23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪಿ ಎಂ ಶ್ರೀ ಮಾದರಿ ಶಾಲೆಗೆ ನಾರಾಯಣ ಬೇಗೂರು ಭೇಟಿ, ಶಾಲೆಯ ಅಭಿವೃದ್ಧಿಗೆ ನೆರವು ನೀಡುವ ಭರವಸೆ

ಬೆಳ್ತಂಗಡಿ: ಶಿಕ್ಷಣ ಪ್ರೇಮಿ, ಕೊಡುಗೈ ದಾನಿ ಬೆಂಗಳೂರಿನ ಶ್ರೀ ಚೆನ್ನಕೇಶವ ಸ್ವಾಮಿ ದೇವಸ್ಥಾನ ಬೇಗೂರು ಇದರ ಧರ್ಮದರ್ಶಿಗಳಾದ ಡಾ. ನಾರಾಯಣ ಬೇಗೂರು ಶಾಲೆಗೆ ಭೇಟಿ ನಿಡಿ ಶಾಲಾ ಪೋಷಕರು ಮತ್ತು ಶಾಲೆಯ ವಿದ್ಯಾರ್ಥಿಗಳೊಂದಿಗೆ ಶೈಕ್ಷಣಿಕ ಸಂವಾದ ನಡೆಸಿದರು.

ಶಾಲೆಯ ಮೂಲಭೂತ ತುರ್ತು ಅಗತ್ಯತೆಗಳನ್ನು ವಿವರಿಸಿದ ಶಾಲಾಭಿವೃದ್ಧಿ ಸಮಿತಿಯ ಸದಸ್ಯರಿಗೆ ಮುಂದಿನ ದಿನಗಳಲ್ಲಿ ಶಾಲೆಯ ಭೌತಿಕ ಅಭಿವೃದ್ಧಿಗೆ ನೆರವು ನೀಡುವ ಭರವಸೆಯನ್ನು ನೀಡಿದರು. ಇವರು ಶಾಲೆಗೆ ಭೇಟಿ ನೀಡುವಲ್ಲಿ ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ಲಕ್ಷ್ಮೀಶ ದೇವಾಡಿಗ, ವಿಘ್ನೇಶ್ ಆಚಾರ್ಯ ಹಾಗೂ ಶಾಲೆಯ ಹಿರಿಯ ವಿದ್ಯಾರ್ಥಿನಿ, ನಿವೃತ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸುಶೀಲಾ ಹೆಗ್ಗಡೆ ನಿರಂತರ ಸಂಪರ್ಕ ಹಾಗೂ ಪ್ರಯತ್ನ ನಡೆಸಿರುತ್ತಾರೆ.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಝಮೀರುದ್ದೀನ್, ಉಪಾಧ್ಯಕ್ಷೆ ಶ್ರೀಮತಿ ಆರತಿ ಯರ್ಡೂರು, ಶಾಲಾ ಮುಖ್ಯೋಪಾಧ್ಯಾಯರಾದ ಸೂರ್ಯನಾರಾಯಣ ಪುತ್ತೂರಾಯ ಮತ್ತು ಸಮಿತಿಯ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಪೆರ್ಲ -ಬೈಪಾಡಿ ಅಂಚೆ ಇಲಾಖೆಯ ನೂತನ ಶಾಖೆಯ ಮುಂಭಾಗದಲ್ಲಿ ಆಧಾರ್ ಅದಾಲತ್, ನೋಂದಣಿ, ತಿದ್ದುಪಡಿ, ಹಾಗೂ ಅಂಚೆ ಇಲಾಖೆಯ ಹೊಸ ಖಾತೆ ತೆರೆಯುವ ಕಾರ್ಯಕ್ರಮ

Suddi Udaya

ಗರ್ಡಾಡಿ: ಕುಂಡದಬೆಟ್ಟು ನಿವಾಸಿ ವೆಂಕಪ್ಪ ಮೂಲ್ಯ ನಿಧನ

Suddi Udaya

ಮಹಾಭಾರತ ಸರಣಿ ತಾಳಮದ್ಧಳೆಯುವ ಕಲಾವಿದ ಪ್ರವೀತ ಆಚಾರ್ಯರಿಗೆ ಶ್ರದ್ದಾಂಜಲಿ ಅರ್ಪಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ

Suddi Udaya

ಶಿಬಾಜೆ : ಹಾವುಗಳ ಗುರುತಿಸುವಿಕೆ ಮುನ್ನೆಚ್ಚರಿಕೆ ಮತ್ತು ಪ್ರಥಮ ಚಿಕಿತ್ಸೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!