ಬೆಳ್ತಂಗಡಿ: ಪ್ರಸನ್ನ ಎಜುಕೇಶನ್ ಟ್ರಸ್ಟ್ನ ಅಂಗಸಂಸ್ಥೆಯಾದ ಲಾಯಿಲ, ಬೆಳ್ತಂಗಡಿಯ ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ಫ್ರೆಶರ್ಸ್ ಡೇ ಮತ್ತು ವಿದ್ಯಾರ್ಥಿ ಪರಿಷತ್ ಉದ್ಘಾಟನಾ ಸಮಾರಂಭ–2026 ಅನ್ನು ಇತ್ತೀಚೆಗೆ ಆಯೋಜಿಸಲಾಯಿತು.
ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಶೀನಾ ನಡೋಲಿ ಭಾಗವಹಿಸಿ, ವಿದ್ಯಾರ್ಥಿಗಳು ಶಿಸ್ತು, ಸಂವಹನ ಕೌಶಲ್ಯ ಮತ್ತು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಪ್ರಸನ್ನ ಇಂಡಸ್ಟ್ರಿಯಲ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ನ ಪ್ರಾಂಶುಪಾಲರಾದ ಅಖಿಲೇಶ್ ರಾವ್ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ. ಮಲ್ಲಿಕಾರ್ಜುನ ಗೌಡ ವಹಿಸಿ ಮಾತನಾಡಿ, ವಿದ್ಯಾರ್ಥಿ ಪರಿಷತ್ ಕಾಲೇಜಿನ ಸಮಗ್ರ ಅಭಿವೃದ್ಧಿಗೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು.
ಕಾರ್ಯಕ್ರಮದ ಆರಂಭದಲ್ಲಿ ಗಣ್ಯ ಅತಿಥಿಗಳು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಅಧಿಕೃತವಾಗಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿ ಪರಿಷತ್ ಅಧ್ಯಕ್ಷೆಯಾಗಿ ಅಮೃತಾ ಕೆ. ಅವರನ್ನು ನೇಮಕ ಮಾಡಲಾಯಿತು. ಜೊತೆಗೆ ವಿದ್ಯಾರ್ಥಿ ಪರಿಷತ್ನ ಎಲ್ಲಾ ಇತರ ಸದಸ್ಯರು ಅಧಿಕೃತವಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಅದೇ ವೇಳೆ ಆರ್ಜಿಯುಎಚ್ಎಸ್ (RGUHS) ಅಕ್ಟೋಬರ್–ನವೆಂಬರ್ 2025 ಪರೀಕ್ಷೆಯಲ್ಲಿ ಶ್ರೇಷ್ಠ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಿ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳ ಸಾಧನೆಯನ್ನು ಅತಿಥಿಗಳು ಶ್ಲಾಘಿಸಿದರು.
ಫ್ರೆಶರ್ಸ್ ಡೇ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಸ್ವಾಗತ ಭಾಷಣಗಳು ಹಾಗೂ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಗಳು ಗಮನ ಸೆಳೆದವು. ಬೋಧಕ ವೃಂದ, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.











