25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ರಕ್ತದಾನ ಶಿಬಿರ

ಬೆಳ್ತಂಗಡಿ: ಸಂಜಯ್ ಗ್ಲೋಬಲ್ ಫೌಂಡೇಶನ್, ಬೆಳ್ತಂಗಡಿ ಇದರ ಪ್ರಾಯೋಜಕತ್ವದಲ್ಲಿ ಹಯಾತುಲ್ ಇಸ್ಲಾಂ ಮದರಸ- ಬೆಳ್ತಂಗಡಿ ಹಾಗೂ ವೆನ್ ಲಾಕ್ ಸರಕಾರಿ ಆಸ್ಪತ್ರೆ- ಮಂಗಳೂರು ಇದರ ಸಹಯೋಗದೊಂದಿಗೆ ಮರ್ಹೂಂ ಶಾಝಿನ್ ಸ್ಮರಣಾರ್ಥ ರಕ್ತದಾನ ಶಿಬಿರ ಖಿಲರ್ ಜುಮ್ಮಾ ಮಸೀದಿ ವಠಾರದಲ್ಲಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ ನಡೆಯಿತು.

ರಕ್ತದಾನ ಶಿಬಿರವನ್ನು ಅಕ್ಬರ್ ಬೆಳ್ತಂಗಡಿ ಉದ್ಘಾಟಿಸಿದರು . ವೆನ್ ಲಾಕ್ ಸರಕಾರಿ ಆಸ್ಪತ್ರೆ- ಮಂಗಳೂರು ಇದರ ಬ್ಲಡ್ ಬ್ಯಾಂಕ್ ಅಧಿಕಾರಿ ಆಂಟೋನಿ, ಹಯಾತುಲ್ ಇಸ್ಲಾಂ ಮದರಸ ಅಧ್ಯಕ್ಷ ಬಿ ಶೇಕುಂಞ್ಞ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತುಗಳನ್ನಾಡಿದರು.

ಮುಹಿಯುದ್ದೀನ್ ಜುಮ್ಮಾ ಮಸೀದಿ ಮುರ-ನಾವೂರು ಇದರ ಪ್ರಧಾನ ಕಾರ್ಯದರ್ಶಿ ಖಾದರ್ ನಾವೂರು ಮಾತನಾಡಿ ರಕ್ತದಾನದ ಮಹತ್ವವನ್ನು ತಿಳಿಸಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಖಿಳರ್ ಜುಮ್ಮಾ ಮಸೀದಿ ಖತೀಬರಾದ ಹನೀಫ್ ಫೈಝಿ, ಮುಹಿಯುದ್ದೀನ್ ಜುಮ್ಮಾ ಮಸೀದಿ ಮುರ-ನಾವೂರು ಖತೀಬರಾದ ಬಶೀರ್ ಸಅದಿ ಕೆಮ್ಮಾರ, ಬೆಳ್ತಂಗಡಿ ಮುಸ್ಲಿಂ ಒಕ್ಕೂಟ ಅಧ್ಯಕ್ಷ ಬಿ.ಎ ನಝೀರ್, ಖಿಳರ್ ಜುಮ್ಮಾ ಮಸೀದಿಯ ಪ್ರಧಾನ ಕಾರ್ಯದರ್ಶಿಗಾಳದ ರಝಾಕ್ ಕೋಡಿಸಭೆ, ಸಲೀಂ ಮುರ, ಹನೀಫ್ ವರ್ಷಾ, ಇಸ್ಮಾಲಿ ಐ.ಬಿ, ಮಹಮ್ಮದ್ ಕುದ್ರಡ್ಕ, ಅಬ್ಬಾಸ್ ಸಂಜಯನಗರ, ರಿಜ್ವಾನ್ ಬಿ.ಕೆ, ರಶೀದ್ ಬೆಳ್ತಂಗಡಿ, ರಿಯಾಝ್ ಸಂಜಯನಗರ, ಶೈರೋಝ್ ಉದಯನಗರ ಹಾಗೂ ಊರಿನ ನಾಗರಿಕರು ಇತರರು ಉಪಸ್ಥಿತರಿದ್ದರು.

ರಕ್ತದಾನ ಶಿಬಿರದಲ್ಲಿ ದಾನಿಗಳಿಂದ ಒಟ್ಟು 53 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು. ಶಬೀರ್ ಸಂಜಯನಗರ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ನಾರಾವಿ: ಮಧುವನ ಕಾಂಪ್ಲೆಕ್ಸ್ ನಲ್ಲಿ ವಕ್ರಾಂಗಿ ಯುಪಿಐ ಮಿನಿ ಎಟಿಎಂ ಕೇಂದ್ರ ಶುಭಾರಂಭ

Suddi Udaya

ಗೆಳೆಯರ ಬಳಗ ಗುರುವಾಯನಕೆರೆ: 33ನೇ ವರ್ಷದ ಶ್ರೀ ಶಾರಾದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತದ ವತಿಯಿಂದ ಉಚಿತ ಶಾಲಾ ಬ್ಯಾಗ್ ವಿತರಣೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪ್ರತ್ಯೇಕ ಎರಡು ಅಪಘಾತ: ಪ್ರಾಣಾಪಾಯದಿಂದ ಪಾರು

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಉಜಿರೆ ರಬ್ಬರ್ ಸೊಸೈಟಿ ವತಿಯಿಂದ ಆರ್ಥಿಕ ನೆರವು ಹಸ್ತಾಂತರ  

Suddi Udaya
error: Content is protected !!