September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ ಹತ್ತನೇ ವರ್ಷದ ವಾರ್ಷಿಕೋತ್ಸವ

ಮಡಂತ್ಯಾರು ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ ಹತ್ತನೇ ವರ್ಷದ ವಾರ್ಷಿಕೋತ್ಸವ, ಆಟೋಟ ಸ್ಪರ್ಧೆಗಳು ಜ 4 ರಂದು ನಡೆಯಿತು.

ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ ಪುಷ್ಪಗಿರಿ ಮಾತನಾಡಿ ಸಂಘಟನೆಯು ಇನ್ನಷ್ಟು ಸಮಾಜ ಸೇವೆಯಲ್ಲಿ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಇನ್ನಷ್ಟು ಸಂಘಟನೆ ಬಲಪಡಿಸುವಂತೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಯಾದ ಪ್ರಶಾಂತ್ ಎಂ ಪ್ರತಿಮ ನಿಲಯ, ಪಂಚಲಿಂಗೇಶ್ವರ ದೇವಸ್ಥಾನ ಉರುವಾಲು ಇದರ ಆಡಳಿತ ಮೊಕ್ತೇಶರರಾದ ಯೋಗೀಶ್ ಪೂಜಾರಿ ಕಡ್ತಿಲ, ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ರೂಪ ನವೀನ್, ಮಡಂತ್ಯಾರು ಗಣೇಶೋತ್ಸವ ಸಮಿತಿ ಅಧ್ಯಕ್ಷ ಜಯ ಕೆ ಪಾಂಡವರಕಲ್ಲು, ಮಡಂತ್ಯಾರು ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಶೆಟ್ಟಿ ಪದೆಂಜಿಲ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ದೀಕ್ಷಿತ್ ಕೋಟೆ ವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಪುಷ್ಪವತಿ ಭಂಡಾರದ ಕೋಟ್ಯ ಇವರ ಸೇವೆಯನ್ನು ಮೆಚ್ಚಿ ಸನ್ಮಾನಿಸಲಾಯಿತು . ಸಂಗೀತ ಹಾಗೂ ಭರತನಾಟ್ಯ ದಲ್ಲಿ ರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ ಇವರನ್ನು ಸನ್ಮಾನಿಸಲಾಯಿತು. ಆಟೋಟ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು ಮತ್ತು ಸ್ಥಳೀಯ ಪ್ರತಿಭೆಗಳಿಂದ ಮನೋರಂಜನ ಕಾರ್ಯಕ್ರಮ ಹಾಗೂ ವಿಠಲ ನಾಯಕ್ ಕಲ್ಲಡ್ಕ ಇವರಿಂದ ತುಳು ಹಾಸ್ಯ ಸಂಭ್ರಮ ನಡೆಯಿತು. ಸಂಘದ ಕಾರ್ಯದರ್ಶಿಯಾದ ನವೀನ್ ಪಡೀಲ್ ಹಾಗೂ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.
✍️ ಹರ್ಷ ಬಳ್ಳಮಂಜ

Related posts

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ನಾವೂರು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಅಂತರ್ ಜಿಲ್ಲಾ ಈಜು ಸ್ಪರ್ಧೆಗೆ ಚಾಲನೆ: 20 ಶಾಲೆಯ 200 ಕ್ಕೂ ಅಧಿಕ ಸ್ಪರ್ಧಾಗಳು ಭಾಗಿ

Suddi Udaya

ದೈವ ನರ್ತಕ ಡಾ.ರವೀಶ್ ಪಡುಮಲೆಯವರಿಗೆ ಬಂಬ್ರಾಣ‌ ಮುಗೇರ್ ತರವಾಡು ಮನೆಯಲ್ಲಿ ಗೌರವ ಸನ್ಮಾನ

Suddi Udaya

ಬಾನಂಗಳದಲ್ಲಿ ಗೋಚರಿಸಿದ ಸೂಪರ್ ಬ್ಲೂಮೂನ್ ಸೆರೆಹಿಡಿದ ಅಂಡಿಂಜೆಯ ಛಾಯಾಗ್ರಹಕ ಚಂದ್ರಹಾಸ ಹೆಬ್ಬಾರ್

Suddi Udaya

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಗೇರುಕಟ್ಟೆಯ ಅದೀಲ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya
error: Content is protected !!