22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪಿ ಎಂ ಶ್ರೀ ಮಾದರಿ ಶಾಲೆಗೆ ನಾರಾಯಣ ಬೇಗೂರು ಭೇಟಿ, ಶಾಲೆಯ ಅಭಿವೃದ್ಧಿಗೆ ನೆರವು ನೀಡುವ ಭರವಸೆ

ಬೆಳ್ತಂಗಡಿ: ಶಿಕ್ಷಣ ಪ್ರೇಮಿ, ಕೊಡುಗೈ ದಾನಿ ಬೆಂಗಳೂರಿನ ಶ್ರೀ ಚೆನ್ನಕೇಶವ ಸ್ವಾಮಿ ದೇವಸ್ಥಾನ ಬೇಗೂರು ಇದರ ಧರ್ಮದರ್ಶಿಗಳಾದ ಡಾ. ನಾರಾಯಣ ಬೇಗೂರು ಶಾಲೆಗೆ ಭೇಟಿ ನಿಡಿ ಶಾಲಾ ಪೋಷಕರು ಮತ್ತು ಶಾಲೆಯ ವಿದ್ಯಾರ್ಥಿಗಳೊಂದಿಗೆ ಶೈಕ್ಷಣಿಕ ಸಂವಾದ ನಡೆಸಿದರು.

ಶಾಲೆಯ ಮೂಲಭೂತ ತುರ್ತು ಅಗತ್ಯತೆಗಳನ್ನು ವಿವರಿಸಿದ ಶಾಲಾಭಿವೃದ್ಧಿ ಸಮಿತಿಯ ಸದಸ್ಯರಿಗೆ ಮುಂದಿನ ದಿನಗಳಲ್ಲಿ ಶಾಲೆಯ ಭೌತಿಕ ಅಭಿವೃದ್ಧಿಗೆ ನೆರವು ನೀಡುವ ಭರವಸೆಯನ್ನು ನೀಡಿದರು. ಇವರು ಶಾಲೆಗೆ ಭೇಟಿ ನೀಡುವಲ್ಲಿ ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ಲಕ್ಷ್ಮೀಶ ದೇವಾಡಿಗ, ವಿಘ್ನೇಶ್ ಆಚಾರ್ಯ ಹಾಗೂ ಶಾಲೆಯ ಹಿರಿಯ ವಿದ್ಯಾರ್ಥಿನಿ, ನಿವೃತ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸುಶೀಲಾ ಹೆಗ್ಗಡೆ ನಿರಂತರ ಸಂಪರ್ಕ ಹಾಗೂ ಪ್ರಯತ್ನ ನಡೆಸಿರುತ್ತಾರೆ.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಝಮೀರುದ್ದೀನ್, ಉಪಾಧ್ಯಕ್ಷೆ ಶ್ರೀಮತಿ ಆರತಿ ಯರ್ಡೂರು, ಶಾಲಾ ಮುಖ್ಯೋಪಾಧ್ಯಾಯರಾದ ಸೂರ್ಯನಾರಾಯಣ ಪುತ್ತೂರಾಯ ಮತ್ತು ಸಮಿತಿಯ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಅಧಿಕ ರಕ್ತದೊತ್ತಡದಿಂದ ಪ್ರವೀಣ್ ಆಚಾರ್ಯ ನಿಧನ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ದ.ಕ. ಪ್ರಥಮ , ಉಡುಪಿ ದ್ವಿತೀಯ ಸ್ಥಾನ

Suddi Udaya

ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣಹಾನಿ

Suddi Udaya

ಎಸ್. ಡಿ. ಎಂ. ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

Suddi Udaya

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ: ರೂ.4.83 ಲಕ್ಷ ಲಾಭ, ಸದಸ್ಯರಿಗೆ ಶೇ. 14 ಡಿವಿಡೆಂಟ್

Suddi Udaya

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ: ಬಿಜೆಪಿ ಶಾಸಕರುಗಳಿಂದ ವಿಧಾನ ಸೌಧದ ಎದುರು ಭಿತ್ತಿಪತ್ರ ಪ್ರದರ್ಶನ: “ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ” ಗಮನ ಸೆಳೆದ ಶಾಸಕ ಹರೀಶ್ ಪೂಂಜ ಪ್ರದರ್ಶಿಸಿದ ಬಿತ್ತಿಪತ್ರ

Suddi Udaya
error: Content is protected !!