25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ರಕ್ತದಾನ ಶಿಬಿರ

ಬೆಳ್ತಂಗಡಿ: ಸಂಜಯ್ ಗ್ಲೋಬಲ್ ಫೌಂಡೇಶನ್, ಬೆಳ್ತಂಗಡಿ ಇದರ ಪ್ರಾಯೋಜಕತ್ವದಲ್ಲಿ ಹಯಾತುಲ್ ಇಸ್ಲಾಂ ಮದರಸ- ಬೆಳ್ತಂಗಡಿ ಹಾಗೂ ವೆನ್ ಲಾಕ್ ಸರಕಾರಿ ಆಸ್ಪತ್ರೆ- ಮಂಗಳೂರು ಇದರ ಸಹಯೋಗದೊಂದಿಗೆ ಮರ್ಹೂಂ ಶಾಝಿನ್ ಸ್ಮರಣಾರ್ಥ ರಕ್ತದಾನ ಶಿಬಿರ ಖಿಲರ್ ಜುಮ್ಮಾ ಮಸೀದಿ ವಠಾರದಲ್ಲಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ ನಡೆಯಿತು.

ರಕ್ತದಾನ ಶಿಬಿರವನ್ನು ಅಕ್ಬರ್ ಬೆಳ್ತಂಗಡಿ ಉದ್ಘಾಟಿಸಿದರು . ವೆನ್ ಲಾಕ್ ಸರಕಾರಿ ಆಸ್ಪತ್ರೆ- ಮಂಗಳೂರು ಇದರ ಬ್ಲಡ್ ಬ್ಯಾಂಕ್ ಅಧಿಕಾರಿ ಆಂಟೋನಿ, ಹಯಾತುಲ್ ಇಸ್ಲಾಂ ಮದರಸ ಅಧ್ಯಕ್ಷ ಬಿ ಶೇಕುಂಞ್ಞ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತುಗಳನ್ನಾಡಿದರು.

ಮುಹಿಯುದ್ದೀನ್ ಜುಮ್ಮಾ ಮಸೀದಿ ಮುರ-ನಾವೂರು ಇದರ ಪ್ರಧಾನ ಕಾರ್ಯದರ್ಶಿ ಖಾದರ್ ನಾವೂರು ಮಾತನಾಡಿ ರಕ್ತದಾನದ ಮಹತ್ವವನ್ನು ತಿಳಿಸಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಖಿಳರ್ ಜುಮ್ಮಾ ಮಸೀದಿ ಖತೀಬರಾದ ಹನೀಫ್ ಫೈಝಿ, ಮುಹಿಯುದ್ದೀನ್ ಜುಮ್ಮಾ ಮಸೀದಿ ಮುರ-ನಾವೂರು ಖತೀಬರಾದ ಬಶೀರ್ ಸಅದಿ ಕೆಮ್ಮಾರ, ಬೆಳ್ತಂಗಡಿ ಮುಸ್ಲಿಂ ಒಕ್ಕೂಟ ಅಧ್ಯಕ್ಷ ಬಿ.ಎ ನಝೀರ್, ಖಿಳರ್ ಜುಮ್ಮಾ ಮಸೀದಿಯ ಪ್ರಧಾನ ಕಾರ್ಯದರ್ಶಿಗಾಳದ ರಝಾಕ್ ಕೋಡಿಸಭೆ, ಸಲೀಂ ಮುರ, ಹನೀಫ್ ವರ್ಷಾ, ಇಸ್ಮಾಲಿ ಐ.ಬಿ, ಮಹಮ್ಮದ್ ಕುದ್ರಡ್ಕ, ಅಬ್ಬಾಸ್ ಸಂಜಯನಗರ, ರಿಜ್ವಾನ್ ಬಿ.ಕೆ, ರಶೀದ್ ಬೆಳ್ತಂಗಡಿ, ರಿಯಾಝ್ ಸಂಜಯನಗರ, ಶೈರೋಝ್ ಉದಯನಗರ ಹಾಗೂ ಊರಿನ ನಾಗರಿಕರು ಇತರರು ಉಪಸ್ಥಿತರಿದ್ದರು.

ರಕ್ತದಾನ ಶಿಬಿರದಲ್ಲಿ ದಾನಿಗಳಿಂದ ಒಟ್ಟು 53 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು. ಶಬೀರ್ ಸಂಜಯನಗರ ಕಾರ್ಯಕ್ರಮ ನಿರೂಪಿಸಿದರು.

Related posts

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಪ್ರಾರಂಭ

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಮಕ್ಕಳಿಗೆ ಪದವಿ ಪ್ರದಾನ ಕಾರ್ಯಕ್ರಮ ಮತ್ತು ಮಾತಾ-ಪಿತಾಮಹರ (ಹಿರಿಯರ) ದಿನ ಆಚರಣೆ.

Suddi Udaya

ಕಾರೊಂದು ಧರ್ಮಸ್ಥಳದಿಂದ ಚಾರ್ಮಾಡಿಯವರೆಗೆ ಹಲವು ವಾಹನಗಳಿಗೆ ಡಿಕ್ಕಿ: ಯುವಕನನ್ನು ಬಂಧಿಸಿದ ಪೋಲಿಸರು

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಚಪ್ಪರ ಮಹೂರ್ತ

Suddi Udaya

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದ ಕಾರ್ಯಕಾರಣಿ ಸಭೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ

Suddi Udaya
error: Content is protected !!