸ್ಯರಾದ ಶ್ರೀಮತಿ ಪುಷ್ಪಾವತಿ , ಒಕ್ಕೂಟದ ಅಧ್ಯಕ್ಷೆ ಶೀಲಾವತಿ, ಮೇಲ್ವಿಚಾರಕರಾದ ಶ್ರೀಮತಿ ಪೂರ್ಣಿಮಾ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರದ ಸದಸ್ಯೆ ಶ್ರೀಮತಿ ಲೀಲಾವತಿ ವಹಿಸಿದರು. ಕಾರ್ಯಕ್ರಮದಲ್ಲಿ ವಿನುತಾ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನವನ್ನು ವಿತರಿಸಲಾಯಿತು. ಜ್ಞಾನವಿಕಾಸ ಸಮನ್ವಯಧಿಕಾರಿ ಮಧುರಾ ವಸಂತ್ ನಿರೂಪಿಸಿ, ಸೌಮ್ಯ ಸ್ವಾಗತಿಸಿ, ಸೇವಾ ಪ್ರತಿನಿಧಿ ಪ್ರೇಮಲತಾ ಧನ್ಯವಾದವಿತ್ತರು.

Related posts

ಶಿಶಿಲ: ವೈಕುಂಠಪುರ ನಿವಾಸಿ ಕುಂಞ ಮಲೆಕುಡಿಯ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವೆ ಶ್ರೀಮತಿ ಮೋಟಮ್ಮ ಭೇಟಿ

Suddi Udaya

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕ ಗಳಿಸಿದ ಮಚ್ಚಿನ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪೇಜಾವರ ಶ್ರೀಧರ್ ಭಟ್ ರವರಿಂದ ಪ್ರೋತ್ಸಾಹಧನ ವಿತರಣೆ

Suddi Udaya

ಪರೀಕ ಸೌಖ್ಯವನ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ

Suddi Udaya

ಅಳದಂಗಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಪೋಷಕರ ಸಭೆ

Suddi Udaya

ಉಜಿರೆ ಅನುಗ್ರಹ ಎಲ್.ಕೆ.ಜಿ ವಿದ್ಯಾರ್ಥಿಗಳಿಂದ ಸೃಜನಾತ್ಮಕ ಚಟುವಟಿಕೆ

Suddi Udaya
error: Content is protected !!