22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ರಕ್ತದಾನ ಶಿಬಿರ

ಬೆಳ್ತಂಗಡಿ: ಸಂಜಯ್ ಗ್ಲೋಬಲ್ ಫೌಂಡೇಶನ್, ಬೆಳ್ತಂಗಡಿ ಇದರ ಪ್ರಾಯೋಜಕತ್ವದಲ್ಲಿ ಹಯಾತುಲ್ ಇಸ್ಲಾಂ ಮದರಸ- ಬೆಳ್ತಂಗಡಿ ಹಾಗೂ ವೆನ್ ಲಾಕ್ ಸರಕಾರಿ ಆಸ್ಪತ್ರೆ- ಮಂಗಳೂರು ಇದರ ಸಹಯೋಗದೊಂದಿಗೆ ಮರ್ಹೂಂ ಶಾಝಿನ್ ಸ್ಮರಣಾರ್ಥ ರಕ್ತದಾನ ಶಿಬಿರ ಖಿಲರ್ ಜುಮ್ಮಾ ಮಸೀದಿ ವಠಾರದಲ್ಲಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ ನಡೆಯಿತು.

ರಕ್ತದಾನ ಶಿಬಿರವನ್ನು ಅಕ್ಬರ್ ಬೆಳ್ತಂಗಡಿ ಉದ್ಘಾಟಿಸಿದರು . ವೆನ್ ಲಾಕ್ ಸರಕಾರಿ ಆಸ್ಪತ್ರೆ- ಮಂಗಳೂರು ಇದರ ಬ್ಲಡ್ ಬ್ಯಾಂಕ್ ಅಧಿಕಾರಿ ಆಂಟೋನಿ, ಹಯಾತುಲ್ ಇಸ್ಲಾಂ ಮದರಸ ಅಧ್ಯಕ್ಷ ಬಿ ಶೇಕುಂಞ್ಞ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತುಗಳನ್ನಾಡಿದರು.

ಮುಹಿಯುದ್ದೀನ್ ಜುಮ್ಮಾ ಮಸೀದಿ ಮುರ-ನಾವೂರು ಇದರ ಪ್ರಧಾನ ಕಾರ್ಯದರ್ಶಿ ಖಾದರ್ ನಾವೂರು ಮಾತನಾಡಿ ರಕ್ತದಾನದ ಮಹತ್ವವನ್ನು ತಿಳಿಸಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಖಿಳರ್ ಜುಮ್ಮಾ ಮಸೀದಿ ಖತೀಬರಾದ ಹನೀಫ್ ಫೈಝಿ, ಮುಹಿಯುದ್ದೀನ್ ಜುಮ್ಮಾ ಮಸೀದಿ ಮುರ-ನಾವೂರು ಖತೀಬರಾದ ಬಶೀರ್ ಸಅದಿ ಕೆಮ್ಮಾರ, ಬೆಳ್ತಂಗಡಿ ಮುಸ್ಲಿಂ ಒಕ್ಕೂಟ ಅಧ್ಯಕ್ಷ ಬಿ.ಎ ನಝೀರ್, ಖಿಳರ್ ಜುಮ್ಮಾ ಮಸೀದಿಯ ಪ್ರಧಾನ ಕಾರ್ಯದರ್ಶಿಗಾಳದ ರಝಾಕ್ ಕೋಡಿಸಭೆ, ಸಲೀಂ ಮುರ, ಹನೀಫ್ ವರ್ಷಾ, ಇಸ್ಮಾಲಿ ಐ.ಬಿ, ಮಹಮ್ಮದ್ ಕುದ್ರಡ್ಕ, ಅಬ್ಬಾಸ್ ಸಂಜಯನಗರ, ರಿಜ್ವಾನ್ ಬಿ.ಕೆ, ರಶೀದ್ ಬೆಳ್ತಂಗಡಿ, ರಿಯಾಝ್ ಸಂಜಯನಗರ, ಶೈರೋಝ್ ಉದಯನಗರ ಹಾಗೂ ಊರಿನ ನಾಗರಿಕರು ಇತರರು ಉಪಸ್ಥಿತರಿದ್ದರು.

ರಕ್ತದಾನ ಶಿಬಿರದಲ್ಲಿ ದಾನಿಗಳಿಂದ ಒಟ್ಟು 53 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು. ಶಬೀರ್ ಸಂಜಯನಗರ ಕಾರ್ಯಕ್ರಮ ನಿರೂಪಿಸಿದರು.

Related posts

ವೈಬ್ರೆಂಟ್ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ :ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ, ಸಮಯ ಪ್ರಜ್ಞೆಯಿದ್ದರೆ ಜೀವನದಲ್ಲಿ ಯಶಸ್ಸು- ಡಾ. ಎಸ್.ಎನ್.ವಿ.

Suddi Udaya

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅವರಿಗೆ ನಡ ನಿವಾಸಿಗಳಿಂದ ಅಭಿನಂದನೆ

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಯವರ ಜನ್ಮ ದಿನಾಚರಣೆ

Suddi Udaya

ಶ್ರೀ ಧರ್ಮಸ್ಥಳ ಲಕ್ಷದೀಪೋತ್ಸವ ಪಾದಯಾತ್ರೆ ಬಗ್ಗೆ ಬೆಳ್ತಂಗಡಿ ವಲಯದ ಪೂರ್ವಭಾವಿ ಸಭೆ

Suddi Udaya

ಕರಾಯ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಪ್ರಮುಖ 2025: ಜಿಲ್ಲಾಮಟ್ಟದ ವಸ್ತುಪ್ರದರ್ಶನ ಹಾಗೂ ಅಂತರ ಕಾಲೇಜು ಉತ್ಸವ

Suddi Udaya
error: Content is protected !!