September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪಿ ಎಂ ಶ್ರೀ ಮಾದರಿ ಶಾಲೆಗೆ ನಾರಾಯಣ ಬೇಗೂರು ಭೇಟಿ, ಶಾಲೆಯ ಅಭಿವೃದ್ಧಿಗೆ ನೆರವು ನೀಡುವ ಭರವಸೆ

ಬೆಳ್ತಂಗಡಿ: ಶಿಕ್ಷಣ ಪ್ರೇಮಿ, ಕೊಡುಗೈ ದಾನಿ ಬೆಂಗಳೂರಿನ ಶ್ರೀ ಚೆನ್ನಕೇಶವ ಸ್ವಾಮಿ ದೇವಸ್ಥಾನ ಬೇಗೂರು ಇದರ ಧರ್ಮದರ್ಶಿಗಳಾದ ಡಾ. ನಾರಾಯಣ ಬೇಗೂರು ಶಾಲೆಗೆ ಭೇಟಿ ನಿಡಿ ಶಾಲಾ ಪೋಷಕರು ಮತ್ತು ಶಾಲೆಯ ವಿದ್ಯಾರ್ಥಿಗಳೊಂದಿಗೆ ಶೈಕ್ಷಣಿಕ ಸಂವಾದ ನಡೆಸಿದರು.

ಶಾಲೆಯ ಮೂಲಭೂತ ತುರ್ತು ಅಗತ್ಯತೆಗಳನ್ನು ವಿವರಿಸಿದ ಶಾಲಾಭಿವೃದ್ಧಿ ಸಮಿತಿಯ ಸದಸ್ಯರಿಗೆ ಮುಂದಿನ ದಿನಗಳಲ್ಲಿ ಶಾಲೆಯ ಭೌತಿಕ ಅಭಿವೃದ್ಧಿಗೆ ನೆರವು ನೀಡುವ ಭರವಸೆಯನ್ನು ನೀಡಿದರು. ಇವರು ಶಾಲೆಗೆ ಭೇಟಿ ನೀಡುವಲ್ಲಿ ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ಲಕ್ಷ್ಮೀಶ ದೇವಾಡಿಗ, ವಿಘ್ನೇಶ್ ಆಚಾರ್ಯ ಹಾಗೂ ಶಾಲೆಯ ಹಿರಿಯ ವಿದ್ಯಾರ್ಥಿನಿ, ನಿವೃತ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸುಶೀಲಾ ಹೆಗ್ಗಡೆ ನಿರಂತರ ಸಂಪರ್ಕ ಹಾಗೂ ಪ್ರಯತ್ನ ನಡೆಸಿರುತ್ತಾರೆ.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಝಮೀರುದ್ದೀನ್, ಉಪಾಧ್ಯಕ್ಷೆ ಶ್ರೀಮತಿ ಆರತಿ ಯರ್ಡೂರು, ಶಾಲಾ ಮುಖ್ಯೋಪಾಧ್ಯಾಯರಾದ ಸೂರ್ಯನಾರಾಯಣ ಪುತ್ತೂರಾಯ ಮತ್ತು ಸಮಿತಿಯ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ಪಡಂಗಡಿ : ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ; ಭಜನಾ ಕಾರ್ಯಕ್ರಮ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ಹಿರಿಯ ನಾಗರಿಕರ ದಿನಾಚರಣೆ

Suddi Udaya

ಎಸ್.ಡಿ.ಎಂ. ಪಿ.ಯು. ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಂದ ಕೈಗಾರಿಕಾ ಪ್ರದೇಶಗಳಿಗೆ ಭೇಟಿ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಓಣಂ ಆಚರಣೆ

Suddi Udaya

ಉಜಿರೆ: ರಾಷ್ಟೀಯ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ “ಧರ್ಮ ಸಿಂಹಾಸನ” ಯಕ್ಷಗಾನ ಬಯಲಾಟ

Suddi Udaya

ರಾಷ್ಟ್ರಮಟ್ಟದ ಪುರುಷರ ಯೋಗಾಸನ ಸ್ಪರ್ಧೆಗೆ ಉಜಿರೆಯ ಎಸ್‌ಡಿಎಂ ವಿದ್ಯಾರ್ಥಿಗಳ ಆಯ್ಕೆ

Suddi Udaya
error: Content is protected !!