25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಮಡಂತ್ಯಾರಿನ ಪದಗ್ರಹಣ ಸಮಾರಂಭ

ಮಡಂತ್ಯಾರು: ಜೆಸಿಐ ಮಡಂತ್ಯಾರಿನ 36 ನೇ ಅಧ್ಯಕ್ಷೆಯಾಗಿ ಹಾಗೂ ದ್ವಿತೀಯ ಮಹಿಳಾ ಅಧ್ಯಕ್ಷೆಯಾಗಿ ಜೇಸಿ ಸಾಯಿಸುಮಾ ಎಂ. ನಾವಡ ಹಾಗೂ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಜ.4 ರಂದು ಮಡಂತ್ಯಾರಿನ ಗಣಪತಿ ಮಂಟಪದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಜೆಸಿಐ ಭಾರತ, ವಲಯ 15 ರ ಅಧ್ಯಕ್ಷರಾದ ಜೆ.ಎಫ್.ಎಫ್. ಸಂತೋಷ ಶೆಟ್ಟಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾದ ನ್ಯಾಯವಾದಿ ಸುರೇಶ್ ಕುಮಾರ್ ಬಿ. ನಾವೂರು ಭಾಗವಹಿಸಿ, ನೂತನ ಪದಾಧಿಕಾರಿಗಳಿಗೆ ಶುಭಹಾರೈಸಿದರು. ಜೆಸಿಐ ಮಡಂತ್ಯಾರಿನ ಪೂರ್ವಾಧ್ಯಕ್ಷರಾದ ಜೇಸಿ ಡಾ. ಹರ್ಷ ಸಂಪಿಗೆತ್ತಾಯ ಹಾಗೂ ಜೆಸಿಐ ಭಾರತ, ವಲಯ 15, ನಂದಿನಿ(ಪ್ರಾಂತ್ಯ ಎ) ಯ ಉಪಾಧ್ಯಕ್ಷರಾದ ಜೆ.ಎಫ್.ಎಮ್. ಅರುಣ್ ಮಾಂಜ ಇವರ ಗೌರವ ಉಪಸ್ಥಿತಿ ಕಾರ್ಯಕ್ರಮದ ಶೋಭೆಯನ್ನು ಹೆಚ್ಚಿಸಿತು.

ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಜೇಸಿ ಅಮಿತಾ ಅಶೋಕ್, ಪೂರ್ವಾಧ್ಯಕ್ಷರಾದ ಜೇಸಿ ವಿಕೇಶ್ ಮಾನ್ಯ, ಕಾರ್ಯದರ್ಶಿ ಜೇಸಿ ಯತೀಶ್ ರೈ ಹಾಗೂ ಯುವ ಜೇಸಿ ಅಧ್ಯಕ್ಷ ಜೆಜೆಸಿ ಕೃಪಾಲ್ ಉಪಸ್ಥಿತರಿದ್ದರು.

ಜೆಸಿಐ ಮಡಂತ್ಯಾರಿನ ಪೂರ್ವಾಧ್ಯಕ್ಷರು , ಸದಸ್ಯರು, ಅನೇಕ ಗಣ್ಯರು ಭಾಗವಹಿಸಿ, ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

Related posts

ಲಾಯಿಲ: ಕೊರಂ ಕೊರತೆಯಿಂದ ಮುಂದೂಡಲಾಗಿದ್ದ ಗ್ರಾ.ಪಂ. ಸಾಮಾನ್ಯ ಸಭೆಯು ನ.29 ರಂದು ಯಶಸ್ವಿ

Suddi Udaya

ನಿಡ್ಲೆ: ಬರೆಂಗಾಯ ನಿವಾಸಿ ಪ್ರಭಾಕರ ಆಚಾರ್ಯ ನಿಧನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯೋಗ ಮತ್ತು ರಂಗ ತರಬೇತಿಯ ಉದ್ಘಾಟನೆ

Suddi Udaya

ಬಕ್ರೀದ್ ಪ್ರಯುಕ್ತ ವೇಣೂರು ಪೊಲೀಸ್ ಸ್ಟೇಷನ್ ನಲ್ಲಿ ಶಾಂತಿ ಸಮಿತಿ ಸಭೆ

Suddi Udaya

ಎಸ್.ಡಿ.ಎಂ ಝೇಂಕಾರ ಸೀಜನ್-6 ಉದ್ಘಾಟನೆ

Suddi Udaya

ಲಾಯಿಲ: ವ್ಯಾಪಕ ಮಳೆಗೆ ಮನೆ ಕುಸಿತ

Suddi Udaya
error: Content is protected !!