ಬೆಳ್ತಂಗಡಿ: ಧ.ಮಂ.ಯೋಗ ಮತ್ತು ನೈತಿಕ ಶಿಕ್ಷಣ. ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಜ.2 ರಂದು ಧರ್ಮಸ್ಥಳ ದಲ್ಲಿ ನಡೆದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಅಂಡಿಂಜೆ ಯ 8ನೇ ತರಗತಿಯ ಕು.ಪ್ರಜ್ನಾ ಭಾಗವಹಿಸಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
ಇವರು ಅಂಡಿಂಜೆ ಗ್ರಾಮದ ಪ್ರಭಾಕರ ಹಾಗೂ ಶ್ರೀಮತಿ ಜಲಜ ದಂಪತಿಯ ಪುತ್ರಿಯಾಗಿರುತ್ತಾರೆ.











