July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ ಹತ್ತನೇ ವರ್ಷದ ವಾರ್ಷಿಕೋತ್ಸವ

ಮಡಂತ್ಯಾರು ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ ಹತ್ತನೇ ವರ್ಷದ ವಾರ್ಷಿಕೋತ್ಸವ, ಆಟೋಟ ಸ್ಪರ್ಧೆಗಳು ಜ 4 ರಂದು ನಡೆಯಿತು.

ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ ಪುಷ್ಪಗಿರಿ ಮಾತನಾಡಿ ಸಂಘಟನೆಯು ಇನ್ನಷ್ಟು ಸಮಾಜ ಸೇವೆಯಲ್ಲಿ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಇನ್ನಷ್ಟು ಸಂಘಟನೆ ಬಲಪಡಿಸುವಂತೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಯಾದ ಪ್ರಶಾಂತ್ ಎಂ ಪ್ರತಿಮ ನಿಲಯ, ಪಂಚಲಿಂಗೇಶ್ವರ ದೇವಸ್ಥಾನ ಉರುವಾಲು ಇದರ ಆಡಳಿತ ಮೊಕ್ತೇಶರರಾದ ಯೋಗೀಶ್ ಪೂಜಾರಿ ಕಡ್ತಿಲ, ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ರೂಪ ನವೀನ್, ಮಡಂತ್ಯಾರು ಗಣೇಶೋತ್ಸವ ಸಮಿತಿ ಅಧ್ಯಕ್ಷ ಜಯ ಕೆ ಪಾಂಡವರಕಲ್ಲು, ಮಡಂತ್ಯಾರು ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಶೆಟ್ಟಿ ಪದೆಂಜಿಲ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ದೀಕ್ಷಿತ್ ಕೋಟೆ ವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಪುಷ್ಪವತಿ ಭಂಡಾರದ ಕೋಟ್ಯ ಇವರ ಸೇವೆಯನ್ನು ಮೆಚ್ಚಿ ಸನ್ಮಾನಿಸಲಾಯಿತು . ಸಂಗೀತ ಹಾಗೂ ಭರತನಾಟ್ಯ ದಲ್ಲಿ ರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ ಇವರನ್ನು ಸನ್ಮಾನಿಸಲಾಯಿತು. ಆಟೋಟ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು ಮತ್ತು ಸ್ಥಳೀಯ ಪ್ರತಿಭೆಗಳಿಂದ ಮನೋರಂಜನ ಕಾರ್ಯಕ್ರಮ ಹಾಗೂ ವಿಠಲ ನಾಯಕ್ ಕಲ್ಲಡ್ಕ ಇವರಿಂದ ತುಳು ಹಾಸ್ಯ ಸಂಭ್ರಮ ನಡೆಯಿತು. ಸಂಘದ ಕಾರ್ಯದರ್ಶಿಯಾದ ನವೀನ್ ಪಡೀಲ್ ಹಾಗೂ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.
✍️ ಹರ್ಷ ಬಳ್ಳಮಂಜ

Related posts

ಮೇ 15: ವಿದ್ಯುತ್ ನಿಲುಗಡೆ

Suddi Udaya

ಸಾರ್ವಜನಿಕ ಸ್ಥಳಗಳಲ್ಲಿ ಮಚ್ಚು ತೋರಿಸಿ ಬೆದರಿಕೆಯೊಡ್ಡಿದ ಆರೋಪ, ಆನಂದ ಆಚಾರ್ಯ ಎಂಬಾತನ ವಿರುದ್ದ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

9/11 ಪ್ರಮಾಣ ಪತ್ರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಆದೇಶವನ್ನು ರದ್ದುಪಡಿಸಿ ಗ್ರಾ.ಪಂ. ನಲ್ಲಿಯೇ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನವಿ

Suddi Udaya

ಬೆಳಾಲು: ಎರಡು ಗುಂಪುಗಳ ನಡುವೆ ಗಲಾಟೆ: ಪರಸ್ಪರ ಆರೋಪ ಹೊರಿಸಿ ಪೊಲೀಸರಿಗೆ ದೂರು

Suddi Udaya

ಮಚ್ಚಿನ ಪ್ರಾಥಮಿಕ ಶಾಲೆ ಕೆಪಿಎಸ್‌ ಶಾಲೆಯಾಗಿ, ( ಕರ್ನಾಟಕ ಪಬ್ಲಿಕ್ ಸ್ಕೂಲ್) ಮೇಲ್ದರ್ಜೆಗೆ : ಶಾಲಾ ಅಭಿವೃದ್ಧಿ ಸಮಿತಿಯಿಂದ ರಕ್ಷಿತ್ ಶಿವರಾಂ ರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!