July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಮಡಂತ್ಯಾರಿನ ಪದಗ್ರಹಣ ಸಮಾರಂಭ

ಮಡಂತ್ಯಾರು: ಜೆಸಿಐ ಮಡಂತ್ಯಾರಿನ 36 ನೇ ಅಧ್ಯಕ್ಷೆಯಾಗಿ ಹಾಗೂ ದ್ವಿತೀಯ ಮಹಿಳಾ ಅಧ್ಯಕ್ಷೆಯಾಗಿ ಜೇಸಿ ಸಾಯಿಸುಮಾ ಎಂ. ನಾವಡ ಹಾಗೂ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಜ.4 ರಂದು ಮಡಂತ್ಯಾರಿನ ಗಣಪತಿ ಮಂಟಪದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಜೆಸಿಐ ಭಾರತ, ವಲಯ 15 ರ ಅಧ್ಯಕ್ಷರಾದ ಜೆ.ಎಫ್.ಎಫ್. ಸಂತೋಷ ಶೆಟ್ಟಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾದ ನ್ಯಾಯವಾದಿ ಸುರೇಶ್ ಕುಮಾರ್ ಬಿ. ನಾವೂರು ಭಾಗವಹಿಸಿ, ನೂತನ ಪದಾಧಿಕಾರಿಗಳಿಗೆ ಶುಭಹಾರೈಸಿದರು. ಜೆಸಿಐ ಮಡಂತ್ಯಾರಿನ ಪೂರ್ವಾಧ್ಯಕ್ಷರಾದ ಜೇಸಿ ಡಾ. ಹರ್ಷ ಸಂಪಿಗೆತ್ತಾಯ ಹಾಗೂ ಜೆಸಿಐ ಭಾರತ, ವಲಯ 15, ನಂದಿನಿ(ಪ್ರಾಂತ್ಯ ಎ) ಯ ಉಪಾಧ್ಯಕ್ಷರಾದ ಜೆ.ಎಫ್.ಎಮ್. ಅರುಣ್ ಮಾಂಜ ಇವರ ಗೌರವ ಉಪಸ್ಥಿತಿ ಕಾರ್ಯಕ್ರಮದ ಶೋಭೆಯನ್ನು ಹೆಚ್ಚಿಸಿತು.

ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಜೇಸಿ ಅಮಿತಾ ಅಶೋಕ್, ಪೂರ್ವಾಧ್ಯಕ್ಷರಾದ ಜೇಸಿ ವಿಕೇಶ್ ಮಾನ್ಯ, ಕಾರ್ಯದರ್ಶಿ ಜೇಸಿ ಯತೀಶ್ ರೈ ಹಾಗೂ ಯುವ ಜೇಸಿ ಅಧ್ಯಕ್ಷ ಜೆಜೆಸಿ ಕೃಪಾಲ್ ಉಪಸ್ಥಿತರಿದ್ದರು.

ಜೆಸಿಐ ಮಡಂತ್ಯಾರಿನ ಪೂರ್ವಾಧ್ಯಕ್ಷರು , ಸದಸ್ಯರು, ಅನೇಕ ಗಣ್ಯರು ಭಾಗವಹಿಸಿ, ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

Related posts

ತೆಂಕಕಾರಂದೂರು: ಕಾಪಿನಡ್ಕ ಗಾಂಧಿನಗರ ನಿವಾಸಿ ಸುಂದರ ದೇವಾಡಿಗ ನಿಧನ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 198.74 ಕೋಟಿ ವ್ಯವಹಾರ,66.79 ಲಕ್ಷ ನಿವ್ವಳ ಲಾಭ,ಸದಸ್ಯರಿಗೆ 12 ಶೇ ಡಿವಿಡೆಂಟ್ ಘೋಷಣೆ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ಗೆ ‘ಉದಯೋನ್ಮುಖ ನಕ್ಷತ್ರ’ ಅವಾರ್ಡ್

Suddi Udaya

ಲಾಯಿಲ : ಶತಾಯುಷಿ ತುಂಗಮ್ಮ ಪೂಜಾರಿ ನಿಧನ

Suddi Udaya

ಶಬರಿಮಲೆ ಯಾತ್ರೆ ವೇಳೆ ರೈಲಿನಿಂದ ಬಿದ್ದು ವೃದ್ಧ ಸಾವು

Suddi Udaya

ಮಂಗಳೂರು ಕೃಷಿಕರ ಸಹಕಾರಿ ಸಂಘದ ನಿರ್ದೇಶಕರಾಗಿ ಬಾಲಕೃಷ್ಣ ಗೌಡ ಕೇರಿಮಾರು ಆಯ್ಕೆ

Suddi Udaya
error: Content is protected !!