24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯಮಟ್ಟದ ಜಿನ ಭಜನಾ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ತೃತೀಯ ಸ್ಥಾನ

ಉಜಿರೆ: ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಉಪಾಧ್ಯಕ್ಷರಾದ ವೀರಾಂಗಣ ಡಿ. ಅನಿತಾ ಸುರೇಂದ್ರ ಕುಮಾರ್ ಅವರ ಪರಿಕಲ್ಪನೆಯ, ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ವೀರ್ ಡಿ. ಸುರೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಮಂಗಳೂರಿನ ಪಿಲಿಕುಳದ ಸ್ಕೌಟ್ ಗೈಡ್ ಭವನದಲ್ಲಿ ಜ. 3 ಮತ್ತು 4ರಂದು ನಡೆದ ಭಾರತೀಯ ಜೈನ್ ಮಿಲನ್ ರಾಜ್ಯ ಮಟ್ಟದ ಜಿನ ಭಜನಾ ಸ್ಪರ್ಧೆಯಲ್ಲಿ ಕಿರಿಯರ ವಿಭಾಗದಲ್ಲಿ ಉಜಿರೆಯ ಹರ್ಷದಾ ತಂಡ ತೃತೀಯ ಸ್ಥಾನ ಪಡೆದಿರುತ್ತಾರೆ. ಈ ತಂಡದಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಅನಿಕ ಜೈನ್ ಹಾಗೂ ಶುಕ್ತಿ ಜೈನ್ ಭಾಗವಹಿಸಿರುತ್ತಾರೆ.

ಉಜಿರೆಯ ತೃಪ್ತ ಕುಮಾರ್ ಜೈನ್ ಸಂಯೋಜಿಸಿದ ವಿಜೇತ ಜಿನಭಜನಾ ತಂಡಗಳಿಗೆ ಸೋನಿಯಾ ಯಶೋವರ್ಮ ರವರು ಮಾರ್ಗದರ್ಶನ ನೀಡಿ, ಅಭಿನಂದಿಸಿರುತ್ತಾರೆ.

ಶಾಲೆಯ ವತಿಯಿಂದ ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದಿಂದ ಅಭಿನಂದಿಸಲಾಯಿತು.

Related posts

ವಿಧಾನಸಭೆ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗೆ ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ನಾಮನಿರ್ದೇಶನ

Suddi Udaya

ಸೆ.19(ನಾಳೆ): ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್‌ ನಿಲುಗಡೆ

Suddi Udaya

ಮುಂಡಾಜೆ: ಭಾರಿ ಮಳೆಗೆ ಕುಸಿದ ಮೋರಿ: ಗುಂಡ ದೈವಸ್ಥಾನದ ಸಂಪರ್ಕ ಕಡಿತ

Suddi Udaya

ಮುಂಡಾಜೆ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆ: ಶ್ರೀ ಮಂ. ಅ. ಪ್ರೌಢಶಾಲೆಯ ಶಿಕ್ಷಕರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!