March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಮಡಂತ್ಯಾರಿನ ಪದಗ್ರಹಣ ಸಮಾರಂಭ

ಮಡಂತ್ಯಾರು: ಜೆಸಿಐ ಮಡಂತ್ಯಾರಿನ 36 ನೇ ಅಧ್ಯಕ್ಷೆಯಾಗಿ ಹಾಗೂ ದ್ವಿತೀಯ ಮಹಿಳಾ ಅಧ್ಯಕ್ಷೆಯಾಗಿ ಜೇಸಿ ಸಾಯಿಸುಮಾ ಎಂ. ನಾವಡ ಹಾಗೂ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಜ.4 ರಂದು ಮಡಂತ್ಯಾರಿನ ಗಣಪತಿ ಮಂಟಪದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಜೆಸಿಐ ಭಾರತ, ವಲಯ 15 ರ ಅಧ್ಯಕ್ಷರಾದ ಜೆ.ಎಫ್.ಎಫ್. ಸಂತೋಷ ಶೆಟ್ಟಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾದ ನ್ಯಾಯವಾದಿ ಸುರೇಶ್ ಕುಮಾರ್ ಬಿ. ನಾವೂರು ಭಾಗವಹಿಸಿ, ನೂತನ ಪದಾಧಿಕಾರಿಗಳಿಗೆ ಶುಭಹಾರೈಸಿದರು. ಜೆಸಿಐ ಮಡಂತ್ಯಾರಿನ ಪೂರ್ವಾಧ್ಯಕ್ಷರಾದ ಜೇಸಿ ಡಾ. ಹರ್ಷ ಸಂಪಿಗೆತ್ತಾಯ ಹಾಗೂ ಜೆಸಿಐ ಭಾರತ, ವಲಯ 15, ನಂದಿನಿ(ಪ್ರಾಂತ್ಯ ಎ) ಯ ಉಪಾಧ್ಯಕ್ಷರಾದ ಜೆ.ಎಫ್.ಎಮ್. ಅರುಣ್ ಮಾಂಜ ಇವರ ಗೌರವ ಉಪಸ್ಥಿತಿ ಕಾರ್ಯಕ್ರಮದ ಶೋಭೆಯನ್ನು ಹೆಚ್ಚಿಸಿತು.

ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಜೇಸಿ ಅಮಿತಾ ಅಶೋಕ್, ಪೂರ್ವಾಧ್ಯಕ್ಷರಾದ ಜೇಸಿ ವಿಕೇಶ್ ಮಾನ್ಯ, ಕಾರ್ಯದರ್ಶಿ ಜೇಸಿ ಯತೀಶ್ ರೈ ಹಾಗೂ ಯುವ ಜೇಸಿ ಅಧ್ಯಕ್ಷ ಜೆಜೆಸಿ ಕೃಪಾಲ್ ಉಪಸ್ಥಿತರಿದ್ದರು.

ಜೆಸಿಐ ಮಡಂತ್ಯಾರಿನ ಪೂರ್ವಾಧ್ಯಕ್ಷರು , ಸದಸ್ಯರು, ಅನೇಕ ಗಣ್ಯರು ಭಾಗವಹಿಸಿ, ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

Related posts

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇ.ಸಿ. ವಿಭಾಗದಿಂದ ಸರ್ಕ್ಯೂಟ್ ಎಕ್ಸ್ ಪೋ 2024

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ಕೆಡವಿದ ಪ್ರಕರಣ : ಆರಂಭಗೊಂಡ ಕಂದಾಯ – ಅರಣ್ಯ ಜಂಟಿ ಸರ್ವೆ

Suddi Udaya

ರಾಷ್ಟ್ರೀಯ ಹೆದ್ದಾರಿ ಅರಳಿ ಪ್ರದೇಶಕ್ಕೆ ಅನುಕೂಲವಾಗುವಂತೆ ರಸ್ತೆ ನಿರ್ಮಿಸಲು ಆಗ್ರಹ

Suddi Udaya

ಕಲ್ಮಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಆರಂಬೋಡಿ : ಬಡ ಕುಟುಂಬಕ್ಕೆ ಶೌಚಾಲಯ ನಿರ್ಮಿಸಿಕೊಟ್ಟ ಕಿರಣ್ ಕುಮಾರ್ ಮಂಜಿಲ: ಗ್ರಾಮಸ್ಥರಿಂದ ಮೆಚ್ಚುಗೆ

Suddi Udaya

ವಲಯ ಅರಣ್ಯ ಅಧಿಕಾರಿ ಬೆಳ್ತಂಗಡಿಯ ಸಂಧ್ಯಾ ಸಚಿನ್ ಸುಳ್ಯ ಪಂಜ ಪ್ರಾದೇಶಿಕ ಅರಣ್ಯ ವಲಯಕ್ಕೆ ವರ್ಗಾವಣೆ

Suddi Udaya
error: Content is protected !!