ಧರ್ಮಸ್ಥಳ : ಶ್ರೀ ನಿತ್ಯ ನೂತನ ಭಜನಾ ಮಂಡಳಿ ಜೋಡುಸ್ಥಾನದ 25ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಜ. 5ರಂದು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಭಜನಾ ಮಂಡಳಿ ಗೌರವಾಧ್ಯಕ್ಷರಾದ ಪಿ. ಲಕ್ಷ್ಮೀ ನಾರಾಯಣ ರಾವ್, ರಜತ ಸಂಭ್ರಮ ಸಮಿತಿ ಅಧ್ಯಕ್ಷ ಅರುಣ್ ಕುಮಾರ್, ಕಾರ್ಯದರ್ಶಿ ಜಗದೀಶ್ ನಾಯ್ಕ, ಭಜನಾ ಮಂಡಳಿ ಅಧ್ಯಕ್ಷ ಅಭಿಷೇಕ್, ಕಾರ್ಯದರ್ಶಿ ಶ್ರೀಮತಿ ಜ್ಯೋತಿ, ರಜತ ಸಂಭ್ರಮ ಸಮಿತಿ ಹಾಗೂ ಭಜನಾ ಮಂಡಳಿಯ ಪದಾಧಿಕಾರಿಗಳು, ಸರ್ವ ಸದಸ್ಯರು ಉಪಸ್ಥಿತರಿದ್ದರು.











