25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ ಹತ್ತನೇ ವರ್ಷದ ವಾರ್ಷಿಕೋತ್ಸವ

ಮಡಂತ್ಯಾರು ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ ಹತ್ತನೇ ವರ್ಷದ ವಾರ್ಷಿಕೋತ್ಸವ, ಆಟೋಟ ಸ್ಪರ್ಧೆಗಳು ಜ 4 ರಂದು ನಡೆಯಿತು.

ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ ಪುಷ್ಪಗಿರಿ ಮಾತನಾಡಿ ಸಂಘಟನೆಯು ಇನ್ನಷ್ಟು ಸಮಾಜ ಸೇವೆಯಲ್ಲಿ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಇನ್ನಷ್ಟು ಸಂಘಟನೆ ಬಲಪಡಿಸುವಂತೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಯಾದ ಪ್ರಶಾಂತ್ ಎಂ ಪ್ರತಿಮ ನಿಲಯ, ಪಂಚಲಿಂಗೇಶ್ವರ ದೇವಸ್ಥಾನ ಉರುವಾಲು ಇದರ ಆಡಳಿತ ಮೊಕ್ತೇಶರರಾದ ಯೋಗೀಶ್ ಪೂಜಾರಿ ಕಡ್ತಿಲ, ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ರೂಪ ನವೀನ್, ಮಡಂತ್ಯಾರು ಗಣೇಶೋತ್ಸವ ಸಮಿತಿ ಅಧ್ಯಕ್ಷ ಜಯ ಕೆ ಪಾಂಡವರಕಲ್ಲು, ಮಡಂತ್ಯಾರು ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಶೆಟ್ಟಿ ಪದೆಂಜಿಲ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ದೀಕ್ಷಿತ್ ಕೋಟೆ ವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಪುಷ್ಪವತಿ ಭಂಡಾರದ ಕೋಟ್ಯ ಇವರ ಸೇವೆಯನ್ನು ಮೆಚ್ಚಿ ಸನ್ಮಾನಿಸಲಾಯಿತು . ಸಂಗೀತ ಹಾಗೂ ಭರತನಾಟ್ಯ ದಲ್ಲಿ ರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ ಇವರನ್ನು ಸನ್ಮಾನಿಸಲಾಯಿತು. ಆಟೋಟ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು ಮತ್ತು ಸ್ಥಳೀಯ ಪ್ರತಿಭೆಗಳಿಂದ ಮನೋರಂಜನ ಕಾರ್ಯಕ್ರಮ ಹಾಗೂ ವಿಠಲ ನಾಯಕ್ ಕಲ್ಲಡ್ಕ ಇವರಿಂದ ತುಳು ಹಾಸ್ಯ ಸಂಭ್ರಮ ನಡೆಯಿತು. ಸಂಘದ ಕಾರ್ಯದರ್ಶಿಯಾದ ನವೀನ್ ಪಡೀಲ್ ಹಾಗೂ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.
✍️ ಹರ್ಷ ಬಳ್ಳಮಂಜ

Related posts

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ನೇಮಕ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪಟ್ರಮೆ ಪಟ್ಟೂರು ಶ್ರೀರಾಮ ಪ್ರೌಢಶಾಲೆಗೆ ಶೇ. 100 ಫಲಿತಾಂಶ

Suddi Udaya

46 ಗ್ರಾಮ ಪಂಚಾಯತ್‌ಗಳಿಗೆ ಆಡಳಿತಾಧಿಕಾರಿಗಳ ನೇಮಕ

Suddi Udaya

ಶಿರ್ಲಾಲು ರಿಕ್ಷಾ ಚಾಲಕ -ಮಾಲಕ ಸಂಘದಿಂದ ಆಯುಧ ಪೂಜೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಚಿಬಿದ್ರೆ ಇದರ ವಾರ್ಷಿಕೋತ್ಸವದ ಅಂಗವಾಗಿ ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ. ಬೆಳ್ತಂಗಡಿ ಇವರ ನೇತೃತ್ವದಲ್ಲಿ ಫೆ.17, 18, 19ರಂದು ಮಾರಿಗುಡಿ ಮೈದಾನದಲ್ಲಿ ‘ಬೆಳ್ತಂಗಡಿ ಸಂಭ್ರಮ’

Suddi Udaya
error: Content is protected !!