ಬೆಳ್ತಂಗಡಿ: ಹಿಂದೂ ಸಂಗಮ ಆಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು ಇದರ ಕಡೆಯಿಂದ ಆಯೋಜನಾ ಸಮಿತಿಯ ಪದಾಧಿಕಾರಿಗಳಿಗೆ ಮತ್ತು ಮಂಡಲ ನಿರ್ವಹಣಾ ತಂಡದ ಪ್ರಮುಖರಗಳಿಗೆ ಪ್ರಶಿಕ್ಷಣ ವರ್ಗ ಮತ್ತು ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಜ. 5ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ಜರುಗಿತು.

ಆಮಂತ್ರಣ ಬಿಡುಗಡೆಯನ್ನು ರೈತ ಬಂಧು ಮಾರುತಿಪುರ ಮಾಲಕ ಉದ್ಯಮಿ ಶಿವಶಂಕರ್ ನಾಯಕ್ ಬಿಡುಗಡೆಗೊಳಿಸಿದರು.
ಈ ವೇಳೆ ಶಾಸಕ ಹರೀಶ್ ಪೂಂಜ, ಹಿಂದೂ ಸಂಗಮ ಆಯೋಜನ ಸಮಿತಿ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಅಜಿತ್ ಜಿ ಶೆಟ್ಟಿ, ಸುಳ್ಯದ ಸಾಮಾಜಿಕ ಕಾರ್ಯಕರ್ತರಾದ ಸುಭಾಷ್ ಕಳೆಂಜ, ಬೆಳ್ತಂಗಡಿ ತಾಲೂಕಿನ ಸಾಮಾಜಿಕ ಮುಂದಾಳು ಗಣೇಶ್ ಕಾಂತಾಜೆ, ಆಯೋಜನ ಸಮಿತಿಯ ಉಪಾಧ್ಯಕ್ಷೆ ಶ್ರೀಮತಿ ಜಯ ಅನಂತ್ ಕೃಷ್ಣ ಭಟ್ ಉಪಸ್ಥಿತರಿದ್ದರು.

ಹಿಂದೂ ಸಂಗಮ ಆಯೋಜನ ಸಮಿತಿಯ ಸಂಯೋಜಕ ವಕೀಲರಾದ ಅನಿಲ್ ಕುಮಾರ್ ಯು ಸ್ವಾಗತಿಸಿ, ಜೊತೆ ಕಾರ್ಯದರ್ಶಿ ತುಕಾರಾಂ ಬಿ. ಧನ್ಯವಾದವಿತ್ತರು.
ಹಿಂದೂ ಸಂಗಮ ಆಯೋಜನ ಸಮಿತಿಯ ಬೆಳ್ತಂಗಡಿ ತಾಲೂಕಿನ ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು ಮಂಡಲ ನಿರ್ವಹಣಾ ತಂಡದ ಸಂಯೋಜಕರು, ತಾಲೂಕಿನ ದೈವಸ್ಥಾನ, ದೇವಸ್ಥಾನ, ಭಜನಾ ಮಂಡಳಿಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಹಿಂದೂ ಸಮಾಜದ ಮುಂದಾಳುಗಳು ಉಪಸ್ಥಿತರಿದ್ದರು.











