September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಮಡಂತ್ಯಾರಿನ ಪದಗ್ರಹಣ ಸಮಾರಂಭ

ಮಡಂತ್ಯಾರು: ಜೆಸಿಐ ಮಡಂತ್ಯಾರಿನ 36 ನೇ ಅಧ್ಯಕ್ಷೆಯಾಗಿ ಹಾಗೂ ದ್ವಿತೀಯ ಮಹಿಳಾ ಅಧ್ಯಕ್ಷೆಯಾಗಿ ಜೇಸಿ ಸಾಯಿಸುಮಾ ಎಂ. ನಾವಡ ಹಾಗೂ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಜ.4 ರಂದು ಮಡಂತ್ಯಾರಿನ ಗಣಪತಿ ಮಂಟಪದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಜೆಸಿಐ ಭಾರತ, ವಲಯ 15 ರ ಅಧ್ಯಕ್ಷರಾದ ಜೆ.ಎಫ್.ಎಫ್. ಸಂತೋಷ ಶೆಟ್ಟಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾದ ನ್ಯಾಯವಾದಿ ಸುರೇಶ್ ಕುಮಾರ್ ಬಿ. ನಾವೂರು ಭಾಗವಹಿಸಿ, ನೂತನ ಪದಾಧಿಕಾರಿಗಳಿಗೆ ಶುಭಹಾರೈಸಿದರು. ಜೆಸಿಐ ಮಡಂತ್ಯಾರಿನ ಪೂರ್ವಾಧ್ಯಕ್ಷರಾದ ಜೇಸಿ ಡಾ. ಹರ್ಷ ಸಂಪಿಗೆತ್ತಾಯ ಹಾಗೂ ಜೆಸಿಐ ಭಾರತ, ವಲಯ 15, ನಂದಿನಿ(ಪ್ರಾಂತ್ಯ ಎ) ಯ ಉಪಾಧ್ಯಕ್ಷರಾದ ಜೆ.ಎಫ್.ಎಮ್. ಅರುಣ್ ಮಾಂಜ ಇವರ ಗೌರವ ಉಪಸ್ಥಿತಿ ಕಾರ್ಯಕ್ರಮದ ಶೋಭೆಯನ್ನು ಹೆಚ್ಚಿಸಿತು.

ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಜೇಸಿ ಅಮಿತಾ ಅಶೋಕ್, ಪೂರ್ವಾಧ್ಯಕ್ಷರಾದ ಜೇಸಿ ವಿಕೇಶ್ ಮಾನ್ಯ, ಕಾರ್ಯದರ್ಶಿ ಜೇಸಿ ಯತೀಶ್ ರೈ ಹಾಗೂ ಯುವ ಜೇಸಿ ಅಧ್ಯಕ್ಷ ಜೆಜೆಸಿ ಕೃಪಾಲ್ ಉಪಸ್ಥಿತರಿದ್ದರು.

ಜೆಸಿಐ ಮಡಂತ್ಯಾರಿನ ಪೂರ್ವಾಧ್ಯಕ್ಷರು , ಸದಸ್ಯರು, ಅನೇಕ ಗಣ್ಯರು ಭಾಗವಹಿಸಿ, ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

Related posts

ಓಡಿಲ್ನಾಳ ಶ್ರೀ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ 3ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ, ಧಾರ್ಮಿಕ ಸಭೆ

Suddi Udaya

ಉಜಿರೆ : ಅತ್ತಾಜೆಯಲ್ಲಿರುವ ಎಮ್. ಆರ್. ಎಫ್ ಘಟಕದಲ್ಲಿ ಒಣ ಕಸ ವಿಲೇವಾರಿ ಕುರಿತು ಅರಸಿನಮಕ್ಕಿ, ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಮಾಹಿತಿ ಕಾರ್ಯ

Suddi Udaya

ನಾವೂರು ಬಡೆಕ್ಕಾವುಗುತ್ತು ಚಾರಿಟೇಬಲ್ ಟ್ರಸ್ಟ್ ನಿಂದ ವಿದ್ಯಾರ್ಥಿವೇತನ ವಿತರಣೆ : ದೈವಗಳಿಗೆ ದೊಂದಿ ಕೋಲ

Suddi Udaya

ಭಾರತೀಯ ಸೇನೆಗೆ ಮಿತ್ತಬಾಗಿಲು ಪುನೀತ್ ಕುಮಾರ್ ಆಯ್ಕೆ

Suddi Udaya

ಮಲವಂತಿಗೆ ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಪಾರೆಂಕಿ ಖಾಸಗಿ ವ್ಯಕ್ತಿಯಿಂದ ಸಾರ್ವಜನಿಕ ಕಾಲು ದಾರಿಗೆ ತಡೆಯಾಗಿದ್ದು, ತೆರವುಗೊಳಿಸಲು ಆಗ್ರಹ: ಸಾರ್ವಜನಿಕರು, ಕೃಷಿಕರ ಕುಂದುಕೊರತೆಗಳ ನಿವಾರಣೆಗೆ ಕನ್ನಡ ಸೇನೆ ಕರ್ನಾಟಕ ಹೋರಾಟ

Suddi Udaya
error: Content is protected !!