23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಹಿಂದೂ ಸಂಗಮ ಆಯೋಜನಾ ಸಮಿತಿಯಿಂದ ಪ್ರಶಿಕ್ಷಣ ವರ್ಗ ಮತ್ತು ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ

ಬೆಳ್ತಂಗಡಿ: ಹಿಂದೂ ಸಂಗಮ ಆಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು ಇದರ ಕಡೆಯಿಂದ ಆಯೋಜನಾ ಸಮಿತಿಯ ಪದಾಧಿಕಾರಿಗಳಿಗೆ ಮತ್ತು ಮಂಡಲ ನಿರ್ವಹಣಾ ತಂಡದ ಪ್ರಮುಖರಗಳಿಗೆ ಪ್ರಶಿಕ್ಷಣ ವರ್ಗ ಮತ್ತು ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಜ. 5ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ಜರುಗಿತು.

ಆಮಂತ್ರಣ ಬಿಡುಗಡೆಯನ್ನು ರೈತ ಬಂಧು ಮಾರುತಿಪುರ ಮಾಲಕ ಉದ್ಯಮಿ ಶಿವಶಂಕರ್ ನಾಯಕ್ ಬಿಡುಗಡೆಗೊಳಿಸಿದರು.

ಈ ವೇಳೆ ಶಾಸಕ ಹರೀಶ್ ಪೂಂಜ, ಹಿಂದೂ ಸಂಗಮ ಆಯೋಜನ ಸಮಿತಿ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಅಜಿತ್ ಜಿ ಶೆಟ್ಟಿ, ಸುಳ್ಯದ ಸಾಮಾಜಿಕ ಕಾರ್ಯಕರ್ತರಾದ ಸುಭಾಷ್ ಕಳೆಂಜ, ಬೆಳ್ತಂಗಡಿ ತಾಲೂಕಿನ ಸಾಮಾಜಿಕ ಮುಂದಾಳು ಗಣೇಶ್ ಕಾಂತಾಜೆ, ಆಯೋಜನ ಸಮಿತಿಯ ಉಪಾಧ್ಯಕ್ಷೆ ಶ್ರೀಮತಿ ಜಯ ಅನಂತ್ ಕೃಷ್ಣ ಭಟ್ ಉಪಸ್ಥಿತರಿದ್ದರು.

ಹಿಂದೂ ಸಂಗಮ ಆಯೋಜನ ಸಮಿತಿಯ ಸಂಯೋಜಕ ವಕೀಲರಾದ ಅನಿಲ್ ಕುಮಾರ್ ಯು ಸ್ವಾಗತಿಸಿ, ಜೊತೆ ಕಾರ್ಯದರ್ಶಿ ತುಕಾರಾಂ ಬಿ. ಧನ್ಯವಾದವಿತ್ತರು.

ಹಿಂದೂ ಸಂಗಮ ಆಯೋಜನ ಸಮಿತಿಯ ಬೆಳ್ತಂಗಡಿ ತಾಲೂಕಿನ ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು ಮಂಡಲ ನಿರ್ವಹಣಾ ತಂಡದ ಸಂಯೋಜಕರು, ತಾಲೂಕಿನ ದೈವಸ್ಥಾನ, ದೇವಸ್ಥಾನ, ಭಜನಾ ಮಂಡಳಿಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಹಿಂದೂ ಸಮಾಜದ ಮುಂದಾಳುಗಳು ಉಪಸ್ಥಿತರಿದ್ದರು.

Related posts

ಕೊಕ್ಕಡ ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಇದರ 8 ನೇ ವಾರ್ಷಿಕ ಹಾಗೂ 3 ನೇ ಸನದುದಾನ ಮಹಾ ಸಮ್ಮೇಳನ

Suddi Udaya

ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಸನ್ ರೈಸ್ ಡೇ ಹಾಗೂ ಸ್ಕಾಪ್೯ ಡೇ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮಹಾದ್ವಾರ ಲೋಕಾರ್ಪಣೆ: ರೂ 11 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಮಹಾದ್ವಾರ, ಶಾಸಕ ಹರೀಶ್ ಪೂಂಜರವರಿಂದ ಉದ್ಘಾಟನೆ

Suddi Udaya

ತೋಟತ್ತಾಡಿಯಲ್ಲಿ ಗೇರು ತೋಟಕ್ಕೆ ಬೆಂಕಿ

Suddi Udaya

ಬೆಳ್ತಂಗಡಿ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ವಿಶ್ವ ಸ್ಕಾರ್ಪ್ ದಿನಾಚರಣೆ ಹಾಗೂ ಸನ್ ರೈಸ್ ದಿನಾಚರಣೆ

Suddi Udaya
error: Content is protected !!