July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಹಿಂದೂ ಸಂಗಮ ಆಯೋಜನಾ ಸಮಿತಿಯಿಂದ ಪ್ರಶಿಕ್ಷಣ ವರ್ಗ ಮತ್ತು ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ

ಬೆಳ್ತಂಗಡಿ: ಹಿಂದೂ ಸಂಗಮ ಆಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು ಇದರ ಕಡೆಯಿಂದ ಆಯೋಜನಾ ಸಮಿತಿಯ ಪದಾಧಿಕಾರಿಗಳಿಗೆ ಮತ್ತು ಮಂಡಲ ನಿರ್ವಹಣಾ ತಂಡದ ಪ್ರಮುಖರಗಳಿಗೆ ಪ್ರಶಿಕ್ಷಣ ವರ್ಗ ಮತ್ತು ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಜ. 5ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ಜರುಗಿತು.

ಆಮಂತ್ರಣ ಬಿಡುಗಡೆಯನ್ನು ರೈತ ಬಂಧು ಮಾರುತಿಪುರ ಮಾಲಕ ಉದ್ಯಮಿ ಶಿವಶಂಕರ್ ನಾಯಕ್ ಬಿಡುಗಡೆಗೊಳಿಸಿದರು.

ಈ ವೇಳೆ ಶಾಸಕ ಹರೀಶ್ ಪೂಂಜ, ಹಿಂದೂ ಸಂಗಮ ಆಯೋಜನ ಸಮಿತಿ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಅಜಿತ್ ಜಿ ಶೆಟ್ಟಿ, ಸುಳ್ಯದ ಸಾಮಾಜಿಕ ಕಾರ್ಯಕರ್ತರಾದ ಸುಭಾಷ್ ಕಳೆಂಜ, ಬೆಳ್ತಂಗಡಿ ತಾಲೂಕಿನ ಸಾಮಾಜಿಕ ಮುಂದಾಳು ಗಣೇಶ್ ಕಾಂತಾಜೆ, ಆಯೋಜನ ಸಮಿತಿಯ ಉಪಾಧ್ಯಕ್ಷೆ ಶ್ರೀಮತಿ ಜಯ ಅನಂತ್ ಕೃಷ್ಣ ಭಟ್ ಉಪಸ್ಥಿತರಿದ್ದರು.

ಹಿಂದೂ ಸಂಗಮ ಆಯೋಜನ ಸಮಿತಿಯ ಸಂಯೋಜಕ ವಕೀಲರಾದ ಅನಿಲ್ ಕುಮಾರ್ ಯು ಸ್ವಾಗತಿಸಿ, ಜೊತೆ ಕಾರ್ಯದರ್ಶಿ ತುಕಾರಾಂ ಬಿ. ಧನ್ಯವಾದವಿತ್ತರು.

ಹಿಂದೂ ಸಂಗಮ ಆಯೋಜನ ಸಮಿತಿಯ ಬೆಳ್ತಂಗಡಿ ತಾಲೂಕಿನ ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು ಮಂಡಲ ನಿರ್ವಹಣಾ ತಂಡದ ಸಂಯೋಜಕರು, ತಾಲೂಕಿನ ದೈವಸ್ಥಾನ, ದೇವಸ್ಥಾನ, ಭಜನಾ ಮಂಡಳಿಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಹಿಂದೂ ಸಮಾಜದ ಮುಂದಾಳುಗಳು ಉಪಸ್ಥಿತರಿದ್ದರು.

Related posts

ಲಾಯಿಲ: ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಶ್ರೀ ಕ್ಷೇತ್ರ ಧರ್ಮಸ್ಥಳ ಧಮಾ೯ಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಡಾ.ಗುರುರಾಜ ಕರ್ಜಗಿಯವರಿಂದ ಸರ್ವಧರ್ಮ ಸಮ್ಮೇಳನ 91ನೇ ಅಧಿವೇಶನ ಉದ್ಘಾಟನೆ

Suddi Udaya

ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1ಕೋಟಿ ಅನುದಾನ–ಶಾಸಕ ಹರೀಶ್ ಪೂಂಜ

Suddi Udaya

ವಾಲಿಬಾಲ್ ಪಂದ್ಯಾಟ: ಚಂದ್ರಶೇಖರ ಗೌಡ ಕೊಯ್ಯೂರು ದ್ವಿತೀಯ ಸ್ಥಾನ

Suddi Udaya

ಚಂದ್ರಯಾನ -3 ಯಶಸ್ವಿಯಾಗಲೆಂದು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya
error: Content is protected !!